AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಬೇಳೆ ಬೇಯಿಸಲು ಸಚಿವರನ್ನು ಭೇಟಿಯಾಗುತ್ತಿರುವ ರೇಣುಕಾಚಾರ್ಯ: ಬಸವರಾಜು ಶಿವಗಂಗಾ

ಆಪರೇಷನ್ ಹಸ್ತ ಆರೋಪದ ನಡುವೆ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಚಿವರನ್ನು ಭೇಟಿಯಾಗುತ್ತಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ, ಕ್ಷೇತ್ರದ ಸಮಸ್ಯೆ ಮುಂದಿಟ್ಟು ಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿ ಕೊಳ್ಳಲು ರೇಣುಕಾಚಾರ್ಯ ಸಚಿವರನ್ನ ಭೇಟಿ ಆಗುತ್ತಿದ್ದಾರೆ ಎಂದಿದ್ದಾರೆ.

ರಾಜಕೀಯ ಬೇಳೆ ಬೇಯಿಸಲು ಸಚಿವರನ್ನು ಭೇಟಿಯಾಗುತ್ತಿರುವ ರೇಣುಕಾಚಾರ್ಯ: ಬಸವರಾಜು ಶಿವಗಂಗಾ
ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಹಾಲಿ ಶಾಸಕ ಬಸವರಾಜು ವಿ ಶಿವಗಂಗಾ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: Rakesh Nayak Manchi|

Updated on: Aug 27, 2023 | 8:07 PM

Share

ದಾವಣಗೆರೆ, ಆಗಸ್ಟ್ 27: ಹೊನ್ನಾಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ (M.P.Renukacharya) ಅವರು ಕಾಂಗ್ರೆಸ್ ಸಚಿವರನ್ನ ಭೇಟಿ ಮಾಡುತ್ತಿದ್ದು, ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ (Basavaraju V Shivaganga) ಹೇಳಿದರು. ಪಟ್ಟಣದಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಪ್ರಚಾರ ಪ್ರಿಯರು. ಅಧಿಕಾರ ಇರಲಿ ಬಿಡಲಿ ಅವರಿಗೆ ಪ್ರಚಾರ ಬೇಕು, ಹೀಗಾಗಿ ಸಚಿವರ ಭೇಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಕಿಕೊಳ್ಳುತ್ತಿದ್ದಾರೆ ಎಂದರು.

ಕ್ಷೇತ್ರದ ಸಮಸ್ಯೆಗಳ ನೆಪದಲ್ಲಿ ರೇಣುಕಾಚಾರ್ಯ ಅವರು ಸಚಿವರುಗಳನ್ನ ಭೇಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನೇ ಆಯ್ಕೆ ಮಾಡದ ಬಿಜೆಪಿ ಪಕ್ಷ ನಾವಿಕನಿಲ್ಲದ ದೋಣಿಯಾಗಿದ್ದು, ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರೇಣುಕಾಚಾರ್ಯ ಮುಂದಾಗುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಸಚಿವರು ಪ್ರಾಮುಖ್ಯತೆ ನೀಡಬಾರದು. ಕಾಂಗ್ರೆಸ್ ಶಾಸಕರಿಗೆ ಸಚಿವರನ್ನ ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ. ಕೊನೆ ಪಕ್ಷ ಸಚಿವರುಗಳಿಗೆ ಫೋನ್ ಕರೆ ಮಾಡಿದರೂ ರೆಸ್ಪಾನ್ಸ್ ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ಮಾಜಿ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಇದು ಸೌಹಾರ್ದಯುತ ಭೇಟಿ ಅಷ್ಟೇ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಸ್ಪಷ್ಟನೆ

ಸಚಿವರನ್ನ ಭೇಟಿ ಮಾಡಿರುವ ಫೋಟೋಗಳನ್ನ ರೇಣುಕಾಚಾರ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪ್ರಚಾರ ಪಡೆಯುತ್ತಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ. ಇಂಥವರಿಗೆ ಕಾಂಗ್ರೆಸ್ ನಾಯಕರು ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದು ಬಸವರಾಜು ವಿ ಶಿವಗಂಗಾ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೇಣುಕಾಚಾರ್ಯಗೆ ಹೊನ್ನಾಳಿಯಲ್ಲಿ ರಾಜಕೀಯ ಜೀವನ ನೀಡಿ, ಅಧಿಕಾರ ಕೊಟ್ಟು ಬೆಳಸಿದವರು. ಆದರೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಶಾಸಕರೊಂದಿಗೆ ರೆಸಾರ್ಟ್ ರಾಜಕೀಯ ಮಾಡಿ ಅಧಿಕಾರದಿಂದ ಕೆಳಗಿಳಿಸಿದ್ದು ಇದೇ ರೇಣುಕಾಚಾರ್ಯ ಅವರು. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಇದೀಗ ಅಧಿಕಾರ ಇಲ್ಲದ ಕಾರಣ ಪ್ರಚಾರಕ್ಕಾಗಿ ಕಾಂಗ್ರೆಸ್ ಸಚಿವರ ಭೇಟಿ ಮಾಡುವ ನಾಟಕ ಶುರು ಮಾಡಿದ್ದಾರೆ ಎಂದರು.

ಕಳೆದ ಬಾರಿ ಅವರದ್ದೇ ಸರ್ಕಾರವಿದ್ದರೂ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೊನ್ನಾಳಿ ಜನರು ತಿರಸ್ಕಾರ ಮಾಡಿದ್ದು, ಇತ್ತೀಚೆಗೆ ಗ್ಯಾರಂಟಿಗಳ ವಿರುದ್ಧ ಅಭಿಯಾನ ಮಾಡಿದಂತ ರೇಣುಕಾಚಾರ್ಯಗೆ ಕಾಂಗ್ರೆಸ್ ನಾಯಕರು ಇಂಥವರನ್ನ ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು. ಲೋಕಸಭಾ ಚುನಾವಣೆ ಹತ್ತಿರವಿದ್ದು ಕಾಂಗ್ರೆಸ್ ಕಾರ್ಯಕರ್ತರಿಗೆ ಇಂಥ ವಿಚಾರ ಗೊಂದಲಕ್ಕೆ ಕಾರಣವಾಗುತ್ತಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ