AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ: ಬೆಳಗಾವಿಯಿಂದಲೇ ಮತಬೇಟೆ ಶುರು

ಭಾರತ್​ ಜೋಡೋ ಯಾತ್ರೆ ನಂತರ, ಇದೇ ಮೊದಲ ಬಾರಿಗೆ ನಾಳೆ (ಮಾರ್ಚ್​ 20) ರಂದು ಕುಂದಾನಗರಿ ಬೆಳಗಾವಿಗೆ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಆಗಮಿಸಲಿದ್ದಾರೆ.

ಈ ವರ್ಷ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ: ಬೆಳಗಾವಿಯಿಂದಲೇ ಮತಬೇಟೆ ಶುರು
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
ವಿವೇಕ ಬಿರಾದಾರ
|

Updated on:Mar 19, 2023 | 3:30 PM

Share

ಬೆಳಗಾವಿ: ಕರ್ನಾಟಕ, ವಿಧಾನಸಭೆ ಚುನಾವಣೆ (Karnataka Assembly Election) ಎದುರು ನೋಡುತ್ತಿದ್ದು, ರಾಜ್ಯದ ಕೆಲವು ವಿಧಾನಸಭಾ ಕ್ಷೇತ್ರಗಳು (Assembly Constituency) ಸಾಕಷ್ಟು ಕುತೂಹಲ ಮೂಡಿಸುತ್ತಿವೆ. ಚುನಾವಣಾ ಪ್ರಚಾರ ಸಂಬಂಧ ಬಿಜೆಪಿ (BJP) ಕೇಂದ್ರ ನಾಯಕರು ರಾಜ್ಯ ಸುತ್ತುತ್ತಿದ್ದು, ಬೇಸಿಗೆಯಲ್ಲಿ ಚುನಾವಣಾ ಕಾವನ್ನು ಹೆಚ್ಚಿಸುತ್ತಿದ್ದಾರೆ. ಅದರಂತೆ ಈಗ ಕಾಂಗ್ರೆಸ್ (Congress)​ ಕೂಡ ಕೇಂದ್ರ ನಾಯಕರತ್ತ ಮುಖ ಮಾಡಿದೆ. ಭಾರತ್​ ಜೋಡೋ ಯಾತ್ರೆ (Bharat Jodo Yatra) ನಂತರ, ಇದೇ ಮೊದಲ ಬಾರಿಗೆ ಸಂಸದ ರಾಹುಲ್​ ಗಾಂಧಿ (Rahul Gandhi) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ (ಮಾರ್ಚ್​ 20) ರಂದು ಕುಂದಾನಗರಿ ಬೆಳಗಾವಿಗೆ (Belagavi) ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ಹಣಾ-ಹಣಿ ಜೋರಾಗಿಯೇ ನಡೆಯುತ್ತಿದೆ. ಈ ಹಿಂದೆ ಬೆಳಗಾವಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮದೆಯಾದ ಅಲೆಯನ್ನು ಸೃಷ್ಟಿಸಿದ್ದರು.

ಇದೀಗ ಬಿಜೆಪಿಯ ಅಲೆಯನ್ನು ತಣ್ಣಗಾಗಿಸಿ, ಎಲ್ಲಡೆ ಕಾಂಗ್ರೆಸ್​ ಮೇನಿಯಾ ಸೃಷ್ಟಿಸಲು ಕೈ​ ನಾಯಕ ರಾಹುಲ್​ ಗಾಂಧಿ ಆಗಮಿಸುತ್ತಿದ್ದಾರೆ. ನಾಳೆ (ಮಾರ್ಚ್ 20) ರಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಗೆ ಆಗಮಿಸಲಿರುವ ರಾಹುಲ್ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಗರದ ಸಿಪಿಎಡ್ ಮೈದಾನದಲ್ಲಿ ಬೃಹತ್ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಯುವಕರನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ

ಇನ್ನು ನಿರುದ್ಯೋಗ, ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ವಂಚನೆ ಸೇರಿದಂತೆ ಹಲವು ವಿಷಯಗಳ ಮೇಲೆ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಯಿಂದಲೂ ಕಾರ್ಯಕರ್ತರು, ಯುವಕರು ಆಗಮಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಸುಮಾರು 3-4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬೆಳಗಾವಿ ಭೇಟಿ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡ ಬೆಳಗಾವಿಯಿಂದಲೇ ಪ್ರಚಾರ ಆರಂಭಿಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸುವಂತೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಳಗಾವಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸಾಥ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Sun, 19 March 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ