BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಕಾಣಿಸಿಕೊಳ್ಳದ ಪ್ರೀತಂ ಗೌಡ: ಕುಮರಸ್ವಾಮಿಗೆ ಮೈಲುಗೈ

|

Updated on: Aug 03, 2024 | 2:52 PM

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾಣಸಿಕೊಂಡಿಲ್ಲ.

BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಕಾಣಿಸಿಕೊಳ್ಳದ ಪ್ರೀತಂ ಗೌಡ: ಕುಮರಸ್ವಾಮಿಗೆ ಮೈಲುಗೈ
ಪ್ರೀತಂ ಗೌಡ
Follow us on

ಬೆಂಗಳೂರು, ಆಗಸ್ಟ್​​ 03: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣ (Muda Scam) ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ (Preetham gowda) ಕಾಣಸಿಕೊಂಡಿಲ್ಲ. ಈ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಷರತ್ತನ್ನು ಬಿಜೆಪಿ ಪಾಲಿಸಿದೆ.

ಏನದು ಷರತ್ತು, ಪ್ರೀತಂ ಗೌಡ ಬರದೆ ಇರಲು ಕಾರಣವೇನು?

ರಾಜ್ಯ ಕಾಂಗ್ರೆಸ್​ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ, ಜೆಡಿಎಸ್​ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಸಿದ್ಧತೆ ಸಮಯದಲ್ಲೇ ಅಪಸ್ವರ ಕೇಳಿಬಂದಿತ್ತು. ಜೆಡಿಎಸ್ ನಾಯಕರು​ ಪಾದಯಾತ್ರೆಗೆ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದರು.

ಆರಂಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಿದೆ, ಹೀಗಾಗಿ ಪಾದಯಾತ್ರೆ ನಡೆಸುವುದು ಬೇಡ ಅಂತ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಜೆಡಿಎಸ್​ ನಾಯಕರು ಪುನರ್ ಉಚ್ಚರಿಸಿದ್ದರು.​ ಆದರೆ ಬಿಜೆಪಿ ಇದನ್ನು ಕಿವಿಗೆ ಹಾಕಿಕೊಳ್ಳದೆ ತಯಾರಿಯನ್ನು ಜೋರಾಗಿಯೇ ನಡೆಸಿತ್ತು. ಪಾದಯಾತ್ರೆಗೆ ಪೂರ್ವ ಸಿದ್ಧತೆ ಸಭೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಹ್ವನಿಸಲಾಗಿತ್ತು. ಈ ಸಭೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಭಾಗಿಯಾಗಿದ್ದರು. ಅಲ್ಲದೆ, ಪಾದಯಾತ್ರೆ ಕೂಡ ಪ್ರೀತಂ ಗೌಡ ನೇತೃತ್ವದಲ್ಲೇ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದನ್ನೂ ಓದಿ: ಕಾವೇರಿಯಿಂದ ಮುಡಾ ವರೆಗೆ: ಕರ್ನಾಟಕದಲ್ಲಿ ನಡೆದ ಪಾದಯಾತ್ರೆಗಳ ಇಣುಕು ನೋಟ

ಪ್ರೀತಂ ಗೌಡ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಸಭೆಯಲ್ಲಿ ಭಾಗಿಯಾಗಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ನಿಗಿ ನಿಗಿ ಕೆಂಡದಂತಾಗಿದ್ದರು. ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು.

ಕುಮಾರಸ್ವಾಮಿ ಆಕ್ರೋಶಕ್ಕೆ ಕಾರಣ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಅನ್ನು ಪ್ರೀತಂ ಗೌಡ ಅವರು ತಮ್ಮ ಬೆಂಬಲಿಗರ ಮೂಲಕ ಹಂಚಿದ್ದಾರೆ. ದೇವೇಗೌಡರ ಕುಟುಂಬಕ್ಕೆ ವಿಷ ಹಾಕಲು ಹೊರಟಿದ್ದವರನ್ನು ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ಮತ್ತು ಪಾದಯಾತ್ರೆ ಬಗ್ಗೆ ನಮಗೆ ಯಾವ ಮಾಹಿತಿ ನೀಡಲ್ಲ, ನಾವು ಪಾದಯಾತ್ರೆಗೆ ಬೆಂಬಲಿಸಲ್ಲ ಎಂದು ಬಹಿರಂಗವಾಗಿ ಹೇಳಿದ್ದರು.

ಹೈಕಮಾಂಡ್​ ರಾಜಿ ಸಂಧಾನ

ಪಾದಯಾತ್ರೆಗೆ ಆರಂಭದಲ್ಲೇ ವಿಘ್ನ ಬಂದಿದ್ದರಿದ್ದ, ಎಚ್ಚತ್ತ ಬಿಜೆಪಿ ಹೈಕಮಾಂಡ್​ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ರಾಜಿಸಂಧಾನ ಮಾಡಿದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹೈಕಮಾಂಡ್​ ಮುಂದೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿದ್ದರು. ಅದರಂತೆ ಇದೀಗ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪ್ರೀತಂಗೌಡ ಭಾಗಿಯಾಗಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:43 pm, Sat, 3 August 24