AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮಿಸ್ಟರ್ ಡಿ.ಕೆ.ಶಿವಕುಮಾರ್ ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. 

ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಡಿಸಿಎಂ ಡಿ.ಕೆ.ಶಿವಕುಮಾರ್, JDS ವರಿಷ್ಠ ಹೆಚ್​.ಡಿ.ದೇವೇಗೌಡ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 02, 2023 | 1:27 PM

Share

ಬೆಂಗಳೂರು, ಅಕ್ಟೋಬರ್​ 02: ಮಿಸ್ಟರ್ ಡಿ.ಕೆ.ಶಿವಕುಮಾರ್ (DK Shivakumar) ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ JDS​​ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, JDS ವರಿಷ್ಠ ಹೆಚ್​.ಡಿ.ದೇವೇಗೌಡ ಮಾತು ನನಗೆ ಆಶೀರ್ವಾದ ಇದ್ದಂತೆ. ವಿಸರ್ಜನೆ ಮಾಡುತ್ತೇವೆ ಎಂದಾಗ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ರಾಜಕಾರಣ ಹಾವು ಏಣಿ ಆಟ, ಚೆಸ್​ ಗೇಮ್. ಹಿಂದೆ ನೀವೇನು ಮಾಡಿದಿರಿ, ಬಿಜೆಪಿಯವರು ಏನು ಮಾಡಿದರು ಗೊತ್ತಿದೆ. ನೀವು ಹೆದರಿಸಿದರೆ ಡಿಕೆ ಹೆದರಲ್ಲ ಎನ್ನೋದು ನಿಮಗೂ ಗೊತ್ತಿದೆ. ನೀವು ಯಾರನ್ನು ಬೇಕಾದರೂ ಸಹ ಕಟ್ಟಿಹಾಕಿಕೊಳ್ಳಿ, ಹಿಡಿದಿಟ್ಟುಕೊಳ್ಳಿ. ಆದರೆ ಮನೆಮನೆಗೆ ಹೋಗಿ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ.

ಹೆಚ್​.ಡಿ.ದೇವೇಗೌಡರ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ವಾಗ್ದಾಳಿ

ನಾನು ನಮ್ರತೆಯಿಂದ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ. 88ರಲ್ಲೂ ರಾಜಕಾರಣ ಮಾಡಿದ್ದೇನೆ, 89ರಲ್ಲೂ ರಾಜಕಾರಣ ಮಾಡಿದ್ದೇನೆ. ಸಾತನೂರಿನಲ್ಲಿ ನಾನು ಏನು ಮಾಡಿದೆ, ತೇಜಸ್ವಿನಿ ಏನು ಮಾಡಿದ್ರು ಗೊತ್ತು.

ಇದನ್ನೂ ಓದಿ: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಬಿಜೆಪಿ ಪ್ರಶ್ನೆ

ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು

ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ತಾವು ಒಂದೊಂದು ದಿನ ಎಲ್ಲಿ ಬೇಕಾದ್ರೂ ಸಂಬಂಧ ಬೆಳೆಸಿಕೊಳ್ಳಬಹುದು. ದಂಡ ನಾಯಕರಾಗಿ ಎಷ್ಟು ಸಲ ಪಕ್ಷ ವಿಸರ್ಜನೆ ಮಾಡ್ತೀವಿ ಅಂತೀರಾ? ಹಾಗಾದರೆ ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು.

ಇದನ್ನೂ ಓದಿ: ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಕಾಂಗ್ರೆಸ್ ಎಂಎಲ್​ಸಿ ಆಗಿದ್ದ ಇಬ್ರಾಹಿಂರನ್ನು ಕರೆದುಕೊಂಡು ಹೋದರು. ಆಗ ನಾನೂ ಕೂಡ ನಿಮ್ಮ ತರಹವೇ ಮಿಸ್ಟರ್ ಅಂತ ಹೇಳಬಹುದಿತ್ತಲ್ಲವೇ. ಆದರೆ ನಾನು ಇಂಗ್ಲಿಷ್​​ನಲ್ಲಿ ಮಿಸ್ಟರ್ ಅಂತಾ ನಿಮಗೆ ಹೇಳಲ್ಲ. ಸಾಗರೋಪಾದಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ನೋಡುತ್ತೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ