AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ನನ್ನ ಮನೆ, ನಟಿ ರಮ್ಯಾಕೃಷ್ಣರ 300 ಎಕರೆ ಜಮೀನು ಕಬಳಿಸಿದ: ಜನಾರ್ದನ ರೆಡ್ಡಿ ವಿರುದ್ಧ ಅನಿಲ್ ಲಾಡ್ ಗಂಭೀರ ಆರೋಪ

ದೌರ್ಜನ್ಯ ಮತ್ತು ದಬ್ಬಾಳಿಕೆಯ ಮೂಲಕ ಬಳ್ಳಾರಿಯ ನನ್ನ ಮನೆಯನ್ನು ಸೇರಿ ನಟಿ ರಮ್ಯಾಕೃಷ್ಣರವರ 300 ಎಕರೆ ಜಮೀನು ಮತ್ತು ನದಾಫ್ ಸಮುದಾಯದ 150ಎಕರೆ ಜಮೀನು ಕಬಳಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ವಿರುದ್ದ ಮಾಜಿ ಶಾಸಕ ಅನಿಲ್ ಲಾಡ್ ಆರೋಪಿಸಿದ್ದಾರೆ.

ಬಳ್ಳಾರಿಯ ನನ್ನ ಮನೆ, ನಟಿ ರಮ್ಯಾಕೃಷ್ಣರ 300 ಎಕರೆ ಜಮೀನು ಕಬಳಿಸಿದ: ಜನಾರ್ದನ ರೆಡ್ಡಿ ವಿರುದ್ಧ ಅನಿಲ್ ಲಾಡ್ ಗಂಭೀರ ಆರೋಪ
ಅನಿಲ್​ ಲಾಡ್​, ಜನಾರ್ದನ ರೆಡ್ಡಿ
ಕಿರಣ್ ಹನುಮಂತ್​ ಮಾದಾರ್
|

Updated on: Mar 13, 2023 | 1:42 PM

Share

ಬಳ್ಳಾರಿ: ಅಕ್ರಮ ಗಣಿಗಾರಿಕೆ ಅಲ್ಲ, ಜನಾರ್ದನ ರೆಡ್ಡಿ(G. Janardhana Reddy) ಅಕ್ರಮ ಭೂ‌ ಕಬಳಿಕೆ ಮಾಡಿದ್ದಾರೆ. ಇಷ್ಟು ದಿನ ಇವರು ಬಿಜೆಪಿಯಲ್ಲಿ ಇದ್ದರು, ರೆಡ್ಡಿ ಮತ್ತು ಅಮಿತ್ ಶಾ ಒಂದೇ ಎಂದುಕೊಂಡು ದೂರು ನೀಡಿರಲಿಲ್ಲ ಎಂದು ಮಾಜಿ ಶಾಸಕ  ಅನಿಲ್ ಲಾಡ್(Anil Lad)  ಹೇಳಿದರು. ದೌರ್ಜನ್ಯ ಮತ್ತು ದಬ್ಬಾಳಿಕೆಯ ಮೂಲಕ ಬಳ್ಳಾರಿಯ ನನ್ನ ಮನೆಯನ್ನು ಕೂಡ ಕಬಳಿಸಿದ್ದಾರೆ. ಕೆಕೆಆರ್​ಪಿ ಪಕ್ಷ ಕಟ್ಟಿ ಬಳ್ಳಾರಿ ಅಭಿವೃದ್ಧಿ ಮಾಡಿದ್ದು ನಾನೇ ಎನ್ನುವ ರೆಡ್ಡಿ. ಬಳ್ಳಾರಿಯಲ್ಲಿ ಕೇವಲ ನನ್ನ ಮನೆಯಲ್ಲ. ನಟಿ ರಮ್ಯಾಕೃಷ್ಣರವರ 300 ಎಕರೆ ಜಮೀನು ಮತ್ತು ನದಾಫ್ ಸಮುದಾಯದ 150ಎಕರೆ ಜಮೀನು ಕಬಳಿಸಿದ್ದಾರೆ ಎಂದಿದ್ದಾರೆ.

ಮಾಜಿ ಶಾಸಕ ಅನಿಲ್ ಲಾಡ್ ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ವೇ ನಂ 519 ನಂಬರಿನ ನನ್ನ ಮನೆಯನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ. ರಿಜಿಸ್ಟ್ರಾರ್ ಆಫಿಸ್​ನಲ್ಲಿ ಅಲ್ಲ. ನನ್ನ ಮನೆಯನ್ನು ಜಿಂದಾಲ್ ಕಂಪನಿ ಆವರಣದಲ್ಲಿ ಬರೆಸಿಕೊಳ್ಳಲಾಯ್ತು. ನಾನು ಭಯದಿಂದ ಬರೆದುಕೊಟ್ಟೇ. ಇಷ್ಟೇಲ್ಲ ಜಮೀನು ಮನೆ ಬರೆಸಿ‌ಕೊಂಡವರು ಕೇವಲ ನಮಗಷ್ಟೇ ಅಲ್ಲ ಸರ್ಕಾರಕ್ಕೂ ತೆರಿಗೆ ಕಟ್ಟಿಲ್ಲ. ರಿಜಿಸ್ಟರ್ ವ್ಯಾಲ್ಯೂ ಹಣದಿಂದ ರಿಜಿಸ್ಟರ್ ಮಾಡಿಲ್ಲ. ನಾನು ಬಳ್ಳಾರಿ ನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.

ಇದನ್ನೂ ಓದಿ:ಜನಾರ್ಧನ ರೆಡ್ಡಿ ಮತ್ತು ನಾನು ವಿರುದ್ಧ ದಿಕ್ಕುಗಳಲ್ಲಿ ಸಾಗುತ್ತಿದ್ದೇವೆ, ಈ ಬಾರಿ ಬಳ್ಳಾರಿ ಜಿಲ್ಲೆಯಿಂದಲೇ ಸ್ಪರ್ಧಿಸುತ್ತೇನೆ: ಬಿ ಶ್ರೀರಾಮುಲು

ಇನ್ನು ನಾರಾ ಭರತ್​ ರೆಡ್ಡಿ ಸಹ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಭರತ್​ ರೆಡ್ಡಿಗೆ ಟಿಕೆಟ್ ನೀಡಿದ್ರೆ 150 ಕೋಟಿ ಹಣ ಮಾಡ್ತಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ನನಗೆ ಟಿಕೆಟ್ ಸಿಗದಿದ್ದರೇ, ಮುಂದೆ ಎಂಎಲ್​ಸಿ ಮಾಡಿ ಎಂದು ಸೋನಿಯಾ ಗಾಂಧಿಯವರಿಗೆ ಮನವಿ ಮಾಡುತ್ತೆನೆ ಎಂದಿದ್ದಾರೆ. ಜೊತೆಗೆ ಜನಾರ್ದನ ರೆಡ್ಡಿ ವಿರುದ್ಧ ಭೂಕಬಳಿಕೆ ಕುರಿತು ಅಮಿತ್ ಶಾ ಅವರಿಗೆ ದೂರು‌ ನೀಡುವುದಾಗಿ ಮಾಜಿ ಶಾಸಕ ಅನಿಲ್ ಲಾಡ್ ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ