AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ

ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಇಂದು ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ನೀಡಲಾಯಿತು. ಈ ವೇಳೆ ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ಎಸ್​. ಮುನಿಸ್ವಾಮಿ ಟೀಕಿಸಿದ್ದಾರೆ.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ
ಸಂಸದ ಎಸ್.ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 15, 2023 | 3:51 PM

Share

ಕೋಲಾರ: ಅನ್ನಭಾಗ್ಯ ಯೋಜನೆ ಅಡಿ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಆದರೆ ಈಗ ಮತ್ತೆ ಐದು ಕೆಜಿ ಅನ್ನೋದು ಸರಿಯಲ್ಲ ಎಂದು ಬಿಜೆಪಿ ಸಂಸದ ಎಸ್. ಮುನಿಸ್ವಾಮಿ (S Muniswamy) ಹೇಳಿದ್ದಾರೆ. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಕಾರ್ಯಕ್ರಮ ವೇದಿಕೆ ಮೇಲೆ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ಇನ್ನುಳಿದ 10 ಕೆಜಿ ಅಕ್ಕಿಯ 340 ರೂ. ಅಕೌಂಟ್​ಗಳಿಗೆ ಹಾಕಬೇಕು ಎಂದಿದ್ದಾರೆ.

10 ಕೆಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರವೆಂದು ನಾವೇ ಹೇಳುತ್ತೇವೆ. ಗ್ಯಾರಂಟಿ ಹೇಳುವಾಗ ಷರತ್ತು ಇರಲಿಲ್ಲ, ಈಗ ಕಂಡಿಷನ್ ಅಂತಿದ್ದಾರೆ. ಕೊರೊನಾ ವೇಳೆ ಯಾವುದೇ ಕಂಡಿಷನ್ ಇಲ್ಲದೆ ಲಸಿಕೆ ಹಾಕಿದ್ದೇವೆ. ಸ್ವಚ್ಚ ಭಾರತ್ ಮಿಷನ್​ ಯೋಜನೆ ಅಡಿ ಶೌಚಾಲಯಗಳ ನಿರ್ಮಾಣಕ್ಕೆ ಯಾವುದೇ ಕಂಡಿಷನ್ ಹಾಕಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಒಂದೆಡೆ ಅನ್ನಭಾಗ್ಯ ಯೋಜನೆಗೆ ಚಾಲನೆ ಕಾರ್ಯಕ್ರಮದಿಂದಾಗಿ ವೇದಿಕೆ ಪಕ್ಕದ ಕಾಲೇಜಿನಲ್ಲಿ ಕಿರುಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸೌಂಡ್​​ನಿಂದಾಗಿ ತೊಂದರೆ ಉಂಟಾಗಿದೆ. ಜಿಲ್ಲೆಯ ಮಾಲೂರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಒಂದೆಡೆ ಪಿಯುಸಿ ಮಕ್ಕಳಿಗೆ ಕಿರುಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಯಾವಾಗಿನಿಂದ ಅರ್ಜಿ ಸಲ್ಲಿಕೆ? ಯಾರು ಅರ್ಹರು? ಹೇಗೆ ಸಲ್ಲಿಸಬೇಕು? ಸಂಪೂರ್ಣ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್​

ಆಯೋಜಕರ ಬೇಜವಬ್ದಾರಿತನದಿಂದ ವಿದ್ಯಾರ್ಥಿನಿಯರು ಪರದಾಡಿದ್ದಾರೆ. ಜೋರು ಧ್ವನಿವರ್ಧಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತ್ತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹಾಗೂ ಆಹಾರ ಸಚಿವ ಕೆಹೆಚ್ ಮುನಿಯಪ್ಪ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ