AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರದಿಂದ ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Chikkamagaluru: ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದ ಸಚಿವೆ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 21, 2023 | 9:37 AM

Share

ಚಿಕ್ಕಮಗಳೂರು: ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಆವಾಗ ಸಗಣಿ ತುಂಬಿತ್ತಾ?, ಕೇಂದ್ರದ ಅಕ್ಕಿ ಸೇರಿ ರಾಜ್ಯದ ಜನರಿಗೆ ಒಟ್ಟು 15 ಕೆಜಿ ಅಕ್ಕಿ ಕೊಡಿ. ಚುನಾವಣೆ ಗೆಲ್ಲಲು ಕಾಂಗ್ರೆಸ್​ನವರು ಸುಳ್ಳು ಭರವಸೆ ಕೊಟ್ಟು ಆಸೆ ತೋರಿಸಿದ್ದಾರೆ. ಸಿದ್ದರಾಮಯ್ಯನವರೇ ಬೇಜವಾಬ್ದಾರಿ ಹೇಳಿಕೆ ವಾಪಸ್​ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಗೆಲ್ಲಲು ಸುಳ್ಳು ಗ್ಯಾರಂಟಿ ಘೋಷಣೆ ಮಾಡಿದ್ರಿ, ಮಹಿಳೆಯರು ಬಸ್​​ ಪಾಸ್ ಪಡೆಯಲು ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ. ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ. ಹಾಗಾದರೆ ನೀವು ಗ್ಯಾರಂಟಿ ಕಾರ್ಡ್ ಯಾಕೆ ವಿತರಣೆ ಮಾಡಿದ್ದೀರಿ. ಬೇರೆ ರಾಜ್ಯ, ನಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸಿ ರಾಜ್ಯದ ಜನರಿಗೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಉಚಿತ ಅಕ್ಕಿ ಕೊಟ್ಟೇ ಕೊಡುತ್ತೇವೆ; ಎಲ್ಲಿಂದ ಖರೀದಿ ಎಂಬ ಮಾಹಿತಿ ನೀಡಿದ ಸಚಿವ ಕೆಹೆಚ್ ಮುನಿಯಪ್ಪ

ನಿಮ್ಮ ಗ್ಯಾರೆಂಟಿ ಯೋಜನೆಗಳನ್ನ ಘೋಷಣೆ ಮಾಡಿದಾಗಲೇ ನಾವು ಅಂದೆ ಕೇಳಿದ್ವಿ, ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು, ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಯೋಜನೆಗಳನ್ನು ಹಂಚಿದ್ದೀರಾ, ಬಫರ್ ಸ್ಟಾಕ್‌ ಇಂದು ಅಕ್ಕಿ ಕೊಡಿ ಅಂತೀರಾ, ಅದು ಇರುವುದು ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಬಳಕೆಗೆಂದು, ಬೇರೆ ರಾಜ್ಯ ಹಾಗೂ‌ ನಮ್ಮ ರಾಜ್ಯದ ರೈತರ ಅಕ್ಕಿ ಖರೀದಿಸಿ ಕೊಡಿ ಎಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ