AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರ ಬಳಿ ಕಮಿಷನ್ ಕೇಳಿದವರು ಲಕ್ವಾ ಹೊಡೆದು ಸಾಯುತ್ತಾರೆ: ಕೆಎಸ್ ಈಶ್ವರಪ್ಪ

ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್​ ವಿರುದ್ಧವೂ ಕಮಿಷನ್ ಆರೋಪ ಕೇಳಿಬರಲಾರಂಭಿಸಿದೆ. ಈ ಹಿಂದೆ ಅನೇಕ ಆರೋಪಗಳನ್ನು ಬಿಜೆಪಿ ಮಾಡತ್ತು. ಇದೀಗ ಮೈಸೂರು ದಸರಾದಲ್ಲಿ ಕಾರ್ಯಕ್ರಮಕ್ಕೆ ಅವಕಾಶ ಸಿಗಬೇಕಾದರೆ ಕಮಿಷನ್ ನೀಡಬೇಕು ಎಂದು ಅಧಿಕಾರಿಗಳು ಕೇಳಿದ್ದಾಗಿ ಸರೋದ್ ವಾದಕ ಪಿ.ಟಿ.ರಾಜೀವ್ ತಾರಾನಾಥ್ ಆರೋಪಿಸಿದ್ದು ಸುದ್ದಿಯಾಗಿದೆ. ಇದು ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ತನಿಖೆಗೆ ಕೆಎಸ್​ ಈಶ್ವರಪ್ಪ ಆಗ್ರಹಿಸಿದ್ದಾರೆ.

ಕಲಾವಿದರ ಬಳಿ ಕಮಿಷನ್ ಕೇಳಿದವರು ಲಕ್ವಾ ಹೊಡೆದು ಸಾಯುತ್ತಾರೆ: ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ
Basavaraj Yaraganavi
| Edited By: Rakesh Nayak Manchi|

Updated on: Oct 14, 2023 | 1:36 PM

Share

ಶಿವಮೊಗ್ಗ, ಅ.14: ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತೀಯ ಸರೋದ್​ ವಾದಕ ಪಂ. ರಾಜೀವ ತಾರಾನಾಥ ಅವರ ಬಳಿಯೇ ಅಧಿಕಾರಿಗಳು ಕಮಿಷನ್ ಕೇಳಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa), ಕಲಾವಿದರ ಬಳಿ ಕಮಿಷನ್ ಕೇಳಿದವರು ಮತ್ತು ಅವರ ಮಕ್ಕಳು ಲಕ್ವಾ ಹೊಡೆದು ಸಾಯುತ್ತಾರೆ ಎಂದಿದ್ದಾರೆ.

ಕಲಾವಿದರ ಬಳಿ ಲಂಚದ ಆಮಿಷದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ವಿರುದ್ಧ ತನಿಖೆ ಆಗಬೇಕು. ಕಲಾವಿದರ ಬಳಿ ಕಮೀಷನ್ ಕೇಳುವ ಮೂಲಕ ಅವಮಾನ ಮಾಡಿದ್ದಾರೆ. ಇವರು ಮತ್ತು ಇವರ ಮಕ್ಕಳು ಲಕ್ವಾ ಹೊಡೆದು ಸಾಯುತ್ತಾರೆ ಎಂದರು.

ಇದನ್ನೂ ಓದಿ: ಮೈಸೂರು ದಸರಾದಲ್ಲೂ ಭ್ರಷ್ಟಾಚಾರದ ಘಾಟು; ಸರೋದ್​ ವಾದಕ ಪಂ. ರಾಜೀವ್​ ತಾರಾನಾಥರ ಬಳಿ ಕಮಿಷನ್ ಕೇಳಿದ ಅಧಿಕಾರಿಗಳು

ಇದು ಮುಖ್ಯಮಂತ್ರಿ ಅವರ ಕ್ಷೇತ್ರ ಆಗಿದೆ. ಕಮಿಷನ್ ದಂಧೆಗೆ ಕಡಿವಾಣ ಹಾಕಬೇಕು. ಇಂತಹ ಉಡಾಫೆ ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ನಾನು ರಾಜ್ಯ ಎಂದೂ ಕಂಡಿರಲಿಲ್ಲ. ಅವನಿಗೆ ಆಯನೂರಿಗೆ ಬುದ್ಧಿ ಇಲ್ಲ. ನಿಮಗೂ ಬುದ್ಧಿ ಇಲ್ವಾ? ನಿಮಗೆ ಬುದ್ಧಿ ಇದೆ ಅಂದುಕೊಂಡಿರುವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ವಕ್ತಾಯ ಅಯನೂರು ಮಂಜುನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರು ದಸರಾ ವಿಶ್ವ ಪ್ರಸಿದ್ಧ ಆಗಿದೆ. ಈ ದಸರಾದಲ್ಲಿ ಯಾರೋ ನಾಲ್ವರು ಬಂದು ಮಹಿಷಾಸುರನ ದಸರಾ ಮಾಡಲು ಹೊರಟಿದ್ದರು. ಅವರನ್ನು ಒದ್ದು ಒಳಗೆ ಹಾಕಬೇಕಿತ್ತು. ಅವರನ್ನು ಪತ್ರಿಕಾಗೋಷ್ಠಿಯಲ್ಲೇ ಬಂಧಿಸಬೇಕಿತ್ತು. ಅದನ್ನೂ ಬಿಟ್ಟು ಚಾಮುಂಡಿ ಬೆಟ್ಟಕ್ಕೆ ನಿಷೇಧ ಹೇಳಿದ್ದು ತಪ್ಪು ಎಂದು ಈಶ್ವರಪ್ಪ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ