AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೇಳಲು ಆರಂಭವಾಗಿತ್ತು. ಇದೀಗ, ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕಗೆ ಸಿಗುತ್ತಿದ್ದಂತೆ ಎದ್ದಿದ್ದ ಅಸಮಾಧಾನ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕುಮಾರಸ್ವಾಮಿ ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್
ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
ವಿನಾಯಕ ಬಡಿಗೇರ್​
| Edited By: Rakesh Nayak Manchi|

Updated on: Nov 18, 2023 | 2:06 PM

Share

ಕಾರವಾರ, ನ.18: ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಭುಗಿಲೆದ್ದಿದ್ದ ಅಸಮಾಧಾನ ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕ ಅವರ ಪಾಲಾಗುತ್ತಿದ್ದಂತೆ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ಹೆಚ್​.ಡಿ. ಕುಮಾರಸ್ವಾಮಿ (H.D. Kumaraswamy) ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತನಾಡಿದ ಶಿವರಾಮ್ ಹೆಬ್ಬಾರ್, ಕುಮಾರಸ್ವಾಮಿ ಮಾತು ಕೇಳಿದರೆ ನಾವು ಚಿಕ್ಕವರಿದ್ದಾಗ ಗುಡು ಗುಡು ಹೇಳುತ್ತಿದ್ದವರ ಹಾಗೆ ಇದೆ. ಕುಮಾರಸ್ವಾಮಿ ಯಾವಾಗಲೂ ಹೀಗೆ. ಕಳೆದ ಎರಡು ಮೂರು ತಿಂಗಳ ಹಿಂದೆ ಪೆಂಡ್ರೈವ್ ಹಿಡಿದು ತೋರಿಸುತ್ತಿದ್ದರು ಎನ್ನುತ್ತಾ ಹಿಂಗೆ ನೋಡಿ ಅಂತಾ ಕೈ ಮಾಡಿ ವ್ಯಂಗ್ಯವಾಡಿದರು.

ಅಲ್ಲದೆ, ಆ ಪೆಂಡ್ರೈವ್​ನಲ್ಲಿ ಎನಿತ್ತೊ ಗೊತ್ತಿಲ್ಲ. ಆ ಪೆಂಡ್ರೈವ್ ಎಲ್ಲಿ ಹೋಗಿದೆಯೋ ಗೊತ್ತಿಲ್ಲ. ಕುಮಾರಸ್ವಾಮಿ ಪ್ರತಿ ದಿವಸ ಒಂದೊಂದು ಬಾಂಬ್ ಹಾಕುತ್ತಲೇ ಇರುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತನ್ನ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ಯತೀಂದ್ರ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

ನನ್ನ ಅಸಮಾಧಾನ ಏನು ಎಂಬುವುದನ್ನ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ. ನಾನು ಅವತ್ತು ಒಂದು ಮಾತನ್ನು ಹೇಳಿದ್ದೇನೆ, ಇವತ್ತು ಹೇಳುತ್ತಿದ್ದೇನೆ. ನಾನು ಲಿಡರ್ ಬೆಸ್ ಪೊಲಿಟಿಸಿಯನ್ ಅಲ್ಲ, ನಾನು ಕೆಡರ್ ಬೆಸ್ ಪೊಲಿಟಿಸಿಯನ್. ನಾಯಕತ್ವ ಆಧಾರ ಮೇಲೆ ರಾಜಕೀಯ ಮಾಡುತ್ತಿಲ್ಲ. ಜನರ ಜೊತೆಗೆ ಜನರಿಂದ ರಾಜಕೀಯ ಮಾಡುತ್ತಿದ್ದೇನೆ ಎಂದರು.

ನನ್ನ ಭಾವನೆಗಳಿಗೆ ಧಕ್ಕೆ ಬಂದಾಗ ಸಹಿಸಿಕೊಳ್ಳುವುದಿಲ್ಲ, ಸ್ವಾಭಿಮಾನ ಜಿವಂತಿಕೆ ಇಟ್ಟುಕೊಂಡು ಹೊಗಲೇಬೆಕಿತ್ತು. ನನ್ನಂತಹ ರಾಜಕಾರಣಿಗೆ ಇಂತಹದ್ದು ಅವಶ್ಯಕ ಅದಕ್ಕೆ ಹೀಗೆ ಮಾಡಿದ್ದು. ಮುಂದಿನ ಸಭೆಗಳಲ್ಲಿ ಭಾಗವಹಿಸಬೇಕೊ ಬೇಡವೋ ಎಂಬುದನ್ನು ಕಾದು ನೋಡೋಣ. ಈಗಾಲೇ ಎಲ್ಲ ನಿರ್ಧಾರ ಮಾಡುವುದು ಬೇಡ ಮುಂದೆ ಕಾದು ನೋಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ