AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai civic polls: ಬಿಆರ್ ಅಂಬೇಡ್ಕರ್ ಮೊಮ್ಮಗನ ಪಕ್ಷದ ಜೊತೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ

ಮುಂಬೈ ನಗರಪಾಲಿಕೆ ಚುನಾವಣೆಗೂ ಮುನ್ನ ಶಿವ ಸೇನೆಯ ಉದ್ಧವ್ ಠಾಕ್ರೆ ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಪಕ್ಷದ ಜೊತೆ ಮೈತ್ರಿ ಘೋಷಿಸಿದ್ದಾರೆ.

Mumbai civic polls: ಬಿಆರ್ ಅಂಬೇಡ್ಕರ್ ಮೊಮ್ಮಗನ ಪಕ್ಷದ ಜೊತೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ
Uddhav Thackeray and Prakash Ambedkar
TV9 Web
| Edited By: |

Updated on:Jan 23, 2023 | 2:30 PM

Share

ಮಹಾರಾಷ್ಟ್ರ: ಮುಂಬೈ ನಗರಪಾಲಿಕೆ ಚುನಾವಣೆಗೂ (Mumbai civic polls) ಮುನ್ನ ಶಿವಸೇನೆಯ (Shiv Sena) ಉದ್ಧವ್ ಠಾಕ್ರೆ ಅವರು (Uddhav Thackeray) ಬಿಆರ್ ಅಂಬೇಡ್ಕರ್ (BR Ambedkar) ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಪಕ್ಷದ ಜೊತೆ ಮೈತ್ರಿ ಘೋಷಿಸಿದ್ದಾರೆ. ಇದೀಗ ಈ ಬಗ್ಗೆ ಅಧಿಕೃತವಾಗಿ ಘೋಷಣೆಯನ್ನು ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ (ವಿಬಿಎ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ, ಮುಂಬರುವ ಮುಂಬೈ ನಗರಪಾಲಿಕೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಶಿವಸೇನೆ ವಿಭಜನೆಯಾದ ನಂತರ ಇದು ಮೊದಲ ಪ್ರಮುಖ ಚುನಾವಣೆಯಾಗಿದೆ.

ಉದ್ಧವ್ ಠಾಕ್ರೆ ಅವರು ಭಾರತದ ಸಂವಿಧಾನವನ್ನು ರಚಿಸಿದ ಭೀಮ್ ರಾವ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರೊಂದಿಗೆ ಎರಡು ತಿಂಗಳಿನಿಂದ ಮಾತುಕತೆ ನಡೆಸುತ್ತಿದ್ದಾರೆ. ಇಂದು ಜನವರಿ 23, ಬಾಳಾಸಾಹೇಬ್ ಠಾಕ್ರೆ ಅವರ ಜನ್ಮದಿನ. ಮಹಾರಾಷ್ಟ್ರದ ಹಲವಾರು ಜನರು ನಾವು ಒಗ್ಗೂಡಬೇಕೆಂದು ಬಯಸಿದ್ದಕ್ಕಾಗಿ ನನಗೆ ತೃಪ್ತಿ ಮತ್ತು ಸಂತೋಷವಾಗಿದೆ. ಪ್ರಕಾಶ್ ಅಂಬೇಡ್ಕರ್ ಮತ್ತು ನಾನು ಇಂದು ಮೈತ್ರಿ ಮಾಡಿಕೊಳ್ಳಲು ಬಂದಿದ್ದೇವೆ ಎಂದು ಶ್ರೀ ಠಾಕ್ರೆ ಸುದ್ದಿಗಾರರಿಗೆ ತಿಳಿಸಿದರು.

ಇದನ್ನು ಓದಿ: ಪುಟಿನ್, ಬೈಡೆನ್ ಕೂಡ ಉದ್ಧವ್ ಠಾಕ್ರೆ ಯಾರೆಂದು ಚರ್ಚಿಸುತ್ತಿದ್ದಾರೆ; ಸಂಜಯ್ ರಾವತ್ ವಿಡಿಯೋ ವೈರಲ್

ನನ್ನ ತಾತ ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ ಸಹೋದ್ಯೋಗಿಗಳಾಗಿದ್ದರು ಮತ್ತು ಅವರು ಸಾಮಾಜಿಕ ಸಮಸ್ಯೆಗಳ ವಿರುದ್ಧ ಆ ಸಮಯದಲ್ಲಿ ಹೋರಾಡಿದರು. ಠಾಕ್ರೆ ಮತ್ತು ಅಂಬೇಡ್ಕರ್ ಅವರಿಗೆ ಇತಿಹಾಸವಿದೆ. ಈಗ ಅವರ ಮುಂದಿನ ಪೀಳಿಗೆಗಳು ದೇಶದ ಪ್ರಸ್ತುತ ಸಮಸ್ಯೆಗಳ ಬಗ್ಗೆ ಹೋರಾಡಲು ಇಲ್ಲಿದ್ದಾರೆ ಎಂದು ಹೇಳಿದರು.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಈ ಮೈತ್ರಿಯು ಆಡಳಿತಾರೂಢ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ತಂತ್ರಗಳನ್ನು ಎದುರಿಸಲಿದೆ. ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರ ತಂದೆ ಪ್ರಬೋಧಂಕರ್ ಠಾಕ್ರೆ ಅವರಿಗೆ ಮೀಸಲಾಗಿರುವ ವೆಬ್‌ಸೈಟ್ ಪ್ರಬೋಧಂಕರ್ ಡಾಟ್ ಕಾಮ್ ಬಿಡುಗಡೆಗಾಗಿ ಠಾಕ್ರೆ ಮತ್ತು ಅಂಬೇಡ್ಕರ್ ಕಳೆದ ನವೆಂಬರ್‌ನಲ್ಲಿ ವೇದಿಕೆಯನ್ನು ಹಂಚಿಕೊಂಡಿದ್ದರು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Mon, 23 January 23

Follow Us
Web contact
Web contact

TV9 Kannada

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ