‘ಬಿಜೆಪಿ ಶಾಸಕರು ಕೂಡ ನಮಸ್ಕಾರ್​ ಸಾಬ್​ ಹೇಳಿಕೆ ವಿವಾದ; ಯುಟರ್ನ್​ ಹೊಡೆದ ಸಚಿವ ಜಮೀರ್

ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan) ​ ನೀಡಿದ್ದ ಹೇಳಿಕೆ, ವಿವಾದ ಆಗುತ್ತಿದ್ದಂತೆ ಯುಟರ್ನ್ ಹೊಡೆದಿದ್ದಾರೆ. ಕಾಂಗ್ರೆಸ್​(Congress) ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವ ಬಗ್ಗೆ ಮಾತಾಡಿದ್ದೇನೆ. ಯಾವುದೇ ವ್ಯಕ್ತಿ, ಪಕ್ಷದ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದ್ದಾರೆ. ಈ ಹಿನ್ನಲೆ ವಿಧಾನಸಭೆಯಲ್ಲಿ ನಾವೆಲ್ಲರೂ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ ಎಂದು ಹೇಳಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

‘ಬಿಜೆಪಿ ಶಾಸಕರು ಕೂಡ ನಮಸ್ಕಾರ್​ ಸಾಬ್​ ಹೇಳಿಕೆ ವಿವಾದ; ಯುಟರ್ನ್​ ಹೊಡೆದ ಸಚಿವ ಜಮೀರ್
ಜಮೀರ್​ ಅಹಮ್ಮದ್​ ಖಾನ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 17, 2023 | 5:07 PM

ಬೆಂಗಳೂರು, ನ.17: ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan) ​ ನೀಡಿದ್ದ ಹೇಳಿಕೆ, ವಿವಾದ ಆಗುತ್ತಿದ್ದಂತೆ ಯುಟರ್ನ್ ಹೊಡೆದಿದ್ದಾರೆ. ಕಾಂಗ್ರೆಸ್​(Congress) ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವ ಬಗ್ಗೆ ಮಾತಾಡಿದ್ದೇನೆ. ಯಾವುದೇ ವ್ಯಕ್ತಿ, ಪಕ್ಷದ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದ್ದಾರೆ. ಈ ಹಿನ್ನಲೆ ವಿಧಾನಸಭೆಯಲ್ಲಿ ನಾವೆಲ್ಲರೂ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಈ ಮೂಲಕ ಉನ್ನತ ಹುದ್ದೆಗೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೇನೆ. ಹಲವು ನಾಯಕರು, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ? ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಜಮೀರ್ ಅಹಮ್ಮದ್ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಜಮೀರ್​ ಹೇಳಿದ್ದೇನು?

ತೆಲಂಗಾಣ ಚುನಾವಣಾ ಅಖಾಡಕ್ಕೆ ಧುಮುಕಿರುವ ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ‘ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ ಬರೊಬ್ಬರಿ 9 ಮುಸ್ಲಿಮರು ಗೆದ್ದಿದ್ದಾರೆ. ಗೆದ್ದಿರುವ ಎಲ್ಲಾ 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದ್ದು, ನನ್ನನ್ನು ಸಚಿವನಾಗಿ ಕೂಡ ಮಾಡಿದೆ. ಜೊತೆಗೆ ಅಲ್ಲದೇ ರಹೀಂ ಖಾನ್​​ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್​​​ ಅವರನ್ನು​​​ ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್​​​​​​​​​ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಮೊದಲ ಬಾರಿಗೆ ಯು.ಟಿ ಖಾದರ್​ ಅವರನ್ನು ವಿಧಾನಸಭಾ ಸ್ಪೀಕರ್​​ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ತೆಲಂಗಾಣ ಚುನಾವಣಾ ಪ್ರಚಾರದ ಭರದಲ್ಲಿ ಜಮೀರ್ ಅಹಮ್ಮದ್​ ಖಾನ್​ ಹೇಳಿದ್ದರು.

ಇದನ್ನೂ ಓದಿ:ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಹೇಳಿಕೆ; ಸದನ, ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ; ಹೆಚ್​​ಡಿಕೆ

ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಚ ಮನಸ್ಥಿತಿಯದ್ದು ಎಂದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್​ ಹೇಳಿರುವುದು ಮೂರ್ಖತನದ ಹೇಳಿಕೆ ಎಂದು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಯು.ಟಿ ಖಾದರ್​​ಗೆ ಕೈಮುಗಿಯುವ ಹಾಗೆ ಮಾಡಿದ್ದೇವೆಂದು ಹೇಳಿದ್ದಾರೆ. ಎಲ್ಲರೂ ಕೈಮುಗಿಯುವುದು ಸಭಾಧ್ಯಕ್ಷರ ಪೀಠಕ್ಕೆ,
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಬಗ್ಗೆ ನನಗೆ ಗೌರವ ಇದೆ. ಆದ್ರೆ, ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಚ ಮನಸ್ಥಿತಿಯದ್ದು, ಕಾಂಗ್ರೆಸ್​ನವರು ಕೋಮುವಾದಿಗಳು, ಇದರ ಪರಿಣಾಮ ಅನುಭವಿಸುತ್ತಾರೆ. ವೋಟ್ ಬ್ಯಾಂಕ್​ಗಾಗಿ ಕಾಂಗ್ರೆಸ್​​ನವರು ಏನು ಬೇಕಾದರೂ ಹೇಳುತ್ತಾರೆ. ಸಚಿವ ಜಮೀರ್ ಅಹ್ಮದ್ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಬೇಕು ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Fri, 17 November 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us