AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲ್ಲಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ವಿಚಾರ: ಅವತ್ತು ನನ್ನ ಮನೆಗೆ ಗೂಂಡಾಗಳು ನುಗ್ಗಿ ದಾಳಿ ಮಾಡಿದರು -ಬೆಂಗಳೂರಲ್ಲಿ ಕೇಜ್ರಿವಾಲ್ ಕಿಡಿ

ದೆಹಲಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ವಿಚಾರವಾಗಿ ಬಿಜೆಪಿ ವಿರುದ್ಧ ಅರವಿಂದ ಕೇಜ್ರಿವಾಲ್ ಕಿಡಿಕಾರಿದ್ದು, ಅವತ್ತು ನನ್ನ ಮನೆಗೆ ನುಗ್ಗಿ ಗೂಂಡಾಗಳು ದಾಳಿ ಮಾಡಿದ್ದಾರೆ.

ದಿಲ್ಲಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ವಿಚಾರ: ಅವತ್ತು ನನ್ನ ಮನೆಗೆ ಗೂಂಡಾಗಳು ನುಗ್ಗಿ ದಾಳಿ ಮಾಡಿದರು -ಬೆಂಗಳೂರಲ್ಲಿ ಕೇಜ್ರಿವಾಲ್ ಕಿಡಿ
ದೆಹಲಿ ಸಿಎಂ ಕೇಜ್ರಿವಾಲ್
TV9 Web
| Edited By: |

Updated on: Apr 21, 2022 | 8:18 PM

Share

ಬೆಂಗಳೂರು: ಮೋದಿ ನನ್ನ ನಿವಾಸದ ಮೇಲೆ CBI ದಾಳಿ ಮಾಡಿಸಿದರು. ನನ್ನ ಬೆಡ್ ರೂಮ್​ ತಪಾಸಣೆ ಮಾಡಿದ್ರೂ ಏನೂ ಸಿಗಲಿಲ್ಲ ಎಂದು ಬೆಂಗಳೂರಿನ ರೈತ ಸಮಾವೇಶದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ನಮ್ಮ ಮಂತ್ರಿಗಳು, ಶಾಸಕರ ಮನೆಯಲ್ಲೂ ಏನೂ ಸಿಗಲಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ, ರಾಜಕೀಯ ಮಾಡೋಕೆ ಬರಲ್ಲ. ಒಬ್ಬ ಸಾಮಾನ್ಯ ಮನುಷ್ಯನ ಕಷ್ಟಗಳೆಲ್ಲವೂ ನನಗೆ ಗೊತ್ತಿದೆ. ಮಗುವಿಗೆ ಒಳ್ಳೆಯ ಶಿಕ್ಷಣ ಕೊಡಬೇಕು ಅನ್ನೋ‌ ಆಸೆ‌ ಇರುತ್ತೆ. ದೆಹಲಿಯಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆ ಉತ್ತಮ. ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಅಂಕ ಗಳಿಸುತ್ತಿದ್ದಾರೆ. ಸ್ವಿಮ್ಮಿಂಗ್ ಪೂಲ್, ಆಡಿಟೋರಿಯಂ, ಲಿಫ್ಟ್ ಎಲ್ಲವೂ ಇದೆ. 75 ವರ್ಷಗಳಲ್ಲಿ ಯಾವ ಸರ್ಕಾರವೂ ಇದನ್ನು ಮಾಡಿರಲಿಲ್ಲ. ನಾವು ಪ್ರಾಮಾಣಿಕರು ಅಂತಾ ಪ್ರಮಾಣ ಪತ್ರ ಕೊಟ್ಟಿದ್ದಾರೆ. ಪ್ರಧಾನಿ ಮೋದಿಯವರೇ ನಮಗೆ ಪ್ರಮಾಣ ಪತ್ರ ಕೊಟ್ಟಿದ್ದಾರೆ. ದೇಶದ ಅತ್ಯಂತ ಪ್ರಾಮಾಣಿಕ ಸಿಎಂ ಅಂತಾ ಸರ್ಟಿಫಿಕೇಟ್ ಇದೆ. ಐಟಿ ದಾಳಿ ಮಾಡಿಸಿದ್ರೂ ಏನೂ ಸಿಗಲಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ವಿಚಾರವಾಗಿ ಬಿಜೆಪಿ ವಿರುದ್ಧ ಅರವಿಂದ ಕೇಜ್ರಿವಾಲ್ ಕಿಡಿಕಾರಿದ್ದು, ಅವತ್ತು ನನ್ನ ಮನೆಗೆ ನುಗ್ಗಿ ಗೂಂಡಾಗಳು ದಾಳಿ ಮಾಡಿದ್ದಾರೆ. ಆಗ ನಾನು, ನನ್ನ ಪತ್ನಿ, ಮಕ್ಕಳೂ ಮನೆಯಲ್ಲಿ ಇರಲಿಲ್ಲ. ಅವತ್ತು ನನ್ನ ಮನೆಯಲ್ಲಿ ನನ್ನ ತಂದೆ-ತಾಯಿ ಮಾತ್ರ ಇದ್ದರು. ಆದರೂ ಗೂಂಡಾಗಳಿಗೆ ಕೇಂದ್ರ ಸರ್ಕಾರ ಶಿಕ್ಷೆ ಕೊಡಲಿಲ್ಲ. ಬದಲಾಗಿ ಆ ಗೂಂಡಾಗಳನ್ನ ಮರುದಿನ ಪಕ್ಷಕ್ಕೆ ಸೇರಿಸಿಕೊಂಡ್ರು. ಗೂಂಡಾಗಳು, ಭ್ರಷ್ಟಾಚಾರಿಗಳು ಬಿಜೆಪಿ ಸೇರ್ಪಡೆ ಆಗ್ತಿದ್ದಾರೆ. ಅತ್ಯಾಚಾರಿಗಳ ಪರ ಬಿಜೆಪಿ ಪಕ್ಷದವರೆಲ್ಲ ಬೆಂಬಲಕ್ಕೆ ನಿಲ್ತಾರೆ ಎಂದರು.

ಇದನ್ನೂ ಓದಿ:

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 21ರ ಚಿನ್ನ, ಬೆಳ್ಳಿ ದರ ಇಲ್ಲಿದೆ

Afghanistan Blast: ಅಫ್ಘಾನಿಸ್ತಾನದ ಮಸೀದಿಗಳಲ್ಲಿ ಭಾರೀ ಸ್ಫೋಟ; 22 ಜನ ಸಾವು, ಹಲವರಿಗೆ ಗಾಯ

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್