AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ ಎಂದರು.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ
ರೇಣುಕಾಚಾರ್ಯ
ಕಿರಣ್​ ಹನಿಯಡ್ಕ
| Edited By: |

Updated on: Jul 01, 2023 | 1:29 PM

Share

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಮನ್ಸ್​​ ಪಡೆದಿದ್ದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ಹಾಗಿದ್ದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಿದರು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಬೇಕಾ? ವೋಟ್​ ಕೇಳಲು ಯಡಿಯೂರಪ್ಪ, ಮೋದಿ ಮುಖ ತೋರಿಸುವುದು ಏಕೆ? ಹಾಗಾದರೆ ರಾಜ್ಯಕ್ಕೆ, ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ; ರೇಣುಕಾಚಾರ್ಯ

ಯಡಿಯೂರಪ್ಪ ಮಾತಿಗೆ ಗೌರವ ಕೊಡ್ತೇನೆ. ಇನ್ನು ಮುಂದೆ ನಾನು ಎಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ. ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಅವರ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!