AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್; ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆದ್ರಾ ಮುಖ್ಯಮಂತ್ರಿ ಪುತ್ರ?

ಅಧಿಕಾರ ಮುಗಿದರೂ ಕಾರಿನಲ್ಲಿ ಎಂಎಲ್​ಎ ಪಾಸ್ ಜೊತೆ ಡಾ.ಯತೀಂದ್ರ ಅವರು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆಗಿದ್ದಾರಾ?

ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್; ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆದ್ರಾ ಮುಖ್ಯಮಂತ್ರಿ ಪುತ್ರ?
ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್
Rakesh Nayak Manchi
|

Updated on:Jun 20, 2023 | 9:16 PM

Share

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆಗಿದ್ದಾರಾ? ಅಧಿಕಾರ ಮುಗಿದರೂ ಕಾರಿನಲ್ಲಿ ಎಂಎಲ್​ಎ ಪಾಸ್ ಜೊತೆ ಡಾ.ಯತೀಂದ್ರ (Dr. Yathindra) ಅವರು ಓಡಾಡುತ್ತಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ ಮಾಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಕಾರು ಚಲಿಸುತ್ತಿದ್ದರೂ ಕಾರ್ಯಕರ್ತರು ಮುಗಿಬಿದ್ದು ಮನವಿ ಪತ್ರ ಕೊಟ್ಟಿದ್ದಾರೆ.

ನಂತರ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಕರ್ನಾಟಕದ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಯೋಜನೆ ಜಾರಿ ಮಾಡಲಾಗುವುದು. ಆದರೆ ಯೋಜನೆ ಜಾರಿಗೆ ಬಿಜೆಪಿಯವರು ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Anna Bhagya Scheme; ಒಂದು ಕುಟುಂಬದಲ್ಲಿ 5 ಸದಸ್ಯರಿದ್ದರೆ ಸಿದ್ದರಾಮಯ್ಯ ಸರ್ಕಾರ 75 ಕೆಜಿ ಅಕ್ಕಿ ನೀಡಬೇಕು: ಬಸವರಾಜ ಬೊಮ್ಮಾಯಿ, ಶಾಸಕ

9 ವರ್ಷವಾದರೂ ಕೇಂದ್ರದಲ್ಲಿ ಬಿಜೆಪಿ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ ಮಾಜಿ ಶಾಸಕರು, ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಹೆಚ್ಚು ಸ್ಥಾನ ಗೆದ್ದರೆ ಸಿಎಂ ಹಾಗೂ ಡಿಸಿಎಂಗೆ ಹೆಚ್ಚು ಶಕ್ತಿ ಬರುತ್ತದೆ ಎಂದರು.

ಯತೀಂದ್ರರನ್ನು ಸನ್ಮಾನಿಸಲು ಮುಗಿಬಿದ್ದ ಮಹಿಳೆಯರು

ಮೈಸೂರು: ದೇವರಾಜ ಮೊಹಲ್ಲಾದ ಕಾಂಗ್ರೆಸ್​ ಕಚೇರಿಯಲ್ಲಿ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ನಡೆಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರನ್ನು ಮಹಿಳೆಯರು ಸನ್ಮಾನಿಸಲು ಮುಗಿಬಿದ್ದರು. ಶಾಲು ಹಾಗೂ ಸನ್ಮಾನ ಮಾಡಲು ನೂಕು ನುಗ್ಗಲು ಉಂಟಾಯಿತು. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಸೇರಿದಂತೆ ಹಲವರು ಭಾಗಿಯಾದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Tue, 20 June 23

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ