AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರ ಬ್ಯಾಂಕ್ ಚುನಾವಣೆ ಮುಂದೂಡಿಕೆ: ಜಿಟಿ ದೇವೇಗೌಡ ಕುಟುಂಬಕ್ಕೆ ಟಕ್ಕರ್ ಕೊಡಲು ಮುಂದಾದ್ರಾ ಸಿಎಂ ಸಿದ್ದರಾಮಯ್ಯ?

ಜಿ.ಟಿ.ದೇವೇಗೌಡ ಕುಟುಂಬಕ್ಕೆ ಟಕ್ಕರ್ ಕೊಡಲು ಮುಂದಾದ್ರಾ ಸಿಎಂ? ಸಹಕಾರ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಕುಟುಂಬದ ಹಿಡಿತ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್​ ಮಾಡಿದ್ರಾ? ಸಿದ್ದರಾಮಯ್ಯ ಸೂಚನೆ ಮೇರೆ ಜಿಲ್ಲಾಧಿಕಾರಿ ಚುನಾವಣೆ ಮುಂದೂಡಿದ್ರಾ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕೆ ಕಾರಣ ಮೈಸೂರು-ಚಾಮರಾಜನಗರ ಸಹಕಾರ ಬ್ಯಾಂಕ್ ಚುನಾವಣೆ ಮುಂದೂಡಿಕೆ.

ಸಹಕಾರ ಬ್ಯಾಂಕ್ ಚುನಾವಣೆ ಮುಂದೂಡಿಕೆ: ಜಿಟಿ ದೇವೇಗೌಡ ಕುಟುಂಬಕ್ಕೆ ಟಕ್ಕರ್ ಕೊಡಲು ಮುಂದಾದ್ರಾ ಸಿಎಂ ಸಿದ್ದರಾಮಯ್ಯ?
ಸಿದ್ದರಾಮಯ್ಯ, ಜಿಟಿ ದೇವೇಗೌಡ
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 19, 2023 | 10:08 AM

ಮೈಸೂರು, (ಸೆಪ್ಟೆಂಬರ್ 19): ಮೈಸೂರು-ಚಾಮರಾಜನಗರ(Mysuru Chamarajnagar) ಸಹಕಾರ ಬ್ಯಾಂಕ್ ಚುನಾವಣೆ(Cooperative Bank Election)  ಮುಂದೂಡಿಕೆ ಮಾಡಲಾಗಿದೆ. ಅಕ್ಟೋಬರ್ 4ರಂದು ಸಹಕಾರ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಆದ್ರೆ, ಇದೀಗ ಏಕಾಏಕಿ ಚುನಾವಣೆ ದಿನಾಂಕ ಮುಂದೂಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಿಯಮಾವಳಿಗಳ ಪ್ರಕಾರ ಮತದಾರ ಪಟ್ಟಿ ತಯಾರಿಸದ ಆರೋಪ ಹಾಗೂ ಬ್ಯಾಂಕ್​​​ಗಳಿಂದ ಡೆಲಿಗೇಟ್ ಫಾರಂ ಸಲ್ಲಿಸುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದ್ದಾರೆ. ಆದರೂ ಸಹ ಜಿಲ್ಲಾಧಿಕಾರಿ ನಡೆ ಹಲವು ಚರ್ಚೆಗೆ ಗ್ರಾಸವಾಗಿದೆ.

ಬ್ಯಾಂಕ್ ನ ಅಡಿಯಲ್ಲಿ ಇದೆ 1500 ಕ್ಕು ಹೆಚ್ಚು ಸಹಕಾರ ಸಂಘಗಳು ಇವೆ. ಸದ್ಯ ಶಾಸಕ ಜಿ.ಟಿ.ದೇವೇಗೌಡ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿದ್ದರೆ. ಪತ್ನಿ ಲಲಿತಾ ಜಿ.ಟಿ ದೇವೇಗೌಡ ಪತ್ತಿನ ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿದ್ದಾರೆ. ಇನ್ನು ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೈಸೂರು ಚಾಮರಾಜನಗರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಹೀಗೆ ಮೂವರು ಸಹಕಾರ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಕುಟುಂಬ ತನ್ನದೇ ಆದ ಹಿಡತ ಹೊಂದಿದೆ. ಹೀಗಾಗಿ ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಿ ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಗಾದಿಯಲ್ಲಿ ಕೂರಿಸಲ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದಿಢೀರ್ 3 ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಲು ಸಿದ್ದರಾಮಯ್ಯ , ಅ.4 ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿ ಕೆಲವೇ ದಿನ ಬಾಕಿ ಇರುವಾಗಲೇ ಏಕಾಏಕಿ ಚುನಾವಣೆ ಮುಂದೂಡಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಜಿ.ಟಿ.ದೇವೇಗೌಡ ಕುಟುಂಬಕ್ಕೆ ಟಕ್ಕರ್ ಕೊಡಲು ಮುಂದಾದ್ರಾ ಸಿಎಂ? ಸಹಕಾರ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಕುಟುಂಬದ ಹಿಡಿತ ತಪ್ಪಿಸಲು ಸಿಎಂ ಸಿದ್ದರಾಂಯ್ಯ ಪ್ಲ್ಯಾನ್​ ಮಾಡಿದ್ರಾ? ಸಿದ್ದರಾಮಯ್ಯ ಸೂಚನೆ ಮೇರೆ ಜಿಲ್ಲಾಧಿಕಾರಿ ಚುನಾವಣೆ ಮುಂದೂಡಿದ್ರಾ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:07 am, Tue, 19 September 23

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?