AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ ಎಂದರು.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ
ರೇಣುಕಾಚಾರ್ಯ
ಕಿರಣ್​ ಹನಿಯಡ್ಕ
| Edited By: |

Updated on: Jul 01, 2023 | 1:29 PM

Share

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಮನ್ಸ್​​ ಪಡೆದಿದ್ದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ಹಾಗಿದ್ದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಿದರು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಬೇಕಾ? ವೋಟ್​ ಕೇಳಲು ಯಡಿಯೂರಪ್ಪ, ಮೋದಿ ಮುಖ ತೋರಿಸುವುದು ಏಕೆ? ಹಾಗಾದರೆ ರಾಜ್ಯಕ್ಕೆ, ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ; ರೇಣುಕಾಚಾರ್ಯ

ಯಡಿಯೂರಪ್ಪ ಮಾತಿಗೆ ಗೌರವ ಕೊಡ್ತೇನೆ. ಇನ್ನು ಮುಂದೆ ನಾನು ಎಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ. ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಅವರ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್