AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂದಿನ ರಾಜಕೀಯದ ಬಗ್ಗೆ ಆಸೆ ಇಟ್ಟುಕೊಂಡಿಲ್ಲ’; ವೈರಾಗ್ಯದ ಮಾತುಗಳನ್ನಾಡಿದ ಸಂಸದ ಅನಂತಕುಮಾರ ಹೆಗಡೆ

ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವೈರಾಗ್ಯದ ಮಾತಗಳನ್ನಾಡಿದ್ದಾರೆ. ಮುಂದಿನ ರಾಜಕೀಯದ ಬಗ್ಗೆ ಆಸೆ ಇಟ್ಟುಕೊಂಡಿಲ್ಲ ಎಂದಿರುವ ಅವರು, ಇಷ್ಟು ದಿನ ರಾಜಕೀಯದಲ್ಲಿ ಇದ್ದದ್ದೇ ಪುಣ್ಯ ಎಂದು ನುಡಿದಿದ್ದಾರೆ.

‘ಮುಂದಿನ ರಾಜಕೀಯದ ಬಗ್ಗೆ ಆಸೆ ಇಟ್ಟುಕೊಂಡಿಲ್ಲ’; ವೈರಾಗ್ಯದ ಮಾತುಗಳನ್ನಾಡಿದ ಸಂಸದ ಅನಂತಕುಮಾರ ಹೆಗಡೆ
ಸಂಸದ ಅನಂತ​ಕುಮಾರ ಹೆಗಡೆ
TV9 Web
| Edited By: |

Updated on:Jan 21, 2022 | 12:36 PM

Share

ಉತ್ತರ ಕನ್ನಡ: ಇಷ್ಟು ದಿನ ರಾಜಕೀಯದಲ್ಲಿ ಇದ್ದದ್ದೇ ನನ್ನ ಪುಣ್ಯ. ಮುಂದಿನ ರಾಜಕೀಯದ ಬಗ್ಗೆ ಆಸೆ ಇಟ್ಟುಕೊಂಡಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ (Ananthkumar Hegde) ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಗುರುವಾರ ಕುಮಟಾ (Kumta) ತಾಲೂಕಿನ ಕಂದವಳ್ಳಿಯಲ್ಲಿ ನಡೆದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ವಿವಿಧ ರಸ್ತೆ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜಕಾರಣದಲ್ಲಿ ಹಾಗೇ ಆಗಬೇಕು, ಹೀಗೇ ಆಗಬೇಕು ಎಂದು ಕನಸುಗಳು ಇಲ್ಲ. ಇಷ್ಟು ವರ್ಷ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ಅದೇ ದೊಡ್ಡ ಸಂತೋಷ. ನಿಮ್ಮ ಪ್ರೀತಿಗೆ ನಾನು ಇಲ್ಲಿಂದಲೇ ನಿಮ್ಮ ಕಾಲಿಗೆ ನಮಸ್ಕಾರ ಮಾಡುತ್ತೇನೆ ಎಂದು ಸಂಸದರು ಹೇಳಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ವಿರೋಧ ಬಂದರೂ ಪರವಾಗಿಲ್ಲ. ಜಿಲ್ಲೆಗೆ ಬಂದರು, ನ್ಯಾಷನಲ್ ಹೈವೇ, ಏರ್ಪೋರ್ಟ್, ರೈಲ್ವೆ ಇಂತಹ ಕೆಲಸಗಳೇ ಅನಿವಾರ್ಯವಾಗಿ ಆಗಬೇಕಾಗಿದ್ದು. ಜಿಲ್ಲೆ ಇನ್ನೂ ನೂರು ವರ್ಷ ಅಭಿವೃದ್ಧಿ ದೃಷ್ಟಿಯಿಂದ ಹಿಂದೆ ತಿರುಗಿ ನೋಡಬಾರದು ಎಂದು ಅನಂತಕುಮಾರ ಹೆಗಡೆ ಹೇಳಿದರು.

ನಾವೇನ ರಾಜಕಾರಣದ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಇಷ್ಟು ದಿನ ರಾಜರಾಣದಲ್ಲಿ ಇದ್ದದ್ದೇ ಪುಣ್ಯ. ಮುಂದಿನ ಆಸೆ ಇಲ್ಲ ಎಂದು ವೈರಾಗ್ಯದಿಂದ ಸಂಸದ ಅನಂತಕುಮಾರ ಹೆಗಡೆ ನುಡಿದರು. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ ಸಂಸದರು, ಉತ್ತರ ಕನ್ನಡ ಇನ್ನು ನೂರು ವರ್ಷಗಳ ಕಾಲ ಹಿಂದಿರುಗಿ ನೋಡಬಾರದು. ಅದಕ್ಕೆ ಪೂರಕವಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ ಎಂದಿದ್ದಾರೆ.

ಅನಂತಕುಮಾರ ಹೆಗಡೆ 2017ರಿಂದ 2019ರ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ:

BMTC bus fire: ಮಕ್ಕಳ ಕೂಟ ಬಳಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

ಒಂದೇ ದಿನ ಬಾಲಿವುಡ್​ನಲ್ಲಿ 3 ಸಾವು; ಆಘಾತದ ಸುದ್ದಿ ಕೇಳಿ ಕಂಬನಿ ಮಿಡಿದ ಸೆಲೆಬ್ರಿಟಿಗಳು

Published On - 12:14 pm, Fri, 21 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ