AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವರ್ಷಗಳಿಂದ ದೇಶವನ್ನು ಕಾಂಗ್ರೆಸ್​ ಲೂಟಿ ಮಾಡಿದೆ ಎನ್ನಲು ರಮೇಶ್ ​ಕುಮಾರ್ ಹೇಳಿಕೆಯೇ ಸಾಕ್ಷಿ: ಅಶೋಕ್, ಸುಧಾಕರ್ ವ್ಯಂಗ್ಯ

ಭಾರತದಲ್ಲಿ ಕಾಂಗ್ರೆಸ್​ ಪಕ್ಷದ ಆಡಳಿತ ಇದ್ದ 60 ವರ್ಷಗಳಲ್ಲಿ ಎಷ್ಟೆಲ್ಲಾ ಲೂಟಿ ನಡೆದಿದೆ ಎನ್ನುವುದಕ್ಕೆ ರಮೇಶ್ ಕುಮಾರ್ ಅವರ ಹೇಳಿಕೆಯೇ ಸಾಕ್ಷಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

60 ವರ್ಷಗಳಿಂದ ದೇಶವನ್ನು ಕಾಂಗ್ರೆಸ್​ ಲೂಟಿ ಮಾಡಿದೆ ಎನ್ನಲು ರಮೇಶ್ ​ಕುಮಾರ್ ಹೇಳಿಕೆಯೇ ಸಾಕ್ಷಿ: ಅಶೋಕ್, ಸುಧಾಕರ್ ವ್ಯಂಗ್ಯ
ಕಾಂಗ್ರೆಸ್ ಶಾಸಕ ರಮೇಶ್​ ಕುಮಾರ್ ಮತ್ತು ಸಚಿವ ಆರ್.ಅಶೋಕ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 22, 2022 | 1:42 PM

ಬೆಂಗಳೂರು: ‘ನೆಹರು, ಗಾಂಧಿ ಕುಟುಂಬದ ಹೆಸರು ಹೇಳಿಕೊಂಡು ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ ಎನ್ನುವ ಶ್ರೀನಿವಾಸಪುರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ.ಆರ್.ರಮೇಶ್ ಕುಮಾರ್ (Ramesh Kumar( ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಭಾರತದಲ್ಲಿ ಕಾಂಗ್ರೆಸ್​ ಪಕ್ಷದ ಆಡಳಿತ ಇದ್ದ 60 ವರ್ಷಗಳಲ್ಲಿ ಎಷ್ಟೆಲ್ಲಾ ಲೂಟಿ ನಡೆದಿದೆ ಎನ್ನುವುದಕ್ಕೆ ರಮೇಶ್ ಕುಮಾರ್ ಅವರ ಹೇಳಿಕೆಯೇ ಸಾಕ್ಷಿ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashok) ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಸತ್ಯವನ್ನೇ ಹೇಳಿದ್ದಾರೆ. ಸೋನಿಯಾ ವಿಚಾರಣೆಗೆ ಪೂರಕ ದಾಖಲೆಯನ್ನು ತಮ್ಮ ಹೇಳಿಕೆಯ ಮೂಲಕ ಅವರೇ ಕೊಟ್ಟಿದ್ದಾರೆ ಎಂದರು. ಈ ಮೊದಲು ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್ ಆರೋಪ ಮಾಡಿದ್ದ ನಾಯಕರು ಈಗ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಈ ಹೇಳಿಕೆಯ ಮೂಲಕ ಕಾಂಗ್ರೆಸ್​ನ ಮಾನ-ಮರ್ಯಾದೆ ಬೀದಿಗೆ ಬಂದಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಅಧಿಕಾರ ಕಾಂಗ್ರೆಸ್​ಗೆ ಇಲ್ಲ. ರಮೇಶ್ ಕುಮಾರ್ ಓಪನ್ ಆಗಿಯೇ ಎಲ್ಲವನ್ನೂ ಹೇಳಿದ್ದಾರೆ. ಈಗ ಡಿಬೇಟ್ ಆಗಬೇಕಾಗಿರೋದು ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಕುಮಾರ್ ಮಧ್ಯೆ ಎಂದು ಅವರು ವ್ಯಂಗ್ಯವಾಡಿದರು. ಅವರ ಪಾರ್ಟಿಯಲ್ಲೇ ಬೆಂಕಿ ಹೊತ್ತಿ ಉರಿಯುತ್ತಿದೆ. ಅವರ ಪಾರ್ಟಿಯ ಹೊಡೆದಾಟ ಫೈನಲೈಸ್ ಮಾಡಿಕೊಳ್ಳಲಿ. ರಮೇಶ್ ಕುಮಾರ್ ಹೇಳಿರೋದು ಸತ್ಯ ಅಂತ ಒಪ್ಪಿಕೊಂಡು ಡಿ.ಕೆ.ಶಿವಕುಮಾರ್ ಬರಲಿ. ಆಗ ಬಿಜೆಪಿ ಡಿಬೇಟ್ ಮಾಡಲು ಸಿದ್ಧವಾಗಿದೆ ಎಂದು ಸವಾಲು ಹಾಕಿದರು.

ಕಾಂಗ್ರೆಸ್​ ಆಡಳಿತದ 60 ವರ್ಷದ ನಿಜಬಣ್ಣವನ್ನು ರಮೇಶ್ ಕುಮಾರ್ ಹೊರಹಾಕಿದ್ದಾರೆ. ರಮೇಶ್ ಕುಮಾರ್ ಯಾವಾಗಲೂ ಸತ್ಯವನ್ನೇ ಹೇಳುತ್ತಾರೆ. ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ ಮಾಡಿದ್ದಾರೆ. ಅವರ ಹೇಳಿಕೆಯ ಪ್ರಕಾರ ಮೂರ್ನಾಲ್ಕು ತಲೆಮಾರು ಎಂದು ಲೆಕ್ಕ ಹಾಕಿದರೆ ಅವರು ಶೇ 160ರಷ್ಟು ಕಮಿಷನ್ ಹೊಡೆದಿರುವುದು ಅರ್ಥವಾಗುತ್ತದೆ ಎಂದು ಹೇಳಿದರು.

ರಮೇಶ್ ಕುಮಾರ್ ಕಥೆಗಳು ನಿಮಗೆ ಗೊತ್ತಿಲ್ಲ: ಸುಧಾಕರ್

ಕಾಂಗ್ರೆಸ್​ ನಾಯಕರು ಮಾಡಿಕೊಂಡಿರುವ ಆಸ್ತಿಯ ಬಗ್ಗೆ ರಮೇಶ್ ಕುಮಾರ್​ ಸತ್ಯವನ್ನೇ ಹೇಳಿದ್ದಾರೆ. ಅವರು ಹೇಳಿರುವುದು ಸತ್ಯ, ಅವರು ಸತ್ಯವನ್ನೇ ಹೇಳುತ್ತಾರೆ ಎಂದು ಕೋಲಾರದಲ್ಲಿ ಎಲ್ಲರಿಗೂ ಗೊತ್ತು ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಹೇಳಿದರು. ರಮೇಶ್ ಕುಮಾರ್ ಅವರ ಹಿಂದಿನ ಕಥೆಗಳು ನಿಮಗೆ ಗೊತ್ತಿಲ್ಲ. ಹಿಂದೆ ಲಂಕೇಶ್​ ಪತ್ರಿಕೆಯಲ್ಲಿ ರಮೇಶ್ ಬಗ್ಗೆ ದ್ವಾರಕನಾಥ್ ‘ಮಾಯಲ ಮರಾಠಿ’ ರಮೇಶ್ ಕುಮಾರ್ ಎಂದು ಬರೆದಿದ್ದರು. ‘ಮಾಯಲ ಮರಾಠಿ’ ಎಂದರೆ ಮಂತ್ರವಾದಿ ಎಂದು ಅರ್ಥ. ರಮೇಶ್​ ಕುಮಾರ್ ಅವರ ಬಗ್ಗೆ ಸಾಕಷ್ಟು ಕಥೆಗಳಿವೆ ಬಿಡಿ ಎಂದು ವ್ಯಂಗ್ಯವಾಡಿದರು.

ಈ ದೇಶದಲ್ಲಿ ಭ್ರಷ್ಟಾಚಾರ ಹುಟ್ಟುಹಾಕಿದ್ದೇ ಕಾಂಗ್ರೆಸ್​ನವರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್​​​ಗೆ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್​​ ವಿಚಾರಣೆ ಎದುರಿಸದೇ ಇಂದು ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು. ರಮೇಶ್ ಕುಮಾರ್ ಈಹಿಂದೆ ಎಂತೆಂಥ ನಾಟಕಗಳನ್ನು ಆಡಿದ್ದರು ಎಂದು ನಾನು ಹಿಂದೆಯೇ ವಿವರಿಸಿದ್ದೇನೆ. ದೇಶದಲ್ಲಿ ಯಾವುದೇ ಸ್ಪೀಕರ್ ಮಾಡದಂಥ ಕೆಲಸ ರಮೇಶ್ ಕುಮಾರ್ ಮಾಡಿದ್ದರು ಎಂದು ಟೀಕಿಸಿದರು.

ಸತ್ಯ ಒಪ್ಪಿಕೊಂಡಂತೆ ಆಯ್ತು: ಶಿವರಾಮ್ ಹೆಬ್ಬಾರ್

ರಮೇಶ್ ಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಶಿವರಾಂ ಹೆಬ್ಬಾರ್​, ನನ್ನಷ್ಟು ಬುದ್ಧಿವಂತರು ಬೇರೆ ಯಾರೂ ಇಲ್ಲ ಅಂದುಕೊಂಡಿದ್ದಾರೆ. ಇಂಥ ಹೇಳಿಕೆ ನೀಡುವ ಮೂಲಕ ಆಸ್ತಿ ಮಾಡಿಕೊಂಡಿರುವುದು ಸತ್ಯ ಎಂದು ಅವರೇ ಒಪ್ಪಿಕೊಂಡಂತಾಯ್ತು. ಕಾಂಗ್ರೆಸ್​ನ 3ನೇ ತಲೆಮಾರಿನ ನಾಯಕರಿಂದಲೇ ಇಂತಹ ಹೇಳಿಕೆ ಬಂದಿರುವುದರಿಂದ ಅದನ್ನು ನಂಬಲೇ ಬೇಕಾಗುತ್ತದೆ ಎಂದರು.

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?