AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಬಾಹಿರವಾಗಿ ನಾನು ಕಚೇರಿಯನ್ನು ನಿರ್ಮಿಸಿಲ್ಲ, ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಶಾಸಕ ಹ್ಯಾರಿಸ್ ಪ್ರತಿಕ್ರಿಯೆ

ತಮ್ಮ ವಿರುದ್ಧದ ಆರೋಪ ತಳ್ಳಿಹಾಕಿದ ಶಾಸಕ ಎನ್.ಎ.ಹ್ಯಾರಿಸ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಕಾನೂನು ಬಾಹಿರವಾಗಿ ನಾನು ಕಚೇರಿಯನ್ನು ನಿರ್ಮಿಸಿಲ್ಲ, ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಶಾಸಕ ಹ್ಯಾರಿಸ್ ಪ್ರತಿಕ್ರಿಯೆ
ಶಾಸಕ ಎನ್.ಎ.ಹ್ಯಾರಿಸ್
TV9 Web
| Edited By: |

Updated on:May 15, 2022 | 5:59 PM

Share

ಬೆಂಗಳೂರು: ರಂಗಮಂದಿರದ ಜಾಗ ಶಾಸಕರ ಕಚೇರಿಯಾಗಿ ಮಾರ್ಪಾಡು ಮಾಡಲಾಗಿದೆ ಎಂಬ ಆರೋಪವನ್ನು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್(N.A.harris) ತಳ್ಳಿಹಾಕಿದ್ದಾರೆ. ಅಲ್ಲದೆ, ಕಾನೂನು ಬಾಹಿರವಾಗಿ ತಾನು ಕಚೇರಿ(Office)ಯನ್ನು ನಿರ್ಮಿಸಿಲ್ಲ, ಯಾವುದೇ ಕಾರಣಕ್ಕೂ ಕಚೇರಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮುಂದೆ ಯಾರೇ ಶಾಸಕರಾದರೂ ಈ ಕಚೇರಿಯನ್ನು ಬಳಕೆ ಮಾಡಬಹುದು. ಮುಂಬರುವ ವರ್ಷ ಬರುವ ಚುನಾವಣೆ(Election) ಹಿನ್ನೆಲೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ದೊಮ್ಮಲೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬಯಲು ರಂಗ ಮಂದಿರವನ್ನು ಶಾಸಕ ಹ್ಯಾರಿಸ್ ಅವರು ಶಾಸಕರ ಕಚೇರಿಯನ್ನಾಗಿ ಬದಲಾಯಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಂಗಮಂದಿರ ನವೀಕರಣಕ್ಕೆ ಬಿಬಿಎಂಪಿ ಇತ್ತೀಚೆಗಷ್ಟೇ 3.1 ಕೋಟಿ ಬಿಡುಗಡೆ ಮಾಡಿತ್ತು. ರಂಗಮಂದಿರದ ಪಕ್ಕದಲ್ಲಿರುವ ಗ್ರಂಥಾಲಯ ಶಿಥಿಲಾವಸ್ಥೆಯಲ್ಲಿರುವುದರಿಂದ ಇದನ್ನು ರಂಗಮಂದಿರದ ಮೊದಲನೇ ಮಹಡಿಗೆ ಶಿಫ್ಟ್ ಮಾಡಲು ಪಾಲಿಕೆ ತಯಾರಿ ನಡೆಸಿದೆ. ಆದರೆ, ಇದನ್ನು ಹ್ಯಾರಿಸ್ ಅವರು ಶಾಸಕರ ಕಚೇರಿಯನ್ನಾಗಿ ಮಾರ್ಪಾಡು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಮ್ಮ ವಿರುದ್ಧದ ಗಂಭೀರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶ್ರೀಶಿವಕುಮಾರ ಸ್ವಾಮೀಜಿ ರಂಗಮಂದಿರ ಜಾಗ ಬೇಸ್ಮೆಂಟ್​ನಲ್ಲಿದೆ. ನನ್ನ ಕಚೇರಿ ಮೊದಲ ಮಹಡಿಯಲ್ಲಿದೆ. ಮುಖ್ಯ ರಸ್ತೆಯಲ್ಲಿ ಗ್ರಂಥಾಲಯವಿದ್ದರೆ ಓದುಗರಿಗೆ ತೊಂದರೆಯಾಗುತ್ತದೆ. ಹೀಗಾಗಿ ವಾರ್ಡ್​ನಲ್ಲಿರುವ ವಾರ್ ರೂಮ್​ಗೆ ಗ್ರಂಥಾಲಯವನ್ನು ಶಿಫ್ಟ್ ಮಾಡುತ್ತೇವೆ. ನನ್ನ ಕ್ಷೇತ್ರದ 7 ವಾರ್ಡ್​ಗಳಲ್ಲಿಯೂ ಶಾಸಕರ ಕಚೇರಿ ಇಲ್ಲ. ದೊಮ್ಮಲೂರು ವಾರ್ಡ್ ನಲ್ಲಿ ನಾಗರೀಕರ ಸಮಸ್ಯೆ ಹೆಚ್ಚು. ಇನ್ನುಮುಂದೆ ಜನರು ಸಮಸ್ಯೆ ಹೇಳಿಕೊಂಡು ನನ್ನ ಬಳಿ ಬರಬೇಕೆಂದಿಲ್ಲ. ಇಲ್ಲಿನ ಕಚೇರಿಗೆ ಬರಬಹುದು ಎಂದರು.

ಶಾಸಕರಿಗೆ ಬಿಬಿಎಂಪಿಯೇ ಕಚೇರಿಯನ್ನು ಮಾಡಿಕೊಡಬೇಕು, ನನ್ನ ಕ್ಷೇತ್ರದಲ್ಲಿ ಎಲ್ಲೂ ಕಚೇರಿ ಇಲ್ಲ. ನನ್ನ ಕಚೇರಿ ಕಾನೂನು ಬಾಹಿರವಾಗಿಲ್ಲ. ನನಗೆ ಆಗದವರು ಬೇಕಂತಲೇ ತಗಾದೆ ತೆಗೆಯುತ್ತಿದ್ದಾರೆ. 2023ರಲ್ಲಿ ಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ. ರಂಗಮಂದಿರ ಬಯಲು ಅವ್ಯವಸ್ಥೆಯ ಆಗರವಾಗಿತ್ತು. ಹೀಗಾಗಿ ಗೇಟ್​ಗೆ ಬೀಗ ಹಾಕಿ ಅವಶ್ಯಕತೆ ಇದ್ದಾಗ ಮಾತ್ರ ತೆರೆಯಲಾಗುತ್ತಿತ್ತು. ನಾನು ಮಾತ್ರವಲ್ಲ, ಮುಂದೆ ಯಾರೇ ಶಾಸಕರಾಗಿ ಬಂದರೂ ಈ ಕಚೇರಿ ಬಳಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಕಚೇರಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Published On - 5:59 pm, Sun, 15 May 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು