AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ

ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Nov 13, 2021 | 3:01 PM

Share

ಮೈಸೂರು: ಶಾಸಕ ಜಿಟಿದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ರಣತಂತ್ರ ರೂಪಿಸಿದ್ದು, ಜಿಟಿಡಿ ಪತ್ನಿ ಲಲಿತಾ ದೇವೇಗೌಡ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಆದರೆ ಜಿಟಿ ದೇವೇಗೌಡರು ಜೆಡಿಎಸ್ ಆಫರ್ನ ನಿರಾಕರಿಸಿದ್ದಾರೆ. ನನ್ನ ಕುಟುಂಬದಿಂದ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ಸ್ಪಷ್ಟಪಡಿಸಿದ ಅವರು, ಜೆಡಿಎಸ್ನವರು ನನ್ನನ್ನು ಬಿಟ್ಟು ತುಂಬಾ ವರ್ಷಗಳಾಗಿದೆ. ನನ್ನನ್ನು ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಧ್ಯಕ್ಷರ ನೇಮಕ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಎಂದು ಜಿಟಿಡಿ ತಿಳಿಸಿದರು.

ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ಎಂಎಲ್ಸಿ ಚುನಾವಣೆಯನ್ನು ಜಿಟಿಡಿ ನೇತೃತ್ವದಲ್ಲೇ ನಡೆಸುತ್ತೇವೆ. ಅವರ ಕುಟುಂಬದಿಂದಲೇ ಅಭ್ಯರ್ಥಿಯಾಗಬೇಕು ಅನ್ನೋದು ನಮ್ಮ ಬಯಕೆ. ಅವರು ನಮ್ಮ ಪಕ್ಷದ ನಾಯಕರು. ಇಡೀ ಕುಟುಂಬ ಸಾರ್ವಜನಿಕರ ಸೇವೆ ಮಾಡುತ್ತಿದೆ. ಅಂತಹ ಕುಟುಂಬದಿಂದ ಅಭ್ಯರ್ಥಿಯಾದರೆ ತಪ್ಪೇನಿಲ್ಲ. ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಂಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಇನ್ನೂ ನಮ್ಮ ಪಕ್ಷದಲ್ಲೇ ಇದ್ದಾರೆ ಅಂತ ಶಾಸಕ ಸಾ.ರಾ.ಮಹೇಶ್ ಇಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಅಪ್ಪು ಫೋಟೋ ಮುಂದೆ ಶಾಂಪೇನ್​ ವಿವಾದ: ‘ಇದು ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ’: ಪ್ರೇಮ್​ ಪ್ರತಿಕ್ರಿಯೆ

ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ

Published On - 2:50 pm, Sat, 13 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ