AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪತ್ರಾ ಚಾವ್ಲ್ ಹಗರಣ: ಸಂಜಯ್ ರಾವತ್ ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾದ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದ್ದು, ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ ಮಾಡಲಾಗಿದೆ.

Breaking ಪತ್ರಾ ಚಾವ್ಲ್ ಹಗರಣ: ಸಂಜಯ್ ರಾವತ್ ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ
ಸಂಜಯ್ ರಾವತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 2:44 PM

Share

ಪತ್ರಾ ಚಾವ್ಲ್ ಹಗರಣ ಪ್ರಕರಣದಲ್ಲಿ (Patra Chawl money-laundering case) ಮುಂಬೈ ವಿಶೇಷ ನ್ಯಾಯಾಲಯವು ಶಿವಸೇನಾ ಸಂಸದ ಸಂಜಯ್ ರಾವತ್ (Sanjay Raut) ಅವರ ಇಡಿ (Enforcement Directorate) ಕಸ್ಟಡಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ  ಸಂಜಯ್ ರಾವತ್  ಅವರನ್ನು  ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿತ್ತು.ಸಂಜಯ್ ರಾವತ್ ಅವರ ಇಡಿ ಕಸ್ಟಡಿ ಅವಧಿ ಇಂದು (ಗುರುವಾರ) ಮುಗಿದಿದ್ದು, ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ ಪ್ರಸ್ತುತ ಪ್ರಕರಣದ ತನಿಖೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ನ್ಯಾಯಾಲಯ ಹೇಳಿದೆ. 1.17 ಕೋಟಿ ಮತ್ತು 1.08 ಕೋಟಿ ವಿಚಾರಣೆ ಈ ಹಿಂದೆ ನ್ಯಾಯಾಲಯದಲ್ಲಿ ಆಗಿಲ್ಲ. ಹೆಚ್ಚಿನ ಮೊತ್ತ ಪತ್ತೆಯಾಗಿದೆ. ಮುಂದಿನ ವಿಚಾರಣೆಗಾಗಿ ಇಡಿ ಬ್ಯಾಂಕ್ ಖಾತೆ ಮಾಹಿತಿ ನೀಡಿದೆ. ಮುಂದಿನ ವಿಚಾರಣೆಗಳಿಗೆ ಹೆಚ್ಚಿನ ಅಂಶಗಳ ಅಗತ್ಯವಿದೆ. ಆದಾಗ್ಯೂ, 2022 ಆಗಸ್ಟ್ 8ರವರೆಗೆ ಅದನ್ನು ಮಾಡಬಹುದು ಎಂಬುದು ನನ್ನ ಅಭಿಪ್ರಾಯ. ಇಲ್ಲಿ ಇಡಿ ಎಲ್ಲಾ ಆಯಾಮಗಳನ್ನು ನೋಡಬಹುದು ಎಂದು ನ್ಯಾಯಾಲಯ ಹೇಳಿದೆ

ಇದಕ್ಕಿಂತ ಮುಂಚೆ ನ್ಯಾಯವಾದಿ ರಂಜೀತ್ ಸಾಂಗ್ಲೆ ಅವರು ಸಾಕ್ಷ್ಯದಾರ ಸ್ವಪ್ನಾ ಪಟಾಕರ್ ಅವರಿಗೆ ರಾವತ್ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಹಸ್ತಕ್ಷೇಪ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಸಿಆರ್ ಪಿಸಿ 167 ಸೆಕ್ಷನ್ ಅಡಿಯಲ್ಲಿ ಇಂಥಾ ಅರ್ಜಿ ಹೇಗೆ ಸಮರ್ಥನೀಯವಾಗಿದೆ ಎಂದು ಹೇಳಿಲ್ಲ. ಆರೋಪಿ ಯಾವುದಾದರೂ ಬೆದರಿಕೆಯೊಡ್ಡಿದ್ದರೆ ಅಥವಾ ಬೇರೆಯವರ ಮೂಲಕ ಬೆದರಿಕೆಯೊಡ್ಡಿದ್ದರೆ ಆ ವ್ಯಕ್ತಿ ಅದಕ್ಕೆ ಸಂಬಂಧಿಸಿದ ಸಂಸ್ಥೆಯ ಮೊರೆ ಹೋಗಬೇಕಿತ್ತು. ಅಲ್ಲಿ ಅವರಿಗೆ ಪರಿಹಾರ ಸಿಗದೇ ಇದ್ದರೆ ಅದು ಬೇರೆ ಮಾತು ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವ ಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿತ್ತು. 1,034 ಕೋಟಿ ರೂ. ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಈ ಹಿಂದೆ 2 ಬಾರಿ ವಿಚಾರಣೆ ನಡೆಸಲಾಗಿತ್ತು. ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ 9 ಗಂಟೆಗಳ ಕಾಲ ವಿಚಾರಣೆಯ ನಂತರ 60 ವರ್ಷದ ಸಂಜಯ್ ರಾವತ್ ಅವರನ್ನು ಬಂಧಿಸಲಾಯಿತು. ಸೋಮವಾರ ಮಧ್ಯರಾತ್ರಿ 12:05 ಗಂಟೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಅವರು ತನಿಖೆಗೆ ಸಹಕರಿಸದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 2:06 pm, Thu, 4 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ