AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಬಾಹಿರವಾಗಿ ನಾನು ಕಚೇರಿಯನ್ನು ನಿರ್ಮಿಸಿಲ್ಲ, ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಶಾಸಕ ಹ್ಯಾರಿಸ್ ಪ್ರತಿಕ್ರಿಯೆ

ತಮ್ಮ ವಿರುದ್ಧದ ಆರೋಪ ತಳ್ಳಿಹಾಕಿದ ಶಾಸಕ ಎನ್.ಎ.ಹ್ಯಾರಿಸ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಕಾನೂನು ಬಾಹಿರವಾಗಿ ನಾನು ಕಚೇರಿಯನ್ನು ನಿರ್ಮಿಸಿಲ್ಲ, ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಶಾಸಕ ಹ್ಯಾರಿಸ್ ಪ್ರತಿಕ್ರಿಯೆ
ಶಾಸಕ ಎನ್.ಎ.ಹ್ಯಾರಿಸ್
TV9 Web
| Updated By: Rakesh Nayak Manchi|

Updated on:May 15, 2022 | 5:59 PM

Share

ಬೆಂಗಳೂರು: ರಂಗಮಂದಿರದ ಜಾಗ ಶಾಸಕರ ಕಚೇರಿಯಾಗಿ ಮಾರ್ಪಾಡು ಮಾಡಲಾಗಿದೆ ಎಂಬ ಆರೋಪವನ್ನು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್(N.A.harris) ತಳ್ಳಿಹಾಕಿದ್ದಾರೆ. ಅಲ್ಲದೆ, ಕಾನೂನು ಬಾಹಿರವಾಗಿ ತಾನು ಕಚೇರಿ(Office)ಯನ್ನು ನಿರ್ಮಿಸಿಲ್ಲ, ಯಾವುದೇ ಕಾರಣಕ್ಕೂ ಕಚೇರಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮುಂದೆ ಯಾರೇ ಶಾಸಕರಾದರೂ ಈ ಕಚೇರಿಯನ್ನು ಬಳಕೆ ಮಾಡಬಹುದು. ಮುಂಬರುವ ವರ್ಷ ಬರುವ ಚುನಾವಣೆ(Election) ಹಿನ್ನೆಲೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ದೊಮ್ಮಲೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬಯಲು ರಂಗ ಮಂದಿರವನ್ನು ಶಾಸಕ ಹ್ಯಾರಿಸ್ ಅವರು ಶಾಸಕರ ಕಚೇರಿಯನ್ನಾಗಿ ಬದಲಾಯಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಂಗಮಂದಿರ ನವೀಕರಣಕ್ಕೆ ಬಿಬಿಎಂಪಿ ಇತ್ತೀಚೆಗಷ್ಟೇ 3.1 ಕೋಟಿ ಬಿಡುಗಡೆ ಮಾಡಿತ್ತು. ರಂಗಮಂದಿರದ ಪಕ್ಕದಲ್ಲಿರುವ ಗ್ರಂಥಾಲಯ ಶಿಥಿಲಾವಸ್ಥೆಯಲ್ಲಿರುವುದರಿಂದ ಇದನ್ನು ರಂಗಮಂದಿರದ ಮೊದಲನೇ ಮಹಡಿಗೆ ಶಿಫ್ಟ್ ಮಾಡಲು ಪಾಲಿಕೆ ತಯಾರಿ ನಡೆಸಿದೆ. ಆದರೆ, ಇದನ್ನು ಹ್ಯಾರಿಸ್ ಅವರು ಶಾಸಕರ ಕಚೇರಿಯನ್ನಾಗಿ ಮಾರ್ಪಾಡು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಮ್ಮ ವಿರುದ್ಧದ ಗಂಭೀರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶ್ರೀಶಿವಕುಮಾರ ಸ್ವಾಮೀಜಿ ರಂಗಮಂದಿರ ಜಾಗ ಬೇಸ್ಮೆಂಟ್​ನಲ್ಲಿದೆ. ನನ್ನ ಕಚೇರಿ ಮೊದಲ ಮಹಡಿಯಲ್ಲಿದೆ. ಮುಖ್ಯ ರಸ್ತೆಯಲ್ಲಿ ಗ್ರಂಥಾಲಯವಿದ್ದರೆ ಓದುಗರಿಗೆ ತೊಂದರೆಯಾಗುತ್ತದೆ. ಹೀಗಾಗಿ ವಾರ್ಡ್​ನಲ್ಲಿರುವ ವಾರ್ ರೂಮ್​ಗೆ ಗ್ರಂಥಾಲಯವನ್ನು ಶಿಫ್ಟ್ ಮಾಡುತ್ತೇವೆ. ನನ್ನ ಕ್ಷೇತ್ರದ 7 ವಾರ್ಡ್​ಗಳಲ್ಲಿಯೂ ಶಾಸಕರ ಕಚೇರಿ ಇಲ್ಲ. ದೊಮ್ಮಲೂರು ವಾರ್ಡ್ ನಲ್ಲಿ ನಾಗರೀಕರ ಸಮಸ್ಯೆ ಹೆಚ್ಚು. ಇನ್ನುಮುಂದೆ ಜನರು ಸಮಸ್ಯೆ ಹೇಳಿಕೊಂಡು ನನ್ನ ಬಳಿ ಬರಬೇಕೆಂದಿಲ್ಲ. ಇಲ್ಲಿನ ಕಚೇರಿಗೆ ಬರಬಹುದು ಎಂದರು.

ಶಾಸಕರಿಗೆ ಬಿಬಿಎಂಪಿಯೇ ಕಚೇರಿಯನ್ನು ಮಾಡಿಕೊಡಬೇಕು, ನನ್ನ ಕ್ಷೇತ್ರದಲ್ಲಿ ಎಲ್ಲೂ ಕಚೇರಿ ಇಲ್ಲ. ನನ್ನ ಕಚೇರಿ ಕಾನೂನು ಬಾಹಿರವಾಗಿಲ್ಲ. ನನಗೆ ಆಗದವರು ಬೇಕಂತಲೇ ತಗಾದೆ ತೆಗೆಯುತ್ತಿದ್ದಾರೆ. 2023ರಲ್ಲಿ ಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ. ರಂಗಮಂದಿರ ಬಯಲು ಅವ್ಯವಸ್ಥೆಯ ಆಗರವಾಗಿತ್ತು. ಹೀಗಾಗಿ ಗೇಟ್​ಗೆ ಬೀಗ ಹಾಕಿ ಅವಶ್ಯಕತೆ ಇದ್ದಾಗ ಮಾತ್ರ ತೆರೆಯಲಾಗುತ್ತಿತ್ತು. ನಾನು ಮಾತ್ರವಲ್ಲ, ಮುಂದೆ ಯಾರೇ ಶಾಸಕರಾಗಿ ಬಂದರೂ ಈ ಕಚೇರಿ ಬಳಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Published On - 5:59 pm, Sun, 15 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!