AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕಾವೇರಿ ಕಿಚ್ಚಿನ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ರೇಣುಕಾಚಾರ್ಯ

ಕರ್ನಾಟಕ ಬಿಜೆಪಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ವಿರೋಧಿ ಬಣಕ್ಕೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ಈ ಮೂಲಕ ಒಂದೆಡೆ ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದರೆ, ಮತ್ತೊಂದೆಡೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ.

ಕರ್ನಾಟಕದಲ್ಲಿ ಕಾವೇರಿ ಕಿಚ್ಚಿನ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Sep 29, 2023 | 2:20 PM

Share

ದಾವಣಗೆರೆ, (ಸೆಪ್ಟೆಂಬರ್ 29): ಒಂದೆಡೆ ಕರ್ನಾಟಕದಲ್ಲಿ ಕಾವೇರಿ (Cauvery Water Dispute) ಕಿಚ್ಚು ಜೋರಾಗಿದ್ದರೆ, ಮತ್ತೊಂದೆಡೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ  (MP Renukacharya) ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ. ಹೌದು…ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರನ್ನು ಮಾಡುವಂತೆ ಬಹಿರಂಗವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಇಂದು(ಸೆ.29) ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ರೆ ಪಕ್ಷಕ್ಕೆ ಲೋಕ‌ಸಭೆ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ‌ ಎಂದು ಹೇಳಿದರು.

ದಾವಣೆಗೆರೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿ ಮಾಸ್ ಲೀಡರ್. ದೇಶಕ್ಕೆ ನಾಯಕ. ಆದ್ರೆ ರಾಜ್ಯದಲ್ಲಿ ಮೋದಿ ಪೋಟೋ ತೋರಿಸಿದ್ರೆ ಸಾಲದು. ಅದು ಚುನಾವಣೆಯಲ್ಲಿ ಮತವಾಗಿ ಪರಿವರ್ತನೆ ಆಗಬೇಕು. ಬಿವೈ ವಿಜಯೇಂದ್ರಗೆ ಮತವಾಗಿ ಪವರಿವರ್ತಿಸುವ ಶಕ್ತಿ ಇದೆ. ಬರೀ ಪ್ರಧಾನಿಯವರ ಪೋಟೋ ಇಟ್ಟುಕೊಂಡ್ರೆ ಆಗದು. ರಾಜ್ಯದಲ್ಲಿ‌ ಬಿಜೆಪಿ ಮತ ತರುವ ಶಕ್ತಿ ಇರುವುದು ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರಗೆ ಮಾತ್ರ ಎಂದರು. ಈ ಮೂಲಕ ಬಿಜೆಪಿಯಲ್ಲಿನ ಯಡಿಯೂರಪ್ಪ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ, ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ: ಯತ್ನಾಳ್ ಹೇಳಿಕೆಯ ಮರ್ಮ ಇಲ್ಲಿದೆ

ಈಗ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಬಿಜೆಪಿಯಲ್ಲಿ ಕೆಲವರಿಗೆ ಬೇಸರ ಇದೆ. ಮೈತ್ರಿ ಅಂತ ಬಿಜೆಪಿಯನ್ನು ಕುಮಾರಸ್ವಾಮಿಗೆ ಅಡಾ ಇಡಲಾಗದು. ಬಿಜೆಪಿಯಲ್ಲಿ ಸಮರ್ಥ ನಾಯಕರಿದ್ದಾರೆ. ಪಕ್ಷಕ್ಕೆ ಒಳ್ಳೆಯದಾಗುವುದಾದ್ರೆ ಮೈತ್ರಿ‌ಮಾಡಿಕೊಳ್ಳಲಿ. ಈಗಾಗಲೇ ಮೈತ್ರಿ ಮಾಡಿಕೊಂಡಿದ್ದಾರೆ. ವಿಜಯೇಂದ್ರ ನಂತಹ ಯುವಕನಿಗೆ ಪಕ್ಷ ನೇತೃತ್ವ ಕೊಟ್ಟರೇ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Fri, 29 September 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?