AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಜಾಮೀನು ಕೋರಿದ ಅನಿಲ್​​ ದೇಶ್​​ಮುಖ್, ನವಾಬ್​​ ಮಲಿಕ್​​​; ಮನವಿ ತಿರಸ್ಕರಿಸಿದ ನ್ಯಾಯಾಲಯ

ಇಬ್ಬರು ಎನ್‌ಸಿಪಿ ನಾಯಕರ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ವಿರೋಧಿಸಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿ ಕೈದಿಗಳಿಗೆ ಮತದಾನದ ಹಕ್ಕು ಇಲ್ಲ, ಯಾವುದೇ ಚುನಾವಣೆಯಲ್ಲಿ ಅವರು ಮತ ಚಲಾಯಿಸುವಂತಿಲ್ಲ...

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಜಾಮೀನು ಕೋರಿದ ಅನಿಲ್​​ ದೇಶ್​​ಮುಖ್, ನವಾಬ್​​ ಮಲಿಕ್​​​; ಮನವಿ ತಿರಸ್ಕರಿಸಿದ ನ್ಯಾಯಾಲಯ
ಅನಿಲ್ ದೇಶ್​​ಮುಖ್ ಮತ್ತು ನವಾಬ್ ಮಲಿಕ್
TV9 Web
| Edited By: |

Updated on:Jun 09, 2022 | 7:09 PM

Share

ದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha elections) ಮತ ಚಲಾಯಿಸುವುದಕ್ಕಾಗಿ ಶುಕ್ರವಾರ ವಿಧಾನಸೌಧಕ್ಕೆ ಭೇಟಿ ನೀಡಲು ಅನುಮತಿ ಕೋರಿ ಎನ್​​ಸಿಪಿ ನಾಯಕರಾದ ನವಾಬ್ ಮಲಿಕ್ (Nawab Malik) ಮತ್ತು ಅನಿಲ್ ದೇಶ್​​ಮುಖ್ (Anil Deshmukh) ಸಲ್ಲಿಸಿದ್ದ ಅರ್ಜಿಗಳನ್ನು ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಭ್ರಷ್ಟಾಚಾರ ಆರೋಪದಲ್ಲಿ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದೇಶ್​​ಮುಖ್ ಅವರನ್ನು ಬಂಧಿಸಲಾಗಿತ್ತು. ಅದೇ ವೇಳೆ ಪರಾರಿಯಾಗಿರುವ ಗ್ಯಾಂಗ್ ಸ್ಟರ್ ದಾವೂದ್ ಇಬ್ರಾಹಿಂ ಕಸ್ಕರ್ ಮತ್ತು ಆತನ ಸಹಚರರ ಜತೆಗೆ ಅಕ್ರಮ ಹಣ ವ್ಯವಹಾರ ಆರೋಪದಲ್ಲಿ ಮಲಿಕ್ ಅವರನ್ನು ಬಂಧಿಸಲಾಗಿತ್ತು. ಇಬ್ಬರು ಎನ್‌ಸಿಪಿ ನಾಯಕರ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ವಿರೋಧಿಸಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿ ಕೈದಿಗಳಿಗೆ ಮತದಾನದ ಹಕ್ಕು ಇಲ್ಲ, ಯಾವುದೇ ಚುನಾವಣೆಯಲ್ಲಿ ಅವರು ಮತ ಚಲಾಯಿಸುವಂತಿಲ್ಲ. ಜೈಲಿನಲ್ಲಿರುವ ವ್ಯಕ್ತಿ ಶಿಕ್ಷೆಗೆ ಗುರಿಯಾಗಿದ್ದರೆ ಅಥವಾ ವಿಚಾರಣಾಧೀನ ಕೈದಿ ಆಗಿದ್ದರೂ ಅದು ವ್ಯತ್ಯಾಸವನ್ನು ಉಂಟುಮಾಡುವುದಿಲ್ಲ ಎಂದಿದೆ. ಅನಿಲ್ ದೇಶ್​​ಮುಖ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿತ್ತು. ಇಡಿ ಪ್ರಕಾರ, ದೇಶಮುಖ್ ಅವರು ಗೃಹ ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ಮುಂಬೈನ ವಿವಿಧ ಬಾರ್‌ಗಳಿಂದ ₹ 4.70 ಕೋಟಿ ಸಂಗ್ರಹಿಸಿದ್ದಾರೆ.

ಗ್ಯಾಂಗ್​​ಸ್ಟರ್ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ನ್ನು  ಈ ವರ್ಷ ಫೆಬ್ರವರಿ 23 ರಂದು ಇಡಿ ಬಂಧಿಸಿತ್ತು.

ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟಕ್ಕೆ ರಾಜ್ಯಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾಗಿದೆ. ಎರಡು ದಶಕಗಳ ನಂತರ, ಮಹಾರಾಷ್ಟ್ರದಿಂದ ರಾಜ್ಯಸಭಾ ಚುನಾವಣೆಯಲ್ಲಿ ಆರು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ
Image
Rajya Sabha Election 2022 ರಾಜ್ಯಸಭಾ ಚುನಾವಣೆ ನಾಳೆ; ಯಾವ ರಾಜ್ಯದಲ್ಲಿ ಎಷ್ಟು ಸೀಟುಗಳಿವೆ? ಹೀಗಿರಲಿದೆ ಚುನಾವಣಾ ಪ್ರಕ್ರಿಯೆ
Image
ನಾಲ್ಕನೇ ಅಭ್ಯರ್ಥಿ ಗೆಲುವಿಗೆ ಅಡ್ಡ ಮತದಾನವೇ ನಿರ್ಣಾಯಕ, ಒಂದೇ ಸ್ಥಾನಕ್ಕೆ ಮೂವರ ಪೈಪೋಟಿ
Image
ಕೋಮುವಾದಿ, ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು; ಕಾಂಗ್ರೆಸ್‌ ಪಕ್ಷದ 2ನೇ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ

ಆಡಳಿತಾರೂಢ ಶಿವಸೇನೆ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್ ತಲಾ ಒಬ್ಬ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಿದೆ. ಪ್ರತಿಪಕ್ಷ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿಯ ಧನಂಜಯ್ ಮಹಾದಿಕ್ ಮತ್ತು ಶಿವಸೇನೆಯ ಸಂಜಯ್ ಪವಾರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಲ್ಲಾ ಪಕ್ಷಗಳ ವ್ಯಾಪಕ ವಾದಗಳನ್ನು ಆಲಿಸಿದ ನ್ಯಾಯಾಲಯವು ಮಲಿಕ್ ಮತ್ತು ಅನಿಲ್ ದೇಶ್​​ಮುಖ್  ಅವರಿಗೆ ತಾತ್ಕಾಲಿಕ ಜಾಮೀನನ್ನು ನಿರಾಕರಿಸಿತು.

ಮಂಗಳವಾರ, ಕೇಂದ್ರ ಸಂಸ್ಥೆಯು ಕೈದಿಗಳಿಗೆ ಮತದಾನದ ಹಕ್ಕುಗಳನ್ನು ಹೊಂದಿಲ್ಲ ಎಂದು ಮನವಿಗಳನ್ನು ವಿರೋಧಿಸಿತ್ತು. “ಜನತಾ ಪ್ರಾತಿನಿಧ್ಯ ಕಾಯಿದೆ, 1951 ರ ಅಡಿಯಲ್ಲಿ ಕೈದಿಗಳು ಮತದಾನದ ಹಕ್ಕುಗಳನ್ನು ಹೊಂದಿಲ್ಲ ಎಂದು ನಮೂದಿಸುವುದು ಸೂಕ್ತವಾಗಿದೆ. . ಮತದಾನದ ಹಕ್ಕು ಕಾಯಿದೆಯ ಸೆಕ್ಷನ್ 62 ರ ಅಡಿಯಲ್ಲಿ ರಚಿಸಲಾದ ಶಾಸನಬದ್ಧ ಹಕ್ಕಾಗಿದೆ. ‘ಮತದಾನದ ಹಕ್ಕು ಶಾಸನಬದ್ಧ ಹಕ್ಕು ಎಂದು ಕಾಯಿದೆಯಲ್ಲಿ ಸೂಚಿಸಲಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ’ ಎಂದು ಇಡಿ  ಹೇಳಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:56 pm, Thu, 9 June 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್