Murugesh Nirani: ಪಿಂಪ್ ಸಚಿವ ಎಂಬ ಯತ್ನಾಳ್ ಹೇಳಿಕೆಗೆ ಮನನೊಂದು ಭಾವುಕರಾದ ಮುರುಗೇಶ್​ ನಿರಾಣಿ

ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್​ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ ಭಾವುಕರಾಗಿದ್ದಾರೆ.

Murugesh Nirani: ಪಿಂಪ್ ಸಚಿವ ಎಂಬ ಯತ್ನಾಳ್ ಹೇಳಿಕೆಗೆ ಮನನೊಂದು ಭಾವುಕರಾದ ಮುರುಗೇಶ್​ ನಿರಾಣಿ
ಶಾಸಕ ಯತ್ನಾಳ್, ಸಚಿವ ಮುರುಗೇಶ್ ನಿರಾಣಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2023 | 3:05 PM

ದಾವಣಗೆರೆ: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ಮತ್ತು ಸಚಿವ ಮುರುಗೇಶ್ ನಿರಾಣಿ (Murugesh Nirani) ಮಧ್ಯೆ ಕೆಲ ದಿನಗಳಿಂದ ವಾಕ್​ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್​ ಸಚಿವ (PIMP minister) ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ ಭಾವುಕರಾಗಿದ್ದಾರೆ. ಬಳಿಕ ಮಾತನಾಡಿ, ಯತ್ನಾಳ್​​ ಎಲ್ಲರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಇದ್ದಾರೆ. ಜೆಡಿಎಸ್​​ಗೆ ಹೋಗಿ ಮುಸ್ಲಿಂ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿದೆ. ಯತ್ನಾಳ್​ ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ. ನಾವು ಕೃಷ್ಣಾ, ಘಟಪ್ರಭಾ ನದಿಯ ನೀರು ಕುಡಿದು ಬೆಳೆದಿದ್ದೇವೆ. ನಾವು ಸುಮ್ಮನೆ ಇದ್ದೀವಿ ಅಂದರೆ ದೌರ್ಬಲ್ಯ ಅಲ್ಲ. ಬಸನಗೌಡ ಪಾಟೀಲ್ ಯತ್ನಾಳ್​ ಏನೂ ಸತ್ಯ ಹರಿಶ್ಚಂದ್ರ ಅಲ್ಲ. ದೊಡ್ಡ ಸಮುದಾಯದಲ್ಲಿ ಹುಟ್ಟಿದ್ದೀರಿ ಗೌರವದಿಂದ ಮಾತಾಡಿ ಎಂದು ಸಚಿವ ನಿರಾಣಿ ವಾಗ್ದಾಳಿ ಮಾಡಿದರು.

ಮೀಸಲಾತಿ ವಿಚಾರದಲ್ಲಿ ಜಯಮೃತ್ಯುಂಜ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ: ಮುರಗೇಶ ನಿರಾಣಿ 

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಜಯಮೃತ್ಯುಂಜ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ. ಕಳೆದ ಕಾಂಗ್ರೆಸ್ ಸರ್ಕಾರ ಇದ್ದಾಗ ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ 2ಎ ಮೀಸಲಾತಿ ನಿರಾಕರಿಸಿದ್ದರು. ಆಗ ಈ ಸ್ವಾಮೀಜಿ ಏನು ಮಾಡುತ್ತಿದ್ದರು. ಈಗ ನಾವು ಹಂತ ಹಂತವಾಗಿ ನಾವು ಬಿಜೆಪಿ ಅವರು ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದೆ.

ಇದನ್ನೂ ಓದಿ: ನಾಲಿಗೆ ಹರಿದು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್​ಗೆ, ಮುರುಗೇಶ್ ನಿರಾಣಿ ಖಡಕ್ ಎಚ್ಚರಿಕೆ

ಆದರೆ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ. ನಾನಾಗಿಯೇ ಯತ್ನಾಳ್ ವಿರುದ್ದ ವಾಗ್ದಾಳಿ ಮಾಡಿಲ್ಲ. ಅವರು ನೀಡಿದ ಹೇಳಿಕೆ ಉತ್ತರ ಕೊಟ್ಟಿದ್ದೇನೆ. ಅವರನ್ನ ಸಹಿಸಿಕೊಂಡಿದ್ದು ಆಗಿದೆ. ಈಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಯತ್ನಾಳರ್​ರನ್ನು ಹುಲಿಗೆ ಹೋಲಿಸಿದ ಜಯಮೃತ್ಯುಂಜಯಶ್ರೀ

ಇನ್ನು ಶಾಸಕ ಯತ್ನಾಳ್ ವಿರುದ್ಧ ಮುರುಗೇಶ್ ನಿರಾಣಿ ಟೀಕೆ ವಿಚಾರವಾಗಿ ಬೆಂಗಳೂರಿನಲ್ಲಿ ಜಯಮೃತ್ಯುಂಜಯಶ್ರೀ ಪ್ರತಿಕ್ರಿಯೆ ನೀಡಿದ್ದು, ಸಚಿವ ಮುರುಗೇಶ್ ನಿರಾಣಿ ಆ ಹುಲಿ ಜೊತೆ ಮಾತನಾಡಲಿ ಎಂದು ಜಯಮೃತ್ಯುಂಜಯಶ್ರೀ ಯತ್ನಾಳರ್​ರನ್ನು ಹುಲಿಗೆ ಹೋಲಿಸಿದರು. ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಹೋರಾಟ ಮಾಡಿದ್ದಾರೆ.

ಇದನ್ನೂ ಓದಿ: ಅವರ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಸಚಿವ ಮುರುಗೇಶ ನಿರಾಣಿಗೆ ಯತ್ನಾಳ್ ಸವಾಲ್​

ಅಧಿಕಾರ, ಸಚಿವ ಸ್ಥಾನ ಅಪೇಕ್ಷಿಸದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ರೇಸ್​​ನಲ್ಲಿ ಇದ್ರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸನಗೌಡ ಪಾಟೀಲ್​ ಯತ್ನಾಳ್​ ನೆಲೆಸಿದ್ದಾರೆ. ಉಂಡು ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್