AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರದಿಂದ ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Chikkamagaluru: ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದ ಸಚಿವೆ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 21, 2023 | 9:37 AM

Share

ಚಿಕ್ಕಮಗಳೂರು: ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಆವಾಗ ಸಗಣಿ ತುಂಬಿತ್ತಾ?, ಕೇಂದ್ರದ ಅಕ್ಕಿ ಸೇರಿ ರಾಜ್ಯದ ಜನರಿಗೆ ಒಟ್ಟು 15 ಕೆಜಿ ಅಕ್ಕಿ ಕೊಡಿ. ಚುನಾವಣೆ ಗೆಲ್ಲಲು ಕಾಂಗ್ರೆಸ್​ನವರು ಸುಳ್ಳು ಭರವಸೆ ಕೊಟ್ಟು ಆಸೆ ತೋರಿಸಿದ್ದಾರೆ. ಸಿದ್ದರಾಮಯ್ಯನವರೇ ಬೇಜವಾಬ್ದಾರಿ ಹೇಳಿಕೆ ವಾಪಸ್​ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಗೆಲ್ಲಲು ಸುಳ್ಳು ಗ್ಯಾರಂಟಿ ಘೋಷಣೆ ಮಾಡಿದ್ರಿ, ಮಹಿಳೆಯರು ಬಸ್​​ ಪಾಸ್ ಪಡೆಯಲು ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ. ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ. ಹಾಗಾದರೆ ನೀವು ಗ್ಯಾರಂಟಿ ಕಾರ್ಡ್ ಯಾಕೆ ವಿತರಣೆ ಮಾಡಿದ್ದೀರಿ. ಬೇರೆ ರಾಜ್ಯ, ನಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸಿ ರಾಜ್ಯದ ಜನರಿಗೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಉಚಿತ ಅಕ್ಕಿ ಕೊಟ್ಟೇ ಕೊಡುತ್ತೇವೆ; ಎಲ್ಲಿಂದ ಖರೀದಿ ಎಂಬ ಮಾಹಿತಿ ನೀಡಿದ ಸಚಿವ ಕೆಹೆಚ್ ಮುನಿಯಪ್ಪ

ನಿಮ್ಮ ಗ್ಯಾರೆಂಟಿ ಯೋಜನೆಗಳನ್ನ ಘೋಷಣೆ ಮಾಡಿದಾಗಲೇ ನಾವು ಅಂದೆ ಕೇಳಿದ್ವಿ, ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು, ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಯೋಜನೆಗಳನ್ನು ಹಂಚಿದ್ದೀರಾ, ಬಫರ್ ಸ್ಟಾಕ್‌ ಇಂದು ಅಕ್ಕಿ ಕೊಡಿ ಅಂತೀರಾ, ಅದು ಇರುವುದು ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಬಳಕೆಗೆಂದು, ಬೇರೆ ರಾಜ್ಯ ಹಾಗೂ‌ ನಮ್ಮ ರಾಜ್ಯದ ರೈತರ ಅಕ್ಕಿ ಖರೀದಿಸಿ ಕೊಡಿ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ