AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಟಮ್ಮಗೆ ಅರಳು ಮರುಳು, ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ಅದು ಕೊನೆ ದಿನಗಳನ್ನು ಎಣಿಸ್ತಾ ಇದೆ: ಎಂ.ಪಿ. ಕುಮಾರಸ್ವಾಮಿ

MP Kumaraswamy: ನಮ್ಮ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇದೆ. ಕ್ಷೇತ್ರದಲ್ಲಿ ನಾನು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಇದು ಅವರಿಗೆ ಸಹಿಸಲು ಆಗ್ತಾ ಇಲ್ಲ. ಅವರಿಗೆ ಸವಾಲು ಹಾಕುತ್ತೇನೆ. ತಾಕತ್ ಇದ್ರೆ ಗೆದ್ದು ಬರಲಿ ಎಂದು ಮೋಟಮ್ಮಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸವಾಲು ಹಾಕಿದರು

ಮೋಟಮ್ಮಗೆ ಅರಳು ಮರುಳು, ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ಅದು ಕೊನೆ ದಿನಗಳನ್ನು ಎಣಿಸ್ತಾ ಇದೆ: ಎಂ.ಪಿ. ಕುಮಾರಸ್ವಾಮಿ
ಮೋಟಮ್ಮಗೆ ಅರಳು ಮರುಳು, ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ಅದು ಕೊನೆ ದಿನಗಳನ್ನು ಎಣಿಸ್ತಾ ಇದೆ: ಎಂ.ಪಿ. ಕುಮಾರಸ್ವಾಮಿ
TV9 Web
| Edited By: |

Updated on:Jun 16, 2022 | 3:18 PM

Share

ಬೆಂಗಳೂರು: ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಂದು ಬೆಂಗಳೂರಿಗೆ ಆಗಮಿಸಿದ್ದು, ನಿನ್ನೆ ಕಾಂಗ್ರೆಸ್​ ನಾಯಕಿ ಮೋಟಮ್ಮ (Congress Leader Motamma) ತಮ್ಮ ವಿರುದ್ಧ ಮಾಡಿದ್ದ ವಾಗ್ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಈ ಸಂಬಂಧ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಎಂ.ಪಿ. ಕುಮಾರಸ್ವಾಮಿ (Mudigere BJP MLA MP Kumaraswamy) ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿರುವ ಮೋಟಮ್ಮ ಅವರಿಗೆ ಬುದ್ದಿ ಅರಳು ಮರುಳು ಆಗಿದೆ. ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ಕಾಂಗ್ರೆಸ್ ಕೊನೆಯ ದಿನಗಳನ್ನು ಎಣಿಸುತ್ತಾ ಇದೆ. ಬಿಜೆಪಿ ನನಗೆ ಏನು ಕಡಿಮೆ ಮಾಡಿದೆ? ಅವರು ನನ್ನ ಎದುರೆ ಚುನಾವಣೆಯಲ್ಲಿ ಸೋಲೋದು. ಕಾಂಗ್ರೆಸ್ ನಲ್ಲಿ ಅವರಿಗೆ ಈಗ ಏನೂ ಇಲ್ಲವಾಗಿದೆ. ನನಗೆ ಆಗದೇ ಇರುವವರು ಅವರಿಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಗುಡುಗಿದ್ದಾರೆ.

ನಮ್ಮ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇದೆ. ಕ್ಷೇತ್ರದಲ್ಲಿ ನಾನು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಇದು ಅವರಿಗೆ ಸಹಿಸಲು ಆಗ್ತಾ ಇಲ್ಲ. ಅವರಿಗೆ ಸವಾಲು ಹಾಕುತ್ತೇನೆ. ತಾಕತ್ ಇದ್ರೆ ಗೆದ್ದು ಬರಲಿ. ಅವರ ಪಕ್ಷದಲ್ಲಿ ಅವರನ್ನು ವೀಕ್ ಮಾಡಿಕೊಂಡು ನಮಗ್ಯಾಕೆ ಮಾತಾಡ್ತಾರೆ? ನಾನು ನನ್ನ ಕ್ಷೇತ್ರದಲ್ಲಿ ಇದ್ದರೂ ಅವರ ಬಗ್ಗೆ ನಾನು ಟೀಕೆ ಮಾಡಲ್ಲ. ಅವರು ದೊಡ್ಡವರು ಹೀಗೆ ಮಾತಾಡಬಾರದು ಎಂದು ಎಂ.ಪಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಚಿಕ್ಕಮಗಳೂರು ವರದಿ: ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಪಕ್ಷಕ್ಕೆ ಬಂದರೆ ಖಂಡಿತವಾಗಿಯೂ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದ್ದರು. ಈ ಬಾರಿ ನನ್ನ ಮಗಳಿಗೆ ಟಿಕೆಟ್ ಕೊಡುವಂತೆ ಪಕ್ಷದ ವರಿಷ್ಠರಲ್ಲಿ ಕೇಳುತ್ತೇನೆ. ಒಂದು ವೇಳೆ ನನ್ನ ಮಗಳಿಗೆ ಟಿಕೆಟ್ ಕೊಡಲ್ಲ ಅಂದ್ರೂ ಪರವಾಗಿಲ್ಲ, ಅವನಿಗೆ(ಕುಮಾರಸ್ವಾಮಿ) ಟಿಕೆಟ್ ಕೊಡುವುದಕ್ಕಿಂತ ಪಕ್ಷದಲ್ಲಿ ದುಡಿಯುತ್ತಿರುವ ಕೂಲಿ ಕಾರ್ಮಿಕನಿಗೆ ಟಿಕೆಟ್ ಕೊಡಲಿ. ಅದನ್ನ ಬಿಟ್ಟು ಒಂದ್ಸರಿ ಕೈ ಸರಿ ಇಲ್ಲ, ಬಾಯಿ ಚೆನ್ನಾಗಿಲ್ಲ ಅಂತಾ ಗೊತ್ತಾಗಿರೋ ವ್ಯಕ್ತಿಗೆ ಕಾಂಗ್ರೆಸ್ನವರು ಹೇಗೆ ಟಿಕೆಟ್ ಕೊಡ್ತಾರೆ ಅಂತಾ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯವರನ್ನ ಮೋಟಮ್ಮ ಹೇಳಿದ್ದರು.

ಮೂಡಿಗೆರೆ ಶಾಸಕರು ಸಿದ್ದರಾಮಯ್ಯನವರನ್ನ ಭೇಟಿ ಮಾಡಿರಬಹುದು, ಹಾಗಂತ ಸಿದ್ದರಾಮಯ್ಯ ಅದನ್ನ ಒಪ್ಪಿಕೊಳ್ತಾರಾ? 40 ಪರ್ಸೆಂಟ್ ತೆಗೆದುಕೊಳ್ಳುವ ಬಿಜೆಪಿ ಅವರು ಪಕ್ಷಕ್ಕೆ ಬರಲಿ ಅಂತಾ ಸಿದ್ದರಾಮಯ್ಯ ಹೇಳ್ತಾರಾ? ಬಿಜೆಪಿಯಲ್ಲಿ ಮೇವು ಸಿಕ್ತು ಅಂತಾ ನಮ್ಮಲ್ಲಿಂದ 17 ಜನ ಆ ಪಕ್ಷಕ್ಕೆ ಹೋದ್ರು, ಈಗ ಕಾಂಗ್ರೆಸ್ನಲ್ಲಿ ಮೇವು ಸಿಗುತ್ತೆ ಅಂತಾ ಬರೋರಿಗೆ ಅವಕಾಶ ಕೊಡಲು ಹೇಗೆ ಸಾಧ್ಯವಾಗುತ್ತೆ ಅಂತಾ ಮೋಟಮ್ಮ ಪ್ರಶ್ನೆ ಮಾಡಿದ್ದರು. ಈ ಮೂಲಕ ಮುಂದಿನ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ವೇದಿಕೆ ಸಿದ್ದಮಾಡಿಕೊಳ್ತಿರೋ ಎಂ.ಪಿ ಕುಮಾರಸ್ವಾಮಿಗೆ ಡೋಂಟ್ ಕಮ್ ಅನ್ನೋ ಖಡಕ್ ಉತ್ತರವನ್ನ ಕಾಂಗ್ರೆಸ್ನ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ನೀಡಿದ್ದರು.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:11 pm, Thu, 16 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?