AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿಡಿ ನಡೆ ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ: ಸಚಿವ ಸೋಮಶೇಖರ್‌ ಹೀಗೆ ಹೇಳಿದ್ಯಾಕೆ?

ಜಿಟಿ ದೇವೇಗೌಡ ಜೆಡಿಎಸ್ ನಲ್ಲೇ ಉಳಿದಿರೋದು ರಾಜಕೀಯ ಲೆಕ್ಕಾಚಾರಗಳು ಬದಲಾಗಿವೆ. ಈ ಬಗ್ಗೆ ಇತರೆ ಪಕ್ಷದ ನಾಯಕರು ಅವರದ್ದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡ್ತಿದ್ದಾರೆ.

ಜಿಟಿಡಿ ನಡೆ ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ: ಸಚಿವ ಸೋಮಶೇಖರ್‌ ಹೀಗೆ ಹೇಳಿದ್ಯಾಕೆ?
ST somashekar And GT Devegowda
TV9 Web
| Edited By: |

Updated on:Oct 22, 2022 | 8:14 PM

Share

ಮೈಸೂರು: ಜೆಡಿಎಸ್​ನಿಂದ ಒಂದು ಕಾಲು ಆಚೆ ಇಟ್ಟಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಬಿಜೆಪಿ ಹಾಗೂ ಕಾಂಗ್ರೆಸ್ ಮನೆ ಬಾಗಿಲು ತಟ್ಟಿದ್ದು, ಮುಂದಿನ ಚುನಾವಣೆ ಸಂದರ್ಭದಲ್ಲಿ ಅಂತಿಮವಾಗಿ ಕಾಂಗ್ರೆಸ್ ಇಲ್ಲ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆಗಳು ನಡೆದಿದ್ದವು. ಆದ್ರೆ, ಇದೀಗ ಜಿಟಿಡಿ ಜೆಡಿಎಸ್​ನಲ್ಲೇ ಉಳಿದುಕೊಂಡಿದ್ದಾರೆ. ಜಿ. ಟಿ. ದೇವೇಗೌಡ ಅವರ ರಾಜಕೀಯ ನಡೆಯಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿವೆ.

ಜಿಟಿಡಿ ಜೆಡಿಎಸ್​ನಲ್ಲೇ ಉಳಿದಿದ್ದಕ್ಕೆ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಎಸ್ ಟಿ ಸೋಮಶೇಖರ್, ಜಿ ಟಿ ದೇವೇಗೌಡರ ನಡೆ, ಮೀನಿನ ಹೆಜ್ಜೆ, ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಜಿಟಿಡಿ ಜೆಡಿಎಸ್ ನಲ್ಲೇ ಉಳಿದಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದರು.

ದೊಡ್ಡಗೌಡ್ರ ಪ್ಲಾನ್ ಸಕ್ಸಸ್: ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಬಿಜೆಪಿಗೆ ಜಿಟಿಡಿ ಶಾಕ್!

ಬಿಜೆಪಿಯವರು ಜಿಟಿಡಿ ಅವರನ್ನು ಪಕ್ಷಕ್ಕೆ ಬರುವಂತೆ ಕರೆದಿರಲಿಲ್ಲ.ಕಾಂಗ್ರೆಸ್ ನವರ ಬಗ್ಗೆ ನನಗೆ ಗೊತ್ತಿಲ್ಲ.ಆದರೆ ನಾನಂತೂ ಅವರನ್ನು ಬಿಜೆಪಿಗೆ ಬರುವಂತೆ ಕೋರಿ ಸಂಪರ್ಕ ಮಾಡಿಲ್ಲ.ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲಾ ಶಾಸಕರ ಜೊತೆ ನಾನು ಆತ್ಮೀಯವಾಗಿ ಇದ್ದೇನೆ ಅಷ್ಟೇ ಎಂದು ಹೇಳಿದರು.

ಜೆಡಿಎಸ್ ಶಾಸಕನಾಗಿ ಅವರು ಜೆಡಿಎಸ್ ನಲ್ಲೇ ಉಳಿದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲೂ ಬಿಜೆಪಿಗೆ ನಮಗೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Published On - 8:07 pm, Sat, 22 October 22

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?