Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai civic polls: ಬಿಆರ್ ಅಂಬೇಡ್ಕರ್ ಮೊಮ್ಮಗನ ಪಕ್ಷದ ಜೊತೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ

ಮುಂಬೈ ನಗರಪಾಲಿಕೆ ಚುನಾವಣೆಗೂ ಮುನ್ನ ಶಿವ ಸೇನೆಯ ಉದ್ಧವ್ ಠಾಕ್ರೆ ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಪಕ್ಷದ ಜೊತೆ ಮೈತ್ರಿ ಘೋಷಿಸಿದ್ದಾರೆ.

Mumbai civic polls: ಬಿಆರ್ ಅಂಬೇಡ್ಕರ್ ಮೊಮ್ಮಗನ ಪಕ್ಷದ ಜೊತೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ
Uddhav Thackeray and Prakash Ambedkar
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 23, 2023 | 2:30 PM

ಮಹಾರಾಷ್ಟ್ರ: ಮುಂಬೈ ನಗರಪಾಲಿಕೆ ಚುನಾವಣೆಗೂ (Mumbai civic polls) ಮುನ್ನ ಶಿವಸೇನೆಯ (Shiv Sena) ಉದ್ಧವ್ ಠಾಕ್ರೆ ಅವರು (Uddhav Thackeray) ಬಿಆರ್ ಅಂಬೇಡ್ಕರ್ (BR Ambedkar) ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಪಕ್ಷದ ಜೊತೆ ಮೈತ್ರಿ ಘೋಷಿಸಿದ್ದಾರೆ. ಇದೀಗ ಈ ಬಗ್ಗೆ ಅಧಿಕೃತವಾಗಿ ಘೋಷಣೆಯನ್ನು ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ (ವಿಬಿಎ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ, ಮುಂಬರುವ ಮುಂಬೈ ನಗರಪಾಲಿಕೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಶಿವಸೇನೆ ವಿಭಜನೆಯಾದ ನಂತರ ಇದು ಮೊದಲ ಪ್ರಮುಖ ಚುನಾವಣೆಯಾಗಿದೆ.

ಉದ್ಧವ್ ಠಾಕ್ರೆ ಅವರು ಭಾರತದ ಸಂವಿಧಾನವನ್ನು ರಚಿಸಿದ ಭೀಮ್ ರಾವ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರೊಂದಿಗೆ ಎರಡು ತಿಂಗಳಿನಿಂದ ಮಾತುಕತೆ ನಡೆಸುತ್ತಿದ್ದಾರೆ. ಇಂದು ಜನವರಿ 23, ಬಾಳಾಸಾಹೇಬ್ ಠಾಕ್ರೆ ಅವರ ಜನ್ಮದಿನ. ಮಹಾರಾಷ್ಟ್ರದ ಹಲವಾರು ಜನರು ನಾವು ಒಗ್ಗೂಡಬೇಕೆಂದು ಬಯಸಿದ್ದಕ್ಕಾಗಿ ನನಗೆ ತೃಪ್ತಿ ಮತ್ತು ಸಂತೋಷವಾಗಿದೆ. ಪ್ರಕಾಶ್ ಅಂಬೇಡ್ಕರ್ ಮತ್ತು ನಾನು ಇಂದು ಮೈತ್ರಿ ಮಾಡಿಕೊಳ್ಳಲು ಬಂದಿದ್ದೇವೆ ಎಂದು ಶ್ರೀ ಠಾಕ್ರೆ ಸುದ್ದಿಗಾರರಿಗೆ ತಿಳಿಸಿದರು.

ಇದನ್ನು ಓದಿ: ಪುಟಿನ್, ಬೈಡೆನ್ ಕೂಡ ಉದ್ಧವ್ ಠಾಕ್ರೆ ಯಾರೆಂದು ಚರ್ಚಿಸುತ್ತಿದ್ದಾರೆ; ಸಂಜಯ್ ರಾವತ್ ವಿಡಿಯೋ ವೈರಲ್

ನನ್ನ ತಾತ ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ ಸಹೋದ್ಯೋಗಿಗಳಾಗಿದ್ದರು ಮತ್ತು ಅವರು ಸಾಮಾಜಿಕ ಸಮಸ್ಯೆಗಳ ವಿರುದ್ಧ ಆ ಸಮಯದಲ್ಲಿ ಹೋರಾಡಿದರು. ಠಾಕ್ರೆ ಮತ್ತು ಅಂಬೇಡ್ಕರ್ ಅವರಿಗೆ ಇತಿಹಾಸವಿದೆ. ಈಗ ಅವರ ಮುಂದಿನ ಪೀಳಿಗೆಗಳು ದೇಶದ ಪ್ರಸ್ತುತ ಸಮಸ್ಯೆಗಳ ಬಗ್ಗೆ ಹೋರಾಡಲು ಇಲ್ಲಿದ್ದಾರೆ ಎಂದು ಹೇಳಿದರು.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಈ ಮೈತ್ರಿಯು ಆಡಳಿತಾರೂಢ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ತಂತ್ರಗಳನ್ನು ಎದುರಿಸಲಿದೆ. ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರ ತಂದೆ ಪ್ರಬೋಧಂಕರ್ ಠಾಕ್ರೆ ಅವರಿಗೆ ಮೀಸಲಾಗಿರುವ ವೆಬ್‌ಸೈಟ್ ಪ್ರಬೋಧಂಕರ್ ಡಾಟ್ ಕಾಮ್ ಬಿಡುಗಡೆಗಾಗಿ ಠಾಕ್ರೆ ಮತ್ತು ಅಂಬೇಡ್ಕರ್ ಕಳೆದ ನವೆಂಬರ್‌ನಲ್ಲಿ ವೇದಿಕೆಯನ್ನು ಹಂಚಿಕೊಂಡಿದ್ದರು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Mon, 23 January 23

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು