ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 02, 2023 | 1:27 PM

ಮಿಸ್ಟರ್ ಡಿ.ಕೆ.ಶಿವಕುಮಾರ್ ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. 

ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಡಿಸಿಎಂ ಡಿ.ಕೆ.ಶಿವಕುಮಾರ್, JDS ವರಿಷ್ಠ ಹೆಚ್​.ಡಿ.ದೇವೇಗೌಡ
Follow us on

ಬೆಂಗಳೂರು, ಅಕ್ಟೋಬರ್​ 02: ಮಿಸ್ಟರ್ ಡಿ.ಕೆ.ಶಿವಕುಮಾರ್ (DK Shivakumar) ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ JDS​​ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, JDS ವರಿಷ್ಠ ಹೆಚ್​.ಡಿ.ದೇವೇಗೌಡ ಮಾತು ನನಗೆ ಆಶೀರ್ವಾದ ಇದ್ದಂತೆ. ವಿಸರ್ಜನೆ ಮಾಡುತ್ತೇವೆ ಎಂದಾಗ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ರಾಜಕಾರಣ ಹಾವು ಏಣಿ ಆಟ, ಚೆಸ್​ ಗೇಮ್. ಹಿಂದೆ ನೀವೇನು ಮಾಡಿದಿರಿ, ಬಿಜೆಪಿಯವರು ಏನು ಮಾಡಿದರು ಗೊತ್ತಿದೆ. ನೀವು ಹೆದರಿಸಿದರೆ ಡಿಕೆ ಹೆದರಲ್ಲ ಎನ್ನೋದು ನಿಮಗೂ ಗೊತ್ತಿದೆ. ನೀವು ಯಾರನ್ನು ಬೇಕಾದರೂ ಸಹ ಕಟ್ಟಿಹಾಕಿಕೊಳ್ಳಿ, ಹಿಡಿದಿಟ್ಟುಕೊಳ್ಳಿ. ಆದರೆ ಮನೆಮನೆಗೆ ಹೋಗಿ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ.

ಹೆಚ್​.ಡಿ.ದೇವೇಗೌಡರ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ವಾಗ್ದಾಳಿ

ನಾನು ನಮ್ರತೆಯಿಂದ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ. 88ರಲ್ಲೂ ರಾಜಕಾರಣ ಮಾಡಿದ್ದೇನೆ, 89ರಲ್ಲೂ ರಾಜಕಾರಣ ಮಾಡಿದ್ದೇನೆ. ಸಾತನೂರಿನಲ್ಲಿ ನಾನು ಏನು ಮಾಡಿದೆ, ತೇಜಸ್ವಿನಿ ಏನು ಮಾಡಿದ್ರು ಗೊತ್ತು.

ಇದನ್ನೂ ಓದಿ: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಬಿಜೆಪಿ ಪ್ರಶ್ನೆ

ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು

ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ತಾವು ಒಂದೊಂದು ದಿನ ಎಲ್ಲಿ ಬೇಕಾದ್ರೂ ಸಂಬಂಧ ಬೆಳೆಸಿಕೊಳ್ಳಬಹುದು. ದಂಡ ನಾಯಕರಾಗಿ ಎಷ್ಟು ಸಲ ಪಕ್ಷ ವಿಸರ್ಜನೆ ಮಾಡ್ತೀವಿ ಅಂತೀರಾ? ಹಾಗಾದರೆ ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು.

ಇದನ್ನೂ ಓದಿ: ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಕಾಂಗ್ರೆಸ್ ಎಂಎಲ್​ಸಿ ಆಗಿದ್ದ ಇಬ್ರಾಹಿಂರನ್ನು ಕರೆದುಕೊಂಡು ಹೋದರು. ಆಗ ನಾನೂ ಕೂಡ ನಿಮ್ಮ ತರಹವೇ ಮಿಸ್ಟರ್ ಅಂತ ಹೇಳಬಹುದಿತ್ತಲ್ಲವೇ. ಆದರೆ ನಾನು ಇಂಗ್ಲಿಷ್​​ನಲ್ಲಿ ಮಿಸ್ಟರ್ ಅಂತಾ ನಿಮಗೆ ಹೇಳಲ್ಲ. ಸಾಗರೋಪಾದಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ನೋಡುತ್ತೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.