AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ

ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಇಂದು ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ನೀಡಲಾಯಿತು. ಈ ವೇಳೆ ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ಎಸ್​. ಮುನಿಸ್ವಾಮಿ ಟೀಕಿಸಿದ್ದಾರೆ.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ
ಸಂಸದ ಎಸ್.ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 15, 2023 | 3:51 PM

Share

ಕೋಲಾರ: ಅನ್ನಭಾಗ್ಯ ಯೋಜನೆ ಅಡಿ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಆದರೆ ಈಗ ಮತ್ತೆ ಐದು ಕೆಜಿ ಅನ್ನೋದು ಸರಿಯಲ್ಲ ಎಂದು ಬಿಜೆಪಿ ಸಂಸದ ಎಸ್. ಮುನಿಸ್ವಾಮಿ (S Muniswamy) ಹೇಳಿದ್ದಾರೆ. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಕಾರ್ಯಕ್ರಮ ವೇದಿಕೆ ಮೇಲೆ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ಇನ್ನುಳಿದ 10 ಕೆಜಿ ಅಕ್ಕಿಯ 340 ರೂ. ಅಕೌಂಟ್​ಗಳಿಗೆ ಹಾಕಬೇಕು ಎಂದಿದ್ದಾರೆ.

10 ಕೆಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರವೆಂದು ನಾವೇ ಹೇಳುತ್ತೇವೆ. ಗ್ಯಾರಂಟಿ ಹೇಳುವಾಗ ಷರತ್ತು ಇರಲಿಲ್ಲ, ಈಗ ಕಂಡಿಷನ್ ಅಂತಿದ್ದಾರೆ. ಕೊರೊನಾ ವೇಳೆ ಯಾವುದೇ ಕಂಡಿಷನ್ ಇಲ್ಲದೆ ಲಸಿಕೆ ಹಾಕಿದ್ದೇವೆ. ಸ್ವಚ್ಚ ಭಾರತ್ ಮಿಷನ್​ ಯೋಜನೆ ಅಡಿ ಶೌಚಾಲಯಗಳ ನಿರ್ಮಾಣಕ್ಕೆ ಯಾವುದೇ ಕಂಡಿಷನ್ ಹಾಕಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಒಂದೆಡೆ ಅನ್ನಭಾಗ್ಯ ಯೋಜನೆಗೆ ಚಾಲನೆ ಕಾರ್ಯಕ್ರಮದಿಂದಾಗಿ ವೇದಿಕೆ ಪಕ್ಕದ ಕಾಲೇಜಿನಲ್ಲಿ ಕಿರುಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸೌಂಡ್​​ನಿಂದಾಗಿ ತೊಂದರೆ ಉಂಟಾಗಿದೆ. ಜಿಲ್ಲೆಯ ಮಾಲೂರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಒಂದೆಡೆ ಪಿಯುಸಿ ಮಕ್ಕಳಿಗೆ ಕಿರುಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಯಾವಾಗಿನಿಂದ ಅರ್ಜಿ ಸಲ್ಲಿಕೆ? ಯಾರು ಅರ್ಹರು? ಹೇಗೆ ಸಲ್ಲಿಸಬೇಕು? ಸಂಪೂರ್ಣ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್​

ಆಯೋಜಕರ ಬೇಜವಬ್ದಾರಿತನದಿಂದ ವಿದ್ಯಾರ್ಥಿನಿಯರು ಪರದಾಡಿದ್ದಾರೆ. ಜೋರು ಧ್ವನಿವರ್ಧಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತ್ತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹಾಗೂ ಆಹಾರ ಸಚಿವ ಕೆಹೆಚ್ ಮುನಿಯಪ್ಪ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ