AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಯಾರ ಮನೆ ಕಾಯಬೇಕಿಲ್ಲ, ಭವಾನಿ ರೇವಣ್ಣ ಪಕ್ಷ ಸೇರುವುದಾದರೆ ಸ್ವಾಗತ: ಅಶ್ವತ್ಥ್ ನಾರಾಯಣ

ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಟಿಕೆಟ್ ಪಡೆಯಲು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಆದರೆ ಕುಮಾರಸ್ವಾಮಿ ಅವರು ಭವಾನಿ ಅವರಿಗೆ ಹಾಸನ ಸುರಕ್ಷಿತವಲ್ಲ ಎಂದಿದ್ದಾರೆ. ಆದರೆ ಬಿಜೆಪಿ ನಾಯಕ ಸಿ.ಟಿ.ರವಿ ಅವರು ಭವಾನಿ ರೇವಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ ಎಂದಿದ್ದರು.

ಬಿಜೆಪಿಯಲ್ಲಿ ಯಾರ ಮನೆ ಕಾಯಬೇಕಿಲ್ಲ, ಭವಾನಿ ರೇವಣ್ಣ ಪಕ್ಷ ಸೇರುವುದಾದರೆ ಸ್ವಾಗತ: ಅಶ್ವತ್ಥ್ ನಾರಾಯಣ
ಸಚಿವ ಅಶ್ವತ್ಥನಾರಾಯಣ ಮತ್ತು ಭವಾನಿ ರೇವಣ್ಣ
TV9 Web
| Edited By: |

Updated on:Jan 28, 2023 | 3:53 PM

Share

ಮೈಸೂರು: ನಮ್ಮ ಪಕ್ಷದಲ್ಲಿ ಯಾರ ಮನೆಯನ್ನೂ ಕಾಯಬೇಕಿಲ್ಲ, ಯಾರ ಗೇಟನ್ನು ಕಾಯಬೇಕಿಲ್ಲ, ಬಿಜೆಪಿಯಲ್ಲಿ ಮುಕ್ತವಾಗಿ ಬೆಳೆಯುವ ಅವಕಾಶವಿದೆ. ಹೀಗಾಗಿ ಜೆಡಿಎಸ್​ನ ಭವಾನಿ ರೇವಣ್ಣ ಅವರು ಬಿಜೆಪಿಗೆ ಬಂದರೆ ಹೃದಯಪೂರ್ವಕ ಸ್ವಾಗತ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr. C.N. Ashwathnarayan) ಹೇಳಿದ್ದಾರೆ. ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಟಿಕೆಟ್ ಪಡೆಯಲು ಪಟ್ಟು ಹಿಡಿದಿದ್ದಾರೆ. ಆದರೆ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಭವಾನಿ ಅವರಿಗೆ ಹಾಸನದಲ್ಲಿ ಕೊಡಲ್ಲ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ನಾಯಕ ಸಿ.ಟಿ.ರವಿ (C.T.Ravi) ಅವರು ಭವಾನಿ ರೇವಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ ಎಂದಿದ್ದರು. ಈ ಹೇಳಿಕೆಯನ್ನು ಸಮರ್ಥಿಸಿಕೊಂಡು ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದಾರೆ.

ಇನ್ನು, ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಮೇಲಿಂದ ಮೇಲೆ ಬರುತ್ತಿದ್ದಾರೆ. ಈ ಬಗ್ಗೆ ಲೇವಡಿ ಮಾಡಿದ ವಿಪಕ್ಷಗಳಿಗೆ ಟಾಂಗ್ ಕೊಟ್ಟ ಸಚಿವರು, ಕಾಂಗ್ರೆಸ್​ನವರು ಖಾಲಿಯಾಗಿದ್ದಾರೆ, ಅವರಿಗೆ ಹೇಳಲು ಏನೂ ಇಲ್ಲ. ಅದಕ್ಕಾಗಿ ಸುಖಾಸುಮ್ಮನೇ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ವಿಪಕ್ಷಗಳ ಕ್ಯಾತೆ ಇದ್ದೇ ಇದೆ. ನಮ್ಮದು ಅಭಿವೃದ್ಧಿ ಪರ ಸರ್ಕಾರ, ಅದಕ್ಕೆ ಜನ ಬೆಂಬಲಿಸುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್​ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಜೆಡಿಎಸ್‌ಗೆ ಮತ ನೀಡಿದರೆ ಪ್ರಯೋಜನವಿಲ್ಲ ಎಂದರು.

ಇದನ್ನೂ ಓದಿ: Hassan Politics: ಹಾಸನ ಟಿಕೆಟ್ ದೇವೇಗೌಡರು ಡಿಸೈಡ್ ಮಾಡ್ತಾರೆ; ಎಚ್​ಡಿಕೆಗೆ ಟಾಂಗ್​ ಕೊಟ್ಟ ಸೂರಜ್ ರೇವಣ್ಣ

ಅಭ್ಯರ್ಥಿ ಘೋಷಣೆಗೂ ಮುನ್ನವೇ ಹಾಸನದ ಸಿಂಹಾಸನಕ್ಕಾಗಿ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅಖಾಡಕ್ಕೆ ಇಳಿಯೋಕೆ ಸನ್ನದ್ಧರಾಗಿದ್ದಾರೆ. ಆದ್ರೆ, ಇತ್ತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಹಾಸನದಲ್ಲಿ ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ನಡುವೆ ಹೇಳಿಕೆ ನೀಡಿದ್ದ ಸಿ.ಟಿ.ರವಿ, ಭವಾನಿ ಅಕ್ಕ ನಮ್ಮ ಪಾರ್ಟಿ ಅಭ್ಯರ್ಥಿಯಾಗಲೆಂದು ನನ್ನ ಮನಸ್ಸಲ್ಲಿ ಆಸೆಯಿದೆ. ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದಿದ್ದರು. ಆದರೆ ಇಂದು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಿ.ಟಿ.ರವಿ, ಭವಾನಿ ರೇವಣ್ಣರನ್ನು ಬಿಜೆಪಿಗೆ ಆಹ್ವಾನ ಮಾಡಿದ್ದು ತಮಾಷೆಗೆ, ಅದನ್ನೇ ಗಂಭೀರವಾಗಿ ಪರಿಗಣಿಸಬಾರದು ಎಂದಿದ್ದಾರೆ.

ರಾಜಕೀಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sat, 28 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?