Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ರಮೇಶ್​​ ಜಿಗಜಿಣಗಿ ಪ್ರಶ್ನೆ

ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ. ನಳಿನ್‌ ಕುಮಾರ್ ಕಟೀಲ್​ ಅವರ ಅವಧಿ ಮುಗಿದಿದೆ ಎಂದು ಗೊತ್ತಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಬೇಕೆಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ ಎಂದು ಸಂಸದ ರಮೇಶ್​​ ಜಿಗಜಿಣಗಿ ಹೇಳಿದ್ದಾರೆ.

ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ರಮೇಶ್​​ ಜಿಗಜಿಣಗಿ ಪ್ರಶ್ನೆ
ಸಂಸದ ರಮೇಶ್​​ ಜಿಗಜಿಣಗಿ
Follow us
ವಿವೇಕ ಬಿರಾದಾರ
|

Updated on: Jun 25, 2023 | 2:28 PM

ಬೆಳಗಾವಿ: ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ. ನಳಿನ್‌ ಕುಮಾರ್ ಕಟೀಲ್​ (Nalin Kumar Kateel) ಅವರ ಅವಧಿ ಮುಗಿದಿದೆ ಎಂದು ಗೊತ್ತಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಬೇಕೆಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ (BJP) ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ಎಂದು ಸಂಸದ ರಮೇಶ್​​ ಜಿಗಜಿಣಗಿ (Ramesh Jigajinagi) ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರ ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ ಅದನ್ನ ಬಹಿರಂಗವಾಗಿ ಹೇಳುವುದಿಲ್ಲ. ಚುನಾವಣೆಯಲ್ಲಿ ಸೋಲು, ಗೆಲವು ಸಹಜ ಯಾರು ನಿರಾಶೆ ಆಗಬಾರದು. ನಮ್ಮ ಮತಗಳು ನಮಗೆ ಬಿದ್ದಿವೆ ಯಾರು ಎದೆಗುಂದಬೇಡಿ. ಕಾರ್ಯಕರ್ತರ ಸುಸ್ತ ಆಗಿ ಕೂರಬೇಡಿ. ಮತ್ತೆ ಸೆಡ್ಡು ಹೊಡೆದು ಕೆಲಸ ಆರಂಭಿಸಬೇಕು ಎಂದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.

ಇದನ್ನೂ ಓದಿ: ಎರಡರಲ್ಲೂ ಸೋತು ನಿರುದ್ಯೋಗಿಯಾಗಿದ್ದೇನೆ ಎನ್ನುತ್ತಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ಸೋಮಣ್ಣ

ಅಧಿಕಾರಕ್ಕೆ ಬಂದಾಗ ಕಾರ್ಯಕರ್ತರ ಕಡೆ ಗಮನ ಹರಿಸಬೇಕು. ಮಂತ್ರಿಗಳಿದ್ದವರು, ಅಧಿಕಾರದಲ್ಲಿದ್ದವರು ಕಾರ್ಯಕರ್ತರ ಕಡೆ ಗಮನ ಕೊಡಬೇಕು. ಯಾರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇದನ್ನು ಹೇಳಿಲ್ಲ. ಸಂಘಟನೆಯ ಬಗ್ಗೆ ಹೆಚ್ಚು ಗಮನಹಿರಸಬೇಕು. ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ಅವರಿಗೆ ಟಾಂಗ್ ಕೊಟ್ಟರು.

ಅಕ್ಕಿ ನಿಮಗೆ ಕೊಡುವ ಯೋಗ್ಯತೆ ಇಲ್ಲಾ ಅಂದರೇನಾವಣೆ ಸುಳ್ಳು ಹೇಳಿ ಯಾಕೆ ವೋಟ್ ತೆಗೆದುಕೊಂಡರಿ? ಬಡವರ ಬಗ್ಗೆ ಬಹಳ ಮಾತಾಡುತ್ತೀರಿ ಈಗ ಅಕ್ಕಿ ಕೊಡಿ. ಬಡವರನ್ನು ಗುತ್ತಿಗೆ ಹಿಡಿದಿದ್ದೀರಾ ಇದೆಲ್ಲಾ ನಾಟಕ ಬಿಡಿ. ನಿಮ್ಮ ಸಹಾಯಕ್ಕೆ ಯಾರು ಬರಬೇಕು ನಿಮ್ಮ ನಾಯಕರು ಬರಬೇಕು. ನಿದ್ದೆಗಣ್ಣಲು ಅಕ್ಕಿ ಕೊಟ್ಟಿಲ್ಲಾ ಅಂತಾ ಬಡಬಡಿಸುತ್ತಿದ್ದೀರಿ. ಈ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಅವರ ಪಕ್ಷದವರೇ ಎಡಕ್ಕೆ ಬಲಕ್ಕೆ ನೋಡುತ್ತಿದ್ದಾರೆ. ಸುಳ್ಳು ಹೇಳಿ ವೋಟ್ ತಗೊಂಡಿರೀ ಬಹಳ ದಿನ ಉಳಿಯುವುದಿಲ್ಲ. ಸುಳ್ಳು ಹೇಳಿ ವೋಟ್ ತಗೊಂಡಿದ್ದಾರೆ ಇದೇ ನಾಟಕ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದರು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ