AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷರ ನಡುವೆ ಸಮನ್ವಯ ಕೊರತೆ; ಇದನ್ನು ಪ್ರಶ್ನಿಸಿದ್ದು ನಿಜ ಎಂದ ಎಸ್​ಆರ್ ವಿಶ್ವನಾಥ್

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷರ ನಡುವೆ ಸಮನ್ವಯವಾಗಿಲ್ಲ ಎಂದು ಯಲಹಂಕ ಶಾಸಕ ಎಸ್​ಆರ್ ವಿಶ್ವನಾಥ್ ಹೇಳಿದ್ದು, ಇದನ್ನು ಪ್ರಶ್ನಿಸಿದ್ದು ನಿಜ ಎಂದಿದ್ದಾರೆ. ಅಲ್ಲದೆ, ಬುಧವಾರದಂದು ಬೆಳಗಾವಿಯಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಯಲಿದೆ. ವಿಶ್ವನಾಥ್ ಅವರ ನೇತೃತ್ವದಲ್ಲಿ ನಡೆಯಲಿದೆ. ಅಂದೇ ವಿಜಯೇಂದ್ರ ಅವರು ಅವರು ಔತಣ ಕೂಟ ಏರ್ಪಡಿಸಿದ್ದಾರೆ.

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷರ ನಡುವೆ ಸಮನ್ವಯ ಕೊರತೆ; ಇದನ್ನು ಪ್ರಶ್ನಿಸಿದ್ದು ನಿಜ ಎಂದ ಎಸ್​ಆರ್ ವಿಶ್ವನಾಥ್
ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷರ ನಡುವೆ ಸಮನ್ವ ಕೊರತೆಯಾಗಿದೆ ಎಂದ ಶಾಸಕ ಎಸ್​ಆರ್ ವಿಶ್ವನಾಥ್
Follow us
TV9 Web
| Updated By: Rakesh Nayak Manchi

Updated on:Dec 08, 2023 | 7:12 PM

ಬೆಂಗಳೂರು, ಡಿ.8: ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನಡುವೆ ಸಮನ್ವಯವಾಗಿಲ್ಲ. ಇಬ್ಬರ ನಡುವಿನ ಸಮನ್ವಯ ಕೊರತೆ ಬಗ್ಗೆ ಪ್ರಶ್ನಿಸಿದ್ದು ನಿಜ ಎಂದು ಯಲಹಂಕ ಶಾಸಕ ಎಸ್​ಆರ್ ವಿಶ್ವನಾಥ್ (SR Vishwanath) ಹೇಳಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಸದನ ನಡೆಯುತ್ತಿರುವ ಸಂದರ್ಭದಲ್ಲೇ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತನ ರಕ್ಷಣೆ ಹೊಣೆ ನಮ್ಮದು ಎಂದರು.

ನಮ್ಮ ಕಾರ್ಯಕರ್ತರ ರಕ್ಷಣೆಗೆ ನಾವು ಪ್ರಯತ್ನಿಸುತ್ತಿದ್ದೇವೆ. ಸರ್ಕಾರದ ಉತ್ತರಕ್ಕೆ ತೃಪ್ತರಾಗದೆ ಸಭಾತ್ಯಾಗ ಮಾಡಿದ್ದೆವು. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಮಾಹಿತಿಯಿರಲಿಲ್ಲ. ಏಕಾಏಕಿ ಸದನದಿಂದ ಹೊರಬಂದಿದ್ದರಿಂದ ಗೊಂದಲವಾಯಿತು. ನಾವು ಸದನದ ಬಾವಿಗಿಳಿದು ಧರಣಿ ಮಾಡುತ್ತೇವೆ ಎಂದುಕೊಂಡಿದ್ದೆ. ಆದರೆ, ಆರ್.ಅಶೋಕ್ ನಮ್ಮನ್ನು ಸದನದಿಂದ ಹೊರಗೆ ಕರೆತಂದರು. ಒಂದಿಷ್ಟು ಶಾಸಕರು ಸದನದಲ್ಲೇ ಉಳಿದಿದ್ದರಿಂದ ಗೊಂದಲವಾಯಿತು ಎಂದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಅಶೋಕ ಮತ್ತು ವಿಶ್ವನಾಥ್ ಹಿರಿಯ ನಾಯಕರು, ಅವರ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್, ಶಾಸಕ

ಎಲ್ಲಾ ಶಾಸಕರ ಜೊತೆ ಸಮನ್ವಯ ಸಾಧಿಸಿಲ್ಲವೆಂದು ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಅಶೋಕ್ ವಿರುದ್ಧ ರೇಗಿದ್ದು ನಿಜ. ತೀವ್ರ ಬೇಸರವಾಗಿದ್ದರಿಂದ ನಿನ್ನೆಯೇ ನಾನು ಬೆಂಗಳೂರಿಗೆ ಬಂದುಬಿಟ್ಟೆ. ಸೋಮವಾರ ಸದನಕ್ಕೆ ಹಾಜರಾಗುತ್ತೇನೆ. ಬುಧವಾರ ರಾಜ್ಯ ಬಿಜೆಪಿ ಅಧ್ಯಕ್ಷರು ಔತಣಕೂಟ ಆಯೋಜಿಸಿದ್ದಾರೆ ಎಂದರು.

ಬೆಳಗಾವಿಯಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ

ವಿಧಾನಸಭೆಯಲ್ಲಿ ಸಭಾತ್ಯಾಗದ ವಿಚಾರವಾಗಿ ಸಿಟ್ಟಾಗಿರುವ ವಿಶ್ವನಾಥ್ ಅವರು ಬುಧವಾರ (ಡಿಸೆಂಬರ್ 13) ಸಂಜೆ 6 ಗಂಟೆಗೆ ಬೆಳಗಾವಿಯ ಖಾಸಗಿ ಹೊಟೇಲ್​ನಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ಕರೆದಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೂ ಆಹ್ವಾನ ನೀಡಲಾಗಿದೆ. ಆರ್​.ಆಶೋಕ್​ಗೂ ಆಹ್ವಾನ ನೀಡುವುದಾಗಿ ಹೇಳುತ್ತಿದ್ದಾರೆ.

ಬೆಂಗಳೂರು ನಗರದ ಅಭಿವೃದ್ಧಿ, ಬಿಜೆಪಿ ಕಾರ್ಯಕರ್ತರ ಸಮಸ್ಯೆ, ಸಿಎಂ ಭೇಟಿ ಬಗ್ಗೆ ಚರ್ಚಿಸುವ ಅಜೆಂಡಾ ಇಟ್ಟುಕೊಂಡು ಸಭೆ ಕರೆಯಲಾಗಿದೆ. ವಿಪಕ್ಷ ನಾಯಕರು ಇಡೀ ರಾಜ್ಯದ ಬಗ್ಗೆ ಗಮನ ಹರಿಸಬೇಕಿರುವ ಹಿನ್ನೆಲೆ ಬೆಂಗಳೂರು ಬಗ್ಗೆ ನಾವೇ ಚರ್ಚೆ ಮಾಡಬೇಕು ಎಂದು ಹೇಳಿಕೊಂಡು ಸಭೆ ನಡೆಸಲಾಗುತ್ತಿದೆ. ಅಂದು ರಾತ್ರಿ ವೇಳೆ ಬಿವೈ ವಿಜಯೇಂದ್ರ ಅವರು ಬಿಜೆಪಿ ಶಾಸಕರಿಗೆ ಔತಣಕೂಟ ಕೂಡ ಏರ್ಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Fri, 8 December 23

ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!