AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ ಕುರಿತ ಹೆಚ್​ಕೆ ಪಾಟೀಲ್ ಉಪಸಮಿತಿ ವರದಿ ಮೇಲೆ ಸಿದ್ದರಾಮಯ್ಯ ಏಕೆ ಕ್ರಮ ಕೈಗೊಂಡಿಲ್ಲ? ಲಹರ್ ಸಿಂಗ್ ಪ್ರಶ್ನೆ

ಎಚ್‌.ಕೆ.ಪಾಟೀಲ್ ಉಪ ಸಮಿತಿಯು, ಅಕ್ರಮ ಗಣಿಗಾರಿಕೆಯಿಂದ ಅಂದಾಜು 1.43 ಲಕ್ಷ ಕೋಟಿ ರೂ.ಗಳ ಬಾಕಿ ಬರಬೇಕಿದೆ ಎಂದು ಹೇಳಿದೆ. 10 ವರ್ಷಗಳ ಹಿಂದೆ ಸಿದ್ದರಾಮಯ್ಯನವರು (2013ರಲ್ಲಿ) ಭರವಸೆ ನೀಡಿದಂತೆ ಈ ಬಾಕಿಯನ್ನು ವಸೂಲಿ ಮಾಡಿದರೆ, ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಜಾರಿಗೆ ತರಲು ಸರ್ಕಾರ ಸಾಕಷ್ಟು ಹಣ ಹೊಂದಿಸಬಹುದು ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯ ವಾಗ್ದಾಳಿ ನಡೆಸಿದರು.

ಅಕ್ರಮ ಗಣಿಗಾರಿಕೆ ಕುರಿತ ಹೆಚ್​ಕೆ ಪಾಟೀಲ್ ಉಪಸಮಿತಿ ವರದಿ ಮೇಲೆ ಸಿದ್ದರಾಮಯ್ಯ ಏಕೆ ಕ್ರಮ ಕೈಗೊಂಡಿಲ್ಲ? ಲಹರ್ ಸಿಂಗ್ ಪ್ರಶ್ನೆ
ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯ, ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on: Feb 04, 2024 | 7:42 PM

Share

ಬೆಂಗಳೂರು, ಫೆ.4: ಎಚ್‌.ಕೆ.ಪಾಟೀಲ್ ಸಂಪುಟ ಉಪಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿರುವಂತೆ ಅಕ್ರಮ ಗಣಿಗಾರಿಕೆಯ ದಂಡ ವಸೂಲಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯ (Lehar Singh Siroya) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಇಂದು(ಫೆ.04) ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು ‘ಅಕ್ರಮ ಗಣಿಗಾರಿಕೆಯಿಂದ 1.43 ಲಕ್ಷ ಕೋಟಿ ರೂ. ಬಾಕಿ ಬರಬೇಕಿದೆ ಎಂದು ಅಂದಾಜಿಸಿರುವ ಎಚ್‌.ಕೆ.ಪಾಟೀಲ್ ಉಪಸಮಿತಿಯ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ ಹೆಚ್ಚಿನ ಅನುದಾನ ಪಡೆಯಲು ನವದೆಹಲಿಯಲ್ಲಿ ಪ್ರತಿಭಟಿಸುವ ಮೊದಲು, ಬಾಕಿ ವಸೂಲಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಬಳಸುವಂತೆ ಒತ್ತಾಯಿಸಿದರು.

10 ವರ್ಷಗಳ ಹಿಂದೆ 2013ರಲ್ಲಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಭರವಸೆ ನೀಡಿದಂತೆ, ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ವಸೂಲಿ ಮಾಡುವ ಬದ್ಧತೆಯನ್ನು ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳು ಪ್ರದರ್ಶಿಸಬೇಕು ಎಂದು ಲಹರ್ ಸಿಂಗ್ ಆಗ್ರಹಿಸಿದ್ದಾರೆ. ಈ ಹಣವನ್ನು ವಸೂಲಿ ಮಾಡಿದರೆ, ಸರ್ಕಾರಕ್ಕೆ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಾಕಷ್ಟು ಹಣ ದೊರಕಲಿದೆ. ‘ನೀವು ಭರವಸೆ ನೀಡಿದ್ದ ಈ ಬಾಕಿಯನ್ನು ವಸೂಲಿ ಮಾಡಿ, ನಂತರ ಕೇಂದ್ರದಿಂದ ಹೆಚ್ಚುವರಿ ಅನುದಾನ ಪಡೆಯಲು ನಿಮ್ಮೊಂದಿಗೆ ಬರುವಂತೆ ಬಿಜೆಪಿ ಶಾಸಕರನ್ನು ನಾನು ಒತ್ತಾಯಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು  ಒತ್ತಾಯಿಸಿದರು.

ಇದನ್ನೂ ಓದಿ:ಮೋದಿ ವ್ರತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿಗೆ ತಿವಿದ ಲೆಹರ್‌ ಸಿಂಗ್‌

2013ರ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸಲು ಸಿಎಂ ಸಿದ್ದರಾಮಯ್ಯನವರಿಗೆ ಈಗ ಏನು ಅಡ್ಡಿ?

‘ಅಕ್ರಮ ಗಣಿಗಾರಿಕೆ ಕುರಿತು ತಮ್ಮದೇ ಉಪ ಸಮಿತಿಯ ವರದಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ ಅವರು “ಕಾಂಗ್ರೆಸ್ ತಮ್ಮ ಗ್ಯಾರಂಟಿಯನ್ನು ಜಾರಿಗೊಳಿಸಲು ಮತ್ತು ಅಕ್ರಮ ಗಣಿಗಾರಿಕೆಯಲ್ಲಿ ತಮ್ಮದೇ ಸರ್ಕಾರದ ಉಪ ಸಮಿತಿಯ ವರದಿಯ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ತಡೆಯುವುದು ಯಾವುದು?” ಎಂದು ಪ್ರಶ್ನಿಸಿದ ಸಿಂಗ್, ಅಂದಾಜು 1.43 ಲಕ್ಷ ಕೋಟಿ. ರೂ.ಗಳನ್ನು ಸಂಗ್ರಹಿಸುವ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳಿದರು.

ಅದರ ಅಂದಾಜು ಮೊತ್ತದ ಅರ್ಧದಷ್ಟು ಹಣವನ್ನು ಸಂಗ್ರಹಿಸಿದರೂ ಸಹ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗದಂತೆ 1 ರಿಂದ 2 ವರ್ಷಗಳವರೆಗೆ ಗ್ಯಾರಂಟಿಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ಸಾಕಷ್ಟು ಹಣ ದೊರಕಲಿದೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅವ್ಯವಹಾರಗಳನ್ನು ಸುಸ್ಥಿತಿಗೆ ತರುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ಗ್ಯಾರಂಟಿಗಳು ವಿಫಲವಾಗಿವೆ

ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಖಾತರಿಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಹಲವು ಕಾಂಗ್ರೆಸ್ ಶಾಸಕರು ಸೇರಿದಂತೆ ತಮ್ಮದೇ ಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಯ ಪ್ರಯತ್ನಗಳು ರಾಜ್ಯ ಸರ್ಕಾರದ ವೈಫಲ್ಯಗಳ ಹತಾಶೆ, ರಾಜಕೀಯ ವಿಚಲಿತತೆ ಮತ್ತು ಕೇಂದ್ರದ ಮೇಲೆ ಆರೋಪ ಹೊರಿಸುವ ವಿಫಲ ಪ್ರಯತ್ನವಾಗಿದೆ ಎಂದು ಲಹರ್ ಸಿಂಗ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ