AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರ ಜತೆ ಶಾಸಕ ಆರ್ ಅಶೋಕ್ ಚರ್ಚೆ: ಕಾಂಗ್ರೆಸ್​ಗೆ ಸಾಲು ಸಾಲು ಪ್ರಶ್ನೆ

ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ವಿಚಾರವಾಗಿ ಗುರುವಾರ ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ನಮ್ಮ ಹೋರಾಟಕ್ಕೆ ಸಹಕಾರ ನೀಡುವಂತೆ ಗುತ್ತಿಗೆದಾರರಿಂದ ಮನವಿ ಮಾಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಅಶೋಕ್ ಹನ್ನೊಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಜತೆ ಶಾಸಕ ಆರ್ ಅಶೋಕ್ ಚರ್ಚೆ: ಕಾಂಗ್ರೆಸ್​ಗೆ ಸಾಲು ಸಾಲು ಪ್ರಶ್ನೆ
ಶಾಸಕ ಆರ್​. ಅಶೋಕ್
Sunil MH
| Edited By: |

Updated on:Aug 10, 2023 | 3:03 PM

Share

ಬೆಂಗಳೂರು, ಆಗಸ್ಟ್​ 10: ನಮ್ಮ ಮೇಲೆ 40% ಅಂತ ಸುಳ್ಳು, ನಿರಾಧಾರ ಆರೋಪ ಮಾಡಿ ಅಧಿಕಾರಕ್ಕೆ ಬಂದ್ದರಲ್ಲಾ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು ಎಂದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್​​. ಅಶೋಕ್ (Mla R Ashoka)​ ಪ್ರಶ್ನೆ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ಹಿನ್ನೆಲೆ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್​​. ಅಶೋಕ್ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್​ಗೆ ಶಾಸಕ ಆರ್​​. ಅಶೋಕ್ ಪ್ರಶ್ನೆ

  • ನೀವು ಕಮಿಷನ್ ಕೇಳಿಲ್ಲ ಅಂದರೆ ಗುತ್ತಿಗೆದಾರರು ಅಜ್ಜಯ್ಯನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಿ ಅಂತ ಸವಾಲು ಹಾಕಿದ್ದಾರೆ. ಈ ಸವಾಲನ್ನು ಒಪ್ಪಿಕೊಂಡಿಲ್ಲ ಯಾಕೆ?
  • ಕಮಿಷನ್ ದಂದೆ ಶುರುಮಾಡಿರುವುದು ಲೋಕಸಭೆ ಚುನಾವಣೆಗೆ ಫಂಡ್‌ ಸಂಗ್ರಹಕ್ಕಾ?
  • ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುವುದಾಗಿ ವಾಗ್ದಾನ ಮಾಡಿ ಅಧಿಕಾರ ಹಿಡಿದ ನೀವು ಈಗ ಅವರ ಕಡೆಗಣನೆ ಮಾಡುತ್ತಿರುವುದು ಎಷ್ಟು ಸರಿ?
  • ಬಿಬಿಎಂಪಿಯಲ್ಲಿ 2019-2023 ರವರೆಗೆ ನಡೆದಿರುವ ಕಾಮಗಾರಿಗಳನ್ನು ಮಾತ್ರ ತನಿಖೆ ಮಾಡ್ತಿದ್ದೀರಿ, ನೀವು ಪ್ರಾಮಾಣಿಕರಾಗಿದ್ದರೆ 2013 ರಿಂದಲೂ ತನಿಖೆ ಮಾಡಬಹುದಲ್ಲಾ?
  • ಗುತ್ತಿಗೆದಾರರೆಲ್ಲರೂ ಕಳ್ಳರಾದರೆ, 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಬಳುವಳಿಗರ ಇವರು?
  • ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರಾಂಡ್ ಬೆಂಗಳೂರು ಕಥೆ ಏನು?
  •  300 ಜನ ಗುತ್ತಿಗೆದಾರರು ದಯಾ ಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ, ಕಾಂಗ್ರೆಸ್‌ ಉತ್ತರ ಏನು?
  • ದೆಹಲಿಯಲ್ಲಿ ಮಂತ್ರಿಗಳ ಕರೆಸಿ ಸಭೆ ಮಾಡಿದ್ದು ಲೋಕಸಭಾ ಸೀಟ್ ಗೆಲ್ಲಿಸೋದಕ್ಕೋ ಅಥವಾ ಸೂಟ್‌ಕೇಸ್ ತುಂಬಿಸೋಕ್ಕೋ?
  • ಡಿ ಕೆ ಶಿವಕುಮಾರ್ ಅವರೇ ನಿಮ್ಮದು ಬ್ರಾಂಡ್ ಬೆಂಗಳೂರೋ ಅಥವಾ ಬ್ಲಾಕ್ ಬೆಂಗಳೂರೋ?
  • ಸಿಎಂ ಹಣ ಬಿಡುಗಡೆ ಮಾಡಿದ್ರೆ, ಡಿಸಿಎಂ ತಡೆ ಹಿಡಿದಿದ್ದಾರೆ ಹಾಗಾದರೆ ಹಣ ಬಿಡುಗಡೆ ಮಾಡಲು ಸಿ ಎಂ ಗೆ ವೇಣುಗೋಪಾಲ್ ಸೂಚನೆ ನೀಡಿದ್ರೆ ಸುರ್ಜೆವಾಲ ತಡೆನೀಡಲು ಸೂಚನೆ ನೀಡಿದ್ರಾ? ಹೀಗೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶುರುವಾಡಿದ್ದ ರೀತಿಯಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ

ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಶಾಸಕ ಆರ್​.ಅಶೋಕ್​ ಕಾಂಗ್ರೆಸ್​ನವರು ನಾವು ಒಂದು ರುಪಾಯಿನೂ ತಿಂದಿಲ್ಲ ಎನ್ನುತ್ತಾರೆ. 2 ತಿಂಗಳಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವರು 26 ಕಂಡಿಷನ್ ಹಾಕಿದ್ದಾರೆ. ಗಮನಕ್ಕೆ ತರದೆ ವರ್ಗಾವಣೆ ಮಾಡುವಂತಿಲ್ಲ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ನಾನು ಕೂಡ 4 ಬಾರಿ ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದೇನೆ. ಒಂದು ಬಾರಿಯೂ ಕೂಡ ಹೀಗೆ ನಡೆದುಕೊಂಡಿಲ್ಲ. ಲೋಕಸಭಾ ಚುನಾವಣೆಗೆ ಕರ್ನಾಟಕವನ್ನು ಲೂಟಿ ಮಾಡ್ತಿದ್ದೀರಾ? ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ತಿದ್ದಾರೆಂದು ಅಮಿತ್​ ಶಾ ಹೇಳಿದ್ದರು. ಅದೇ ರೀತಿ ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿನವರು ಸತ್ಯ ಹರಿಶ್ಚಂದ್ರರೇ?

ಹೊಸ ಸರಕಾರ ಬಂದಾಗ 6 ತಿಂಗಳು ವಿರೋಧ ಪಕ್ಷ, ಜನರು ಮಾತನಾಡುವುದಿಲ್ಲ. ಮಾಧ್ಯಮದವರು ಅವರ ತಂಟೆಗೆ ಹೋಗುವುದಿಲ್ಲ. ಇಲ್ಲಿ ಬಂದು ಎರಡೇ ತಿಂಗಳಿಗೆ ಹಗರಣಗಳೇ (ಸ್ಕ್ಯಾಂಡಲ್) ಹೆಚ್ಚುತ್ತಿದೆ. ದಿನನಿತ್ಯ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಟೀಕಿಸಿದರು. ಹಲವು ಸಚಿವರ ವಿರುದ್ಧ ಕಮಿಷನ್ ಆರೋಪ ಬಂದಿದೆ ಎಂದು ಅಶೋಕ್ ಅವರು ಆಕ್ಷೇಪಿಸಿದರು. ನೀವೇನು ಸತ್ಯಹರಿಶ್ಚಂದ್ರರೇ? 2013ರಿಂದ ತನಿಖೆ ನಡೆಸಿ ಎಂದು ಸವಾಲೆಸೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:54 pm, Thu, 10 August 23

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ