AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೇಳಲು ಆರಂಭವಾಗಿತ್ತು. ಇದೀಗ, ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕಗೆ ಸಿಗುತ್ತಿದ್ದಂತೆ ಎದ್ದಿದ್ದ ಅಸಮಾಧಾನ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕುಮಾರಸ್ವಾಮಿ ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್
ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Rakesh Nayak Manchi

Updated on: Nov 18, 2023 | 2:06 PM

Share

ಕಾರವಾರ, ನ.18: ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಭುಗಿಲೆದ್ದಿದ್ದ ಅಸಮಾಧಾನ ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕ ಅವರ ಪಾಲಾಗುತ್ತಿದ್ದಂತೆ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ಹೆಚ್​.ಡಿ. ಕುಮಾರಸ್ವಾಮಿ (H.D. Kumaraswamy) ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತನಾಡಿದ ಶಿವರಾಮ್ ಹೆಬ್ಬಾರ್, ಕುಮಾರಸ್ವಾಮಿ ಮಾತು ಕೇಳಿದರೆ ನಾವು ಚಿಕ್ಕವರಿದ್ದಾಗ ಗುಡು ಗುಡು ಹೇಳುತ್ತಿದ್ದವರ ಹಾಗೆ ಇದೆ. ಕುಮಾರಸ್ವಾಮಿ ಯಾವಾಗಲೂ ಹೀಗೆ. ಕಳೆದ ಎರಡು ಮೂರು ತಿಂಗಳ ಹಿಂದೆ ಪೆಂಡ್ರೈವ್ ಹಿಡಿದು ತೋರಿಸುತ್ತಿದ್ದರು ಎನ್ನುತ್ತಾ ಹಿಂಗೆ ನೋಡಿ ಅಂತಾ ಕೈ ಮಾಡಿ ವ್ಯಂಗ್ಯವಾಡಿದರು.

ಅಲ್ಲದೆ, ಆ ಪೆಂಡ್ರೈವ್​ನಲ್ಲಿ ಎನಿತ್ತೊ ಗೊತ್ತಿಲ್ಲ. ಆ ಪೆಂಡ್ರೈವ್ ಎಲ್ಲಿ ಹೋಗಿದೆಯೋ ಗೊತ್ತಿಲ್ಲ. ಕುಮಾರಸ್ವಾಮಿ ಪ್ರತಿ ದಿವಸ ಒಂದೊಂದು ಬಾಂಬ್ ಹಾಕುತ್ತಲೇ ಇರುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತನ್ನ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ಯತೀಂದ್ರ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

ನನ್ನ ಅಸಮಾಧಾನ ಏನು ಎಂಬುವುದನ್ನ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ. ನಾನು ಅವತ್ತು ಒಂದು ಮಾತನ್ನು ಹೇಳಿದ್ದೇನೆ, ಇವತ್ತು ಹೇಳುತ್ತಿದ್ದೇನೆ. ನಾನು ಲಿಡರ್ ಬೆಸ್ ಪೊಲಿಟಿಸಿಯನ್ ಅಲ್ಲ, ನಾನು ಕೆಡರ್ ಬೆಸ್ ಪೊಲಿಟಿಸಿಯನ್. ನಾಯಕತ್ವ ಆಧಾರ ಮೇಲೆ ರಾಜಕೀಯ ಮಾಡುತ್ತಿಲ್ಲ. ಜನರ ಜೊತೆಗೆ ಜನರಿಂದ ರಾಜಕೀಯ ಮಾಡುತ್ತಿದ್ದೇನೆ ಎಂದರು.

ನನ್ನ ಭಾವನೆಗಳಿಗೆ ಧಕ್ಕೆ ಬಂದಾಗ ಸಹಿಸಿಕೊಳ್ಳುವುದಿಲ್ಲ, ಸ್ವಾಭಿಮಾನ ಜಿವಂತಿಕೆ ಇಟ್ಟುಕೊಂಡು ಹೊಗಲೇಬೆಕಿತ್ತು. ನನ್ನಂತಹ ರಾಜಕಾರಣಿಗೆ ಇಂತಹದ್ದು ಅವಶ್ಯಕ ಅದಕ್ಕೆ ಹೀಗೆ ಮಾಡಿದ್ದು. ಮುಂದಿನ ಸಭೆಗಳಲ್ಲಿ ಭಾಗವಹಿಸಬೇಕೊ ಬೇಡವೋ ಎಂಬುದನ್ನು ಕಾದು ನೋಡೋಣ. ಈಗಾಲೇ ಎಲ್ಲ ನಿರ್ಧಾರ ಮಾಡುವುದು ಬೇಡ ಮುಂದೆ ಕಾದು ನೋಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ