AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್; ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆದ್ರಾ ಮುಖ್ಯಮಂತ್ರಿ ಪುತ್ರ?

ಅಧಿಕಾರ ಮುಗಿದರೂ ಕಾರಿನಲ್ಲಿ ಎಂಎಲ್​ಎ ಪಾಸ್ ಜೊತೆ ಡಾ.ಯತೀಂದ್ರ ಅವರು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆಗಿದ್ದಾರಾ?

ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್; ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆದ್ರಾ ಮುಖ್ಯಮಂತ್ರಿ ಪುತ್ರ?
ಅಧಿಕಾರ ಮುಗಿದರೂ ಡಾ.ಯತೀಂದ್ರ ಕಾರಿನಲ್ಲಿ ಎಂಎಲ್​ಎ ಸ್ಟಿಕರ್
Rakesh Nayak Manchi
|

Updated on:Jun 20, 2023 | 9:16 PM

Share

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಮೈಸೂರು ಭಾಗದಲ್ಲಿ ಶ್ಯಾಡೋ ಸಿಎಂ ಆಗಿದ್ದಾರಾ? ಅಧಿಕಾರ ಮುಗಿದರೂ ಕಾರಿನಲ್ಲಿ ಎಂಎಲ್​ಎ ಪಾಸ್ ಜೊತೆ ಡಾ.ಯತೀಂದ್ರ (Dr. Yathindra) ಅವರು ಓಡಾಡುತ್ತಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ ಮಾಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಕಾರು ಚಲಿಸುತ್ತಿದ್ದರೂ ಕಾರ್ಯಕರ್ತರು ಮುಗಿಬಿದ್ದು ಮನವಿ ಪತ್ರ ಕೊಟ್ಟಿದ್ದಾರೆ.

ನಂತರ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಕರ್ನಾಟಕದ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಯೋಜನೆ ಜಾರಿ ಮಾಡಲಾಗುವುದು. ಆದರೆ ಯೋಜನೆ ಜಾರಿಗೆ ಬಿಜೆಪಿಯವರು ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Anna Bhagya Scheme; ಒಂದು ಕುಟುಂಬದಲ್ಲಿ 5 ಸದಸ್ಯರಿದ್ದರೆ ಸಿದ್ದರಾಮಯ್ಯ ಸರ್ಕಾರ 75 ಕೆಜಿ ಅಕ್ಕಿ ನೀಡಬೇಕು: ಬಸವರಾಜ ಬೊಮ್ಮಾಯಿ, ಶಾಸಕ

9 ವರ್ಷವಾದರೂ ಕೇಂದ್ರದಲ್ಲಿ ಬಿಜೆಪಿ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ ಮಾಜಿ ಶಾಸಕರು, ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಹೆಚ್ಚು ಸ್ಥಾನ ಗೆದ್ದರೆ ಸಿಎಂ ಹಾಗೂ ಡಿಸಿಎಂಗೆ ಹೆಚ್ಚು ಶಕ್ತಿ ಬರುತ್ತದೆ ಎಂದರು.

ಯತೀಂದ್ರರನ್ನು ಸನ್ಮಾನಿಸಲು ಮುಗಿಬಿದ್ದ ಮಹಿಳೆಯರು

ಮೈಸೂರು: ದೇವರಾಜ ಮೊಹಲ್ಲಾದ ಕಾಂಗ್ರೆಸ್​ ಕಚೇರಿಯಲ್ಲಿ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ನಡೆಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರನ್ನು ಮಹಿಳೆಯರು ಸನ್ಮಾನಿಸಲು ಮುಗಿಬಿದ್ದರು. ಶಾಲು ಹಾಗೂ ಸನ್ಮಾನ ಮಾಡಲು ನೂಕು ನುಗ್ಗಲು ಉಂಟಾಯಿತು. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಸೇರಿದಂತೆ ಹಲವರು ಭಾಗಿಯಾದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Tue, 20 June 23

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್