AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪತ್ರಾ ಚಾವ್ಲ್ ಹಗರಣ: ಸಂಜಯ್ ರಾವತ್ ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾದ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದ್ದು, ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ ಮಾಡಲಾಗಿದೆ.

Breaking ಪತ್ರಾ ಚಾವ್ಲ್ ಹಗರಣ: ಸಂಜಯ್ ರಾವತ್ ಇಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ
ಸಂಜಯ್ ರಾವತ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 2:44 PM

Share

ಪತ್ರಾ ಚಾವ್ಲ್ ಹಗರಣ ಪ್ರಕರಣದಲ್ಲಿ (Patra Chawl money-laundering case) ಮುಂಬೈ ವಿಶೇಷ ನ್ಯಾಯಾಲಯವು ಶಿವಸೇನಾ ಸಂಸದ ಸಂಜಯ್ ರಾವತ್ (Sanjay Raut) ಅವರ ಇಡಿ (Enforcement Directorate) ಕಸ್ಟಡಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ  ಸಂಜಯ್ ರಾವತ್  ಅವರನ್ನು  ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿತ್ತು.ಸಂಜಯ್ ರಾವತ್ ಅವರ ಇಡಿ ಕಸ್ಟಡಿ ಅವಧಿ ಇಂದು (ಗುರುವಾರ) ಮುಗಿದಿದ್ದು, ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ ಪ್ರಸ್ತುತ ಪ್ರಕರಣದ ತನಿಖೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ನ್ಯಾಯಾಲಯ ಹೇಳಿದೆ. 1.17 ಕೋಟಿ ಮತ್ತು 1.08 ಕೋಟಿ ವಿಚಾರಣೆ ಈ ಹಿಂದೆ ನ್ಯಾಯಾಲಯದಲ್ಲಿ ಆಗಿಲ್ಲ. ಹೆಚ್ಚಿನ ಮೊತ್ತ ಪತ್ತೆಯಾಗಿದೆ. ಮುಂದಿನ ವಿಚಾರಣೆಗಾಗಿ ಇಡಿ ಬ್ಯಾಂಕ್ ಖಾತೆ ಮಾಹಿತಿ ನೀಡಿದೆ. ಮುಂದಿನ ವಿಚಾರಣೆಗಳಿಗೆ ಹೆಚ್ಚಿನ ಅಂಶಗಳ ಅಗತ್ಯವಿದೆ. ಆದಾಗ್ಯೂ, 2022 ಆಗಸ್ಟ್ 8ರವರೆಗೆ ಅದನ್ನು ಮಾಡಬಹುದು ಎಂಬುದು ನನ್ನ ಅಭಿಪ್ರಾಯ. ಇಲ್ಲಿ ಇಡಿ ಎಲ್ಲಾ ಆಯಾಮಗಳನ್ನು ನೋಡಬಹುದು ಎಂದು ನ್ಯಾಯಾಲಯ ಹೇಳಿದೆ

ಇದಕ್ಕಿಂತ ಮುಂಚೆ ನ್ಯಾಯವಾದಿ ರಂಜೀತ್ ಸಾಂಗ್ಲೆ ಅವರು ಸಾಕ್ಷ್ಯದಾರ ಸ್ವಪ್ನಾ ಪಟಾಕರ್ ಅವರಿಗೆ ರಾವತ್ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಹಸ್ತಕ್ಷೇಪ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಸಿಆರ್ ಪಿಸಿ 167 ಸೆಕ್ಷನ್ ಅಡಿಯಲ್ಲಿ ಇಂಥಾ ಅರ್ಜಿ ಹೇಗೆ ಸಮರ್ಥನೀಯವಾಗಿದೆ ಎಂದು ಹೇಳಿಲ್ಲ. ಆರೋಪಿ ಯಾವುದಾದರೂ ಬೆದರಿಕೆಯೊಡ್ಡಿದ್ದರೆ ಅಥವಾ ಬೇರೆಯವರ ಮೂಲಕ ಬೆದರಿಕೆಯೊಡ್ಡಿದ್ದರೆ ಆ ವ್ಯಕ್ತಿ ಅದಕ್ಕೆ ಸಂಬಂಧಿಸಿದ ಸಂಸ್ಥೆಯ ಮೊರೆ ಹೋಗಬೇಕಿತ್ತು. ಅಲ್ಲಿ ಅವರಿಗೆ ಪರಿಹಾರ ಸಿಗದೇ ಇದ್ದರೆ ಅದು ಬೇರೆ ಮಾತು ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಮುಂಬೈನ ಪತ್ರಾ ಚಾವ್ಲ್ ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವ ಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿತ್ತು. 1,034 ಕೋಟಿ ರೂ. ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಈ ಹಿಂದೆ 2 ಬಾರಿ ವಿಚಾರಣೆ ನಡೆಸಲಾಗಿತ್ತು. ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ 9 ಗಂಟೆಗಳ ಕಾಲ ವಿಚಾರಣೆಯ ನಂತರ 60 ವರ್ಷದ ಸಂಜಯ್ ರಾವತ್ ಅವರನ್ನು ಬಂಧಿಸಲಾಯಿತು. ಸೋಮವಾರ ಮಧ್ಯರಾತ್ರಿ 12:05 ಗಂಟೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಅವರು ತನಿಖೆಗೆ ಸಹಕರಿಸದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 2:06 pm, Thu, 4 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು