AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ

ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಇಂದು ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ನೀಡಲಾಯಿತು. ಈ ವೇಳೆ ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ಎಸ್​. ಮುನಿಸ್ವಾಮಿ ಟೀಕಿಸಿದ್ದಾರೆ.

ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ
ಸಂಸದ ಎಸ್.ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 15, 2023 | 3:51 PM

Share

ಕೋಲಾರ: ಅನ್ನಭಾಗ್ಯ ಯೋಜನೆ ಅಡಿ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಆದರೆ ಈಗ ಮತ್ತೆ ಐದು ಕೆಜಿ ಅನ್ನೋದು ಸರಿಯಲ್ಲ ಎಂದು ಬಿಜೆಪಿ ಸಂಸದ ಎಸ್. ಮುನಿಸ್ವಾಮಿ (S Muniswamy) ಹೇಳಿದ್ದಾರೆ. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಕಾರ್ಯಕ್ರಮ ವೇದಿಕೆ ಮೇಲೆ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ಇನ್ನುಳಿದ 10 ಕೆಜಿ ಅಕ್ಕಿಯ 340 ರೂ. ಅಕೌಂಟ್​ಗಳಿಗೆ ಹಾಕಬೇಕು ಎಂದಿದ್ದಾರೆ.

10 ಕೆಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರವೆಂದು ನಾವೇ ಹೇಳುತ್ತೇವೆ. ಗ್ಯಾರಂಟಿ ಹೇಳುವಾಗ ಷರತ್ತು ಇರಲಿಲ್ಲ, ಈಗ ಕಂಡಿಷನ್ ಅಂತಿದ್ದಾರೆ. ಕೊರೊನಾ ವೇಳೆ ಯಾವುದೇ ಕಂಡಿಷನ್ ಇಲ್ಲದೆ ಲಸಿಕೆ ಹಾಕಿದ್ದೇವೆ. ಸ್ವಚ್ಚ ಭಾರತ್ ಮಿಷನ್​ ಯೋಜನೆ ಅಡಿ ಶೌಚಾಲಯಗಳ ನಿರ್ಮಾಣಕ್ಕೆ ಯಾವುದೇ ಕಂಡಿಷನ್ ಹಾಕಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಒಂದೆಡೆ ಅನ್ನಭಾಗ್ಯ ಯೋಜನೆಗೆ ಚಾಲನೆ ಕಾರ್ಯಕ್ರಮದಿಂದಾಗಿ ವೇದಿಕೆ ಪಕ್ಕದ ಕಾಲೇಜಿನಲ್ಲಿ ಕಿರುಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸೌಂಡ್​​ನಿಂದಾಗಿ ತೊಂದರೆ ಉಂಟಾಗಿದೆ. ಜಿಲ್ಲೆಯ ಮಾಲೂರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಒಂದೆಡೆ ಪಿಯುಸಿ ಮಕ್ಕಳಿಗೆ ಕಿರುಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಯಾವಾಗಿನಿಂದ ಅರ್ಜಿ ಸಲ್ಲಿಕೆ? ಯಾರು ಅರ್ಹರು? ಹೇಗೆ ಸಲ್ಲಿಸಬೇಕು? ಸಂಪೂರ್ಣ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್​

ಆಯೋಜಕರ ಬೇಜವಬ್ದಾರಿತನದಿಂದ ವಿದ್ಯಾರ್ಥಿನಿಯರು ಪರದಾಡಿದ್ದಾರೆ. ಜೋರು ಧ್ವನಿವರ್ಧಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತ್ತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹಾಗೂ ಆಹಾರ ಸಚಿವ ಕೆಹೆಚ್ ಮುನಿಯಪ್ಪ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ