AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ: ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ; ಸಂಕ್ರಾಂತಿಯೊಳಗೆ ನೇಮಕ- ಡಿಕೆ ಶಿವಕುಮಾರ್​

ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ನಿಗಮ ಮಂಡಳಿ: ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ; ಸಂಕ್ರಾಂತಿಯೊಳಗೆ ನೇಮಕ- ಡಿಕೆ ಶಿವಕುಮಾರ್​
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Dec 30, 2023 | 3:05 PM

Share

ಬೆಂಗಳೂರು, ಡಿಸೆಂಬರ್​ 30: ನಿಗಮ ಮಂಡಳಿಗಳಲ್ಲಿ (Board and Corporation) ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ. ಕಾರ್ಯಕರ್ತರ ಪಟ್ಟಿ ಬಂದಿದೆ, ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಟ್ಟಿಯನ್ನ ಪಕ್ಷದ ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿಯೊಳಗೆ ಅಧ್ಯಕ್ಷರ ನೇಮಕ ಆಗುತ್ತದೆ. ಇನ್ನು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವಿಚಾರವಾಗಿ ಮಾತನಾಡಿದ ಅವರು ಜನವರಿ ನಾಲ್ಕರಂದು ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ. ಪಕ್ಷದ ಸಭೆ ಇದೆ, ಚರ್ಚೆ ಮಾಡುವುದಿದೆ. ನಮ್ಮೆಲ್ಲಾ ಮಂತ್ರಿಗಳು ವರದಿ ನೀಡಿದ್ದಾರೆ. ಅಭ್ಯರ್ಥಿಗಳ ಬಗ್ಗೆ ಸರ್ವೆ ಮಾಡಬೇಕು, ಕ್ಷೇತ್ರಗಳಿಗೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಅಲ್ಪಸಂಖ್ಯಾತರ ಕಾಲೋನಿ ಅಬೀವೃದ್ಧಿಗೆ ಸಾವಿರ ಕೋಟಿ ಅನುದಾನ ಘೋಷಣೆ ವಿಚಾರವಾಗಿ ಮಾತನಾಡಿದ ಅವರು ರಾಮನಗರಕ್ಕೆ ಬಂದು ನೋಡಿ, ಕರೆದುಕೊಂಡು ಹೋಗುತ್ತೇನೆ. ಬೇರೆಯವರಿಗೂ, ನಮಗೂ ವ್ಯತ್ಯಾಸವಿದೆ. ಆ ಜನರ (ಅಲ್ಪಸಂಖ್ಯಾತರ) ಬದುಕು ಬದಲಾವಣೆ ಮಾಡಬೇಕು. ಮುಖ್ಯಮಂತ್ರಿಗಳು ಒಳ್ಳೆಯ ನಿರ್ಧಾರ ಮಾಡಿದ್ದಾರೆ. ಬಿಜೆಪಿಯವರು ಇದನ್ನು ಮಾಡುತ್ತಿರಲಿಲ್ಲ, ನಾವು ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬ: ಶಾಸಕರಿಗಷ್ಟೇ ಪಟ್ಟ ಕಟ್ಟೋದು ಬೇಡ ಎಂದ ಕಾಂಗ್ರೆಸ್ ಹೈಕಮಾಂಡ್

ಜನಸ್ಪಂದನ ಕಾರ್ಯಕ್ರಮ ವಿಚಾರವಾಗಿ ಮಾತನಾಡಿದ ಅವರು ಜನರ ಒತ್ತಡ ಕಡಿಮೆ ಮಾಡಬೇಕು. ಜನರು ನಮ್ಮ ಮನೆ ಬಾಗಿಲು, ಮುಖ್ಯಮಂತ್ರಿಗಳ ಮನೆ ಬಾಗಿಲು ತಿರುಗುವುದು ಬೇಡ. ನಾವೇ ಜನರ ಮನೆ ಬಾಗಿಲಿಗೆ ಹೋಗುತ್ತಿದ್ದೇವೆ. ಇಡೀ ತಿಂಗಳು ಪ್ರವಾಸ ಮಾಡಿ ಎಲ್ಲ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸಬೇಕು ಅಂತ ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.

ಎಲ್ಲಾ ಅಧಿಕಾರಿಗಳು ಕೂಡ ಭಾಗವಹಿಸಬೇಕು. ನೀರಿನ ಸಮಸ್ಯೆ, ಖಾತೆ ಸಮಸ್ಯೆ, ಬೆಸ್ಕಾಂ ಸಮಸ್ಯೆ, ಗ್ಯಾರಂಟಿ ಸಮಸ್ಯೆ ಯಾವುದೇ ಸಮಸ್ಯೆ ಇದ್ದರೂ ಕೂಡ ಬಗೆಹರಿಸುವಂತ ಕೆಲಸ ಮಾಡುತ್ತೇವೆ. ಎಲ್ಲಾ ಶಾಸಕರು, ಸಂಸದರು ಕೂಡ ಈ ವೇಳೆ ಭಾಗವಸಲು ಹೇಳಿದ್ದೇನೆ. 28 ಕ್ಷೇತ್ರದಲ್ಲೂ ಪ್ರವಾಸ ಮಾಡುತ್ತೇವೆ ಜನರು ತಮ್ಮ ಅಹವಾಲನ್ನು ಕೊಡಬಹುದು. ಮೂರು ಕ್ಷೇತ್ರವನ್ನು ಒಗ್ಗೂಡಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:05 pm, Sat, 30 December 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ