AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್

ಕಳೆದ ಶನಿವಾರ(ಸೆ.09) ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದರು. ಈ ಹಿನ್ನಲೆ ಎಐಸಿಸಿ ಶಿಸ್ತು ಸಮಿತಿಯಿಂದ ಬಿ.ಕೆ ಹರಿಪ್ರಸಾದ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹತ್ತು ದಿನಗಳೊಳಗೆ ಶೋಕಾಸ್ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್
ಬಿಕೆ ಹರಿಪ್ರಸಾದ್​
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 8:46 PM

ಬೆಂಗಳೂರು, ಸೆ.12: ರಾಜ್ಯದಲ್ಲಿ 136 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್​ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರೆ, ಪಕ್ಷದಲ್ಲಿ ಭಿನ್ನಾಪ್ರಾಯ ಮಾತ್ರ ಕಡಿಮೆ ಆಗಿಲ್ಲ. ಅದರಂತೆ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಅನೇಕರು ಇದೀಗ ಸ್ವ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಅದರಂತೆ ಕಳೆದ ಶನಿವಾರ(ಸೆ.09) ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ (BK Hariprasad) ಅವರು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದರು. ಈ ಹಿನ್ನಲೆ ಎಐಸಿಸಿ ಶಿಸ್ತು ಸಮಿತಿಯಿಂದ ಬಿ.ಕೆ ಹರಿಪ್ರಸಾದ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹತ್ತು ದಿನಗಳೊಳಗೆ ಶೋಕಾಸ್ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ಪರೋಕ್ಷವಾಗಿ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದ ಬಿಕೆ ಹರಿಪ್ರಸಾದ್​

ಹೌದು, ಕಳೆದ ಕೆಲವು ದಿನಗಳ ಹಿಂದೆ ಬಿಕೆ ಹರಿಪ್ರಸಾದ್​ ಪರೋಕ್ಷವಾಗಿ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದರು. ‘ಹಿಂದಿನ ಯಾವ ಮುಖ್ಯಮಂತ್ರಿಗಳೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಇದೀಗ ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಎಂದು ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ, ಇನ್ನೂ ಸತ್ತಿಲ್ಲ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ, ನಾನು ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ. ದೇವರಾಜ ಅರಸು ಕಾರಿನಲ್ಲಿ ಕುಳಿತರೆ, ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದಿದ್ದರು.

ಇದನ್ನೂ ಓದಿ:ಸಂಸತ್ ಕೆಲಸವನ್ನು ರಾಜಕೀಯಗೊಳಿಸಬೇಡಿ: ಸೋನಿಯಾ ಗಾಂಧಿ ಪತ್ರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಇನ್ನು ಇದೇ ವೇಳೆ ನಾನು ಮಂತ್ರಿ ಆಗಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲ್ಲಿ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಎಂದು ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಕಾನು ಪುಂಕವಾಗಿ ಹಾಡಿ ಹೊಗಳುವ ನಾವು ಅವರ ಮೊಮ್ಮಗನಿಗೆ ಯಾವ ಅಧಿಕಾರವನ್ನೂ ಕೊಟ್ಟಿಲ್ಲವೆಂದು ಅವಮಾನ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?