AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿಡಿ ನಡೆ ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ: ಸಚಿವ ಸೋಮಶೇಖರ್‌ ಹೀಗೆ ಹೇಳಿದ್ಯಾಕೆ?

ಜಿಟಿ ದೇವೇಗೌಡ ಜೆಡಿಎಸ್ ನಲ್ಲೇ ಉಳಿದಿರೋದು ರಾಜಕೀಯ ಲೆಕ್ಕಾಚಾರಗಳು ಬದಲಾಗಿವೆ. ಈ ಬಗ್ಗೆ ಇತರೆ ಪಕ್ಷದ ನಾಯಕರು ಅವರದ್ದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡ್ತಿದ್ದಾರೆ.

ಜಿಟಿಡಿ ನಡೆ ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ: ಸಚಿವ ಸೋಮಶೇಖರ್‌ ಹೀಗೆ ಹೇಳಿದ್ಯಾಕೆ?
ST somashekar And GT Devegowda
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 22, 2022 | 8:14 PM

Share

ಮೈಸೂರು: ಜೆಡಿಎಸ್​ನಿಂದ ಒಂದು ಕಾಲು ಆಚೆ ಇಟ್ಟಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಬಿಜೆಪಿ ಹಾಗೂ ಕಾಂಗ್ರೆಸ್ ಮನೆ ಬಾಗಿಲು ತಟ್ಟಿದ್ದು, ಮುಂದಿನ ಚುನಾವಣೆ ಸಂದರ್ಭದಲ್ಲಿ ಅಂತಿಮವಾಗಿ ಕಾಂಗ್ರೆಸ್ ಇಲ್ಲ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆಗಳು ನಡೆದಿದ್ದವು. ಆದ್ರೆ, ಇದೀಗ ಜಿಟಿಡಿ ಜೆಡಿಎಸ್​ನಲ್ಲೇ ಉಳಿದುಕೊಂಡಿದ್ದಾರೆ. ಜಿ. ಟಿ. ದೇವೇಗೌಡ ಅವರ ರಾಜಕೀಯ ನಡೆಯಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗಿವೆ.

ಜಿಟಿಡಿ ಜೆಡಿಎಸ್​ನಲ್ಲೇ ಉಳಿದಿದ್ದಕ್ಕೆ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಎಸ್ ಟಿ ಸೋಮಶೇಖರ್, ಜಿ ಟಿ ದೇವೇಗೌಡರ ನಡೆ, ಮೀನಿನ ಹೆಜ್ಜೆ, ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಜಿಟಿಡಿ ಜೆಡಿಎಸ್ ನಲ್ಲೇ ಉಳಿದಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದರು.

ದೊಡ್ಡಗೌಡ್ರ ಪ್ಲಾನ್ ಸಕ್ಸಸ್: ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಬಿಜೆಪಿಗೆ ಜಿಟಿಡಿ ಶಾಕ್!

ಬಿಜೆಪಿಯವರು ಜಿಟಿಡಿ ಅವರನ್ನು ಪಕ್ಷಕ್ಕೆ ಬರುವಂತೆ ಕರೆದಿರಲಿಲ್ಲ.ಕಾಂಗ್ರೆಸ್ ನವರ ಬಗ್ಗೆ ನನಗೆ ಗೊತ್ತಿಲ್ಲ.ಆದರೆ ನಾನಂತೂ ಅವರನ್ನು ಬಿಜೆಪಿಗೆ ಬರುವಂತೆ ಕೋರಿ ಸಂಪರ್ಕ ಮಾಡಿಲ್ಲ.ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲಾ ಶಾಸಕರ ಜೊತೆ ನಾನು ಆತ್ಮೀಯವಾಗಿ ಇದ್ದೇನೆ ಅಷ್ಟೇ ಎಂದು ಹೇಳಿದರು.

ಜೆಡಿಎಸ್ ಶಾಸಕನಾಗಿ ಅವರು ಜೆಡಿಎಸ್ ನಲ್ಲೇ ಉಳಿದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲೂ ಬಿಜೆಪಿಗೆ ನಮಗೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Published On - 8:07 pm, Sat, 22 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ