AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರ ಜತೆ ಶಾಸಕ ಆರ್ ಅಶೋಕ್ ಚರ್ಚೆ: ಕಾಂಗ್ರೆಸ್​ಗೆ ಸಾಲು ಸಾಲು ಪ್ರಶ್ನೆ

ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ವಿಚಾರವಾಗಿ ಗುರುವಾರ ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ನಮ್ಮ ಹೋರಾಟಕ್ಕೆ ಸಹಕಾರ ನೀಡುವಂತೆ ಗುತ್ತಿಗೆದಾರರಿಂದ ಮನವಿ ಮಾಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಅಶೋಕ್ ಹನ್ನೊಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಜತೆ ಶಾಸಕ ಆರ್ ಅಶೋಕ್ ಚರ್ಚೆ: ಕಾಂಗ್ರೆಸ್​ಗೆ ಸಾಲು ಸಾಲು ಪ್ರಶ್ನೆ
ಶಾಸಕ ಆರ್​. ಅಶೋಕ್
ಸುನಿಲ್​ ಎಮ್​ ಹೆಚ್​
| Edited By: |

Updated on:Aug 10, 2023 | 3:03 PM

Share

ಬೆಂಗಳೂರು, ಆಗಸ್ಟ್​ 10: ನಮ್ಮ ಮೇಲೆ 40% ಅಂತ ಸುಳ್ಳು, ನಿರಾಧಾರ ಆರೋಪ ಮಾಡಿ ಅಧಿಕಾರಕ್ಕೆ ಬಂದ್ದರಲ್ಲಾ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು ಎಂದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್​​. ಅಶೋಕ್ (Mla R Ashoka)​ ಪ್ರಶ್ನೆ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ಹಿನ್ನೆಲೆ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್​​. ಅಶೋಕ್ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್​ಗೆ ಶಾಸಕ ಆರ್​​. ಅಶೋಕ್ ಪ್ರಶ್ನೆ

  • ನೀವು ಕಮಿಷನ್ ಕೇಳಿಲ್ಲ ಅಂದರೆ ಗುತ್ತಿಗೆದಾರರು ಅಜ್ಜಯ್ಯನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಿ ಅಂತ ಸವಾಲು ಹಾಕಿದ್ದಾರೆ. ಈ ಸವಾಲನ್ನು ಒಪ್ಪಿಕೊಂಡಿಲ್ಲ ಯಾಕೆ?
  • ಕಮಿಷನ್ ದಂದೆ ಶುರುಮಾಡಿರುವುದು ಲೋಕಸಭೆ ಚುನಾವಣೆಗೆ ಫಂಡ್‌ ಸಂಗ್ರಹಕ್ಕಾ?
  • ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುವುದಾಗಿ ವಾಗ್ದಾನ ಮಾಡಿ ಅಧಿಕಾರ ಹಿಡಿದ ನೀವು ಈಗ ಅವರ ಕಡೆಗಣನೆ ಮಾಡುತ್ತಿರುವುದು ಎಷ್ಟು ಸರಿ?
  • ಬಿಬಿಎಂಪಿಯಲ್ಲಿ 2019-2023 ರವರೆಗೆ ನಡೆದಿರುವ ಕಾಮಗಾರಿಗಳನ್ನು ಮಾತ್ರ ತನಿಖೆ ಮಾಡ್ತಿದ್ದೀರಿ, ನೀವು ಪ್ರಾಮಾಣಿಕರಾಗಿದ್ದರೆ 2013 ರಿಂದಲೂ ತನಿಖೆ ಮಾಡಬಹುದಲ್ಲಾ?
  • ಗುತ್ತಿಗೆದಾರರೆಲ್ಲರೂ ಕಳ್ಳರಾದರೆ, 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಬಳುವಳಿಗರ ಇವರು?
  • ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರಾಂಡ್ ಬೆಂಗಳೂರು ಕಥೆ ಏನು?
  •  300 ಜನ ಗುತ್ತಿಗೆದಾರರು ದಯಾ ಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ, ಕಾಂಗ್ರೆಸ್‌ ಉತ್ತರ ಏನು?
  • ದೆಹಲಿಯಲ್ಲಿ ಮಂತ್ರಿಗಳ ಕರೆಸಿ ಸಭೆ ಮಾಡಿದ್ದು ಲೋಕಸಭಾ ಸೀಟ್ ಗೆಲ್ಲಿಸೋದಕ್ಕೋ ಅಥವಾ ಸೂಟ್‌ಕೇಸ್ ತುಂಬಿಸೋಕ್ಕೋ?
  • ಡಿ ಕೆ ಶಿವಕುಮಾರ್ ಅವರೇ ನಿಮ್ಮದು ಬ್ರಾಂಡ್ ಬೆಂಗಳೂರೋ ಅಥವಾ ಬ್ಲಾಕ್ ಬೆಂಗಳೂರೋ?
  • ಸಿಎಂ ಹಣ ಬಿಡುಗಡೆ ಮಾಡಿದ್ರೆ, ಡಿಸಿಎಂ ತಡೆ ಹಿಡಿದಿದ್ದಾರೆ ಹಾಗಾದರೆ ಹಣ ಬಿಡುಗಡೆ ಮಾಡಲು ಸಿ ಎಂ ಗೆ ವೇಣುಗೋಪಾಲ್ ಸೂಚನೆ ನೀಡಿದ್ರೆ ಸುರ್ಜೆವಾಲ ತಡೆನೀಡಲು ಸೂಚನೆ ನೀಡಿದ್ರಾ? ಹೀಗೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶುರುವಾಡಿದ್ದ ರೀತಿಯಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ

ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಶಾಸಕ ಆರ್​.ಅಶೋಕ್​ ಕಾಂಗ್ರೆಸ್​ನವರು ನಾವು ಒಂದು ರುಪಾಯಿನೂ ತಿಂದಿಲ್ಲ ಎನ್ನುತ್ತಾರೆ. 2 ತಿಂಗಳಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವರು 26 ಕಂಡಿಷನ್ ಹಾಕಿದ್ದಾರೆ. ಗಮನಕ್ಕೆ ತರದೆ ವರ್ಗಾವಣೆ ಮಾಡುವಂತಿಲ್ಲ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ನಾನು ಕೂಡ 4 ಬಾರಿ ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದೇನೆ. ಒಂದು ಬಾರಿಯೂ ಕೂಡ ಹೀಗೆ ನಡೆದುಕೊಂಡಿಲ್ಲ. ಲೋಕಸಭಾ ಚುನಾವಣೆಗೆ ಕರ್ನಾಟಕವನ್ನು ಲೂಟಿ ಮಾಡ್ತಿದ್ದೀರಾ? ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ತಿದ್ದಾರೆಂದು ಅಮಿತ್​ ಶಾ ಹೇಳಿದ್ದರು. ಅದೇ ರೀತಿ ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿನವರು ಸತ್ಯ ಹರಿಶ್ಚಂದ್ರರೇ?

ಹೊಸ ಸರಕಾರ ಬಂದಾಗ 6 ತಿಂಗಳು ವಿರೋಧ ಪಕ್ಷ, ಜನರು ಮಾತನಾಡುವುದಿಲ್ಲ. ಮಾಧ್ಯಮದವರು ಅವರ ತಂಟೆಗೆ ಹೋಗುವುದಿಲ್ಲ. ಇಲ್ಲಿ ಬಂದು ಎರಡೇ ತಿಂಗಳಿಗೆ ಹಗರಣಗಳೇ (ಸ್ಕ್ಯಾಂಡಲ್) ಹೆಚ್ಚುತ್ತಿದೆ. ದಿನನಿತ್ಯ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಟೀಕಿಸಿದರು. ಹಲವು ಸಚಿವರ ವಿರುದ್ಧ ಕಮಿಷನ್ ಆರೋಪ ಬಂದಿದೆ ಎಂದು ಅಶೋಕ್ ಅವರು ಆಕ್ಷೇಪಿಸಿದರು. ನೀವೇನು ಸತ್ಯಹರಿಶ್ಚಂದ್ರರೇ? 2013ರಿಂದ ತನಿಖೆ ನಡೆಸಿ ಎಂದು ಸವಾಲೆಸೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:54 pm, Thu, 10 August 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ