Murugesh Nirani: ಪಿಂಪ್ ಸಚಿವ ಎಂಬ ಯತ್ನಾಳ್ ಹೇಳಿಕೆಗೆ ಮನನೊಂದು ಭಾವುಕರಾದ ಮುರುಗೇಶ್​ ನಿರಾಣಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2023 | 3:05 PM

ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್​ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ ಭಾವುಕರಾಗಿದ್ದಾರೆ.

Murugesh Nirani: ಪಿಂಪ್ ಸಚಿವ ಎಂಬ ಯತ್ನಾಳ್ ಹೇಳಿಕೆಗೆ ಮನನೊಂದು ಭಾವುಕರಾದ ಮುರುಗೇಶ್​ ನಿರಾಣಿ
ಶಾಸಕ ಯತ್ನಾಳ್, ಸಚಿವ ಮುರುಗೇಶ್ ನಿರಾಣಿ
Follow us on

ದಾವಣಗೆರೆ: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ಮತ್ತು ಸಚಿವ ಮುರುಗೇಶ್ ನಿರಾಣಿ (Murugesh Nirani) ಮಧ್ಯೆ ಕೆಲ ದಿನಗಳಿಂದ ವಾಕ್​ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್​ ಸಚಿವ (PIMP minister) ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ ಭಾವುಕರಾಗಿದ್ದಾರೆ. ಬಳಿಕ ಮಾತನಾಡಿ, ಯತ್ನಾಳ್​​ ಎಲ್ಲರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಇದ್ದಾರೆ. ಜೆಡಿಎಸ್​​ಗೆ ಹೋಗಿ ಮುಸ್ಲಿಂ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿದೆ. ಯತ್ನಾಳ್​ ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ. ನಾವು ಕೃಷ್ಣಾ, ಘಟಪ್ರಭಾ ನದಿಯ ನೀರು ಕುಡಿದು ಬೆಳೆದಿದ್ದೇವೆ. ನಾವು ಸುಮ್ಮನೆ ಇದ್ದೀವಿ ಅಂದರೆ ದೌರ್ಬಲ್ಯ ಅಲ್ಲ. ಬಸನಗೌಡ ಪಾಟೀಲ್ ಯತ್ನಾಳ್​ ಏನೂ ಸತ್ಯ ಹರಿಶ್ಚಂದ್ರ ಅಲ್ಲ. ದೊಡ್ಡ ಸಮುದಾಯದಲ್ಲಿ ಹುಟ್ಟಿದ್ದೀರಿ ಗೌರವದಿಂದ ಮಾತಾಡಿ ಎಂದು ಸಚಿವ ನಿರಾಣಿ ವಾಗ್ದಾಳಿ ಮಾಡಿದರು.

ಮೀಸಲಾತಿ ವಿಚಾರದಲ್ಲಿ ಜಯಮೃತ್ಯುಂಜ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ: ಮುರಗೇಶ ನಿರಾಣಿ 

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಜಯಮೃತ್ಯುಂಜ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ. ಕಳೆದ ಕಾಂಗ್ರೆಸ್ ಸರ್ಕಾರ ಇದ್ದಾಗ ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ 2ಎ ಮೀಸಲಾತಿ ನಿರಾಕರಿಸಿದ್ದರು. ಆಗ ಈ ಸ್ವಾಮೀಜಿ ಏನು ಮಾಡುತ್ತಿದ್ದರು. ಈಗ ನಾವು ಹಂತ ಹಂತವಾಗಿ ನಾವು ಬಿಜೆಪಿ ಅವರು ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದೆ.

ಇದನ್ನೂ ಓದಿ: ನಾಲಿಗೆ ಹರಿದು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್​ಗೆ, ಮುರುಗೇಶ್ ನಿರಾಣಿ ಖಡಕ್ ಎಚ್ಚರಿಕೆ

ಆದರೆ ಸ್ವಾಮೀಜಿ ರಾಜಕೀಯ ಮಾಡುತ್ತಿದ್ದಾರೆ. ನಾನಾಗಿಯೇ ಯತ್ನಾಳ್ ವಿರುದ್ದ ವಾಗ್ದಾಳಿ ಮಾಡಿಲ್ಲ. ಅವರು ನೀಡಿದ ಹೇಳಿಕೆ ಉತ್ತರ ಕೊಟ್ಟಿದ್ದೇನೆ. ಅವರನ್ನ ಸಹಿಸಿಕೊಂಡಿದ್ದು ಆಗಿದೆ. ಈಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಯತ್ನಾಳರ್​ರನ್ನು ಹುಲಿಗೆ ಹೋಲಿಸಿದ ಜಯಮೃತ್ಯುಂಜಯಶ್ರೀ

ಇನ್ನು ಶಾಸಕ ಯತ್ನಾಳ್ ವಿರುದ್ಧ ಮುರುಗೇಶ್ ನಿರಾಣಿ ಟೀಕೆ ವಿಚಾರವಾಗಿ ಬೆಂಗಳೂರಿನಲ್ಲಿ ಜಯಮೃತ್ಯುಂಜಯಶ್ರೀ ಪ್ರತಿಕ್ರಿಯೆ ನೀಡಿದ್ದು, ಸಚಿವ ಮುರುಗೇಶ್ ನಿರಾಣಿ ಆ ಹುಲಿ ಜೊತೆ ಮಾತನಾಡಲಿ ಎಂದು ಜಯಮೃತ್ಯುಂಜಯಶ್ರೀ ಯತ್ನಾಳರ್​ರನ್ನು ಹುಲಿಗೆ ಹೋಲಿಸಿದರು. ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಹೋರಾಟ ಮಾಡಿದ್ದಾರೆ.

ಇದನ್ನೂ ಓದಿ: ಅವರ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಸಚಿವ ಮುರುಗೇಶ ನಿರಾಣಿಗೆ ಯತ್ನಾಳ್ ಸವಾಲ್​


ಅಧಿಕಾರ, ಸಚಿವ ಸ್ಥಾನ ಅಪೇಕ್ಷಿಸದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ರೇಸ್​​ನಲ್ಲಿ ಇದ್ರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸನಗೌಡ ಪಾಟೀಲ್​ ಯತ್ನಾಳ್​ ನೆಲೆಸಿದ್ದಾರೆ. ಉಂಡು ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.