AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

Nalin Kumar Kateel: ಮೈಸೂರಿನಲ್ಲಿ ದೇಗುಲ ತೆರವು ವಿಚಾರವಾಗಿ ಸಿದ್ದರಮಯ್ಯ ಟೀಕೆ ವ್ಯಕ್ತಪಡಿಸಿದ್ದರು. ಇದೀಗ ಕಾಂಗ್ರೆಸ್ ಹಿರಿಯ ನಾಯಕನ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 18, 2021 | 2:43 PM

Share

ದಾವಣಗೆರೆ: ಸಿದ್ದರಾಮಯ್ಯರಿಂದ ಹಿಂದೂ ಧರ್ಮದ ಪಾಠ ಕಲಿಯಬೇಕಿಲ್ಲ. ಅವರು ಹಿಂದೂ ದೇಗುಲ ಒಡೆದ ಟಿಪ್ಪು ಸುಲ್ತಾನನ ಜಯಂತಿ ಆಚರಿಸಿದ್ದರು. ಟಿಪ್ಪು ಜಯಂತಿ ಮಾಡಿ ಸಿದ್ದರಾಮಯ್ಯ ಸಂತೋಷಪಟ್ಟಿದ್ದರು. ಜತೆಗೆ ಲಿಂಗಾಯತ ಸಮುದಾಯ ಒಡೆಯಲು ಹೊರಟಿದ್ದರು. ಅಂಥ ನಾಸ್ತಿಕರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರವಾಗಿ ಸಿದ್ದರಮಯ್ಯ ಟೀಕೆ ವ್ಯಕ್ತಪಡಿಸಿದ್ದರು. ಇದೀಗ ಕಾಂಗ್ರೆಸ್ ಹಿರಿಯ ನಾಯಕನ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ದೇಗುಲ ತೆರವು ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸ್ತೇವೆ. ಪುರಾತನ ದೇಗುಲ ತೆರವು ಆದ ಜಾಗದಲ್ಲಿ ಪುನರ್ ನಿರ್ಮಾಣ ಮಾಡುತ್ತೇವೆ. ಕಾನೂನು ವ್ಯಾಪ್ತಿಯಲ್ಲಿ ದೇಗುಲ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿರ್ಧಾರ ಮಾಡುತ್ತಾರೆ. ರೈತರ ಬೆಳೆಗೆ ಸೂಕ್ತ ಬೆಲೆ ಸಿಗುವ ಬಗ್ಗೆಯೂ ತೀರ್ಮಾನಿಸ್ತಾರೆ. ಬೆಲೆ ಏರಿಕೆ ಈಗ ಮಾತ್ರ ಇಲ್ಲ, ಹಿಂದೆಯೂ ಇತ್ತು ಎಂದು ಕಟೀಲ್ ಸಮಜಾಯಿಷಿ ನೀಡಿದ್ದಾರೆ.

ಈ ಮೊದಲು, ರಾಜ್ಯದಲ್ಲಿ ದೇವಾಲಯ ತೆರವು ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಸುಲ್ತಾನ್ ಜಯಂತಿ ಮಾಡುತ್ತಿರಲಿಲ್ಲ. ಲಿಂಗಾಯತರನ್ನು ಒಡೆಯುವ ಕೆಲಸ ಮಾಡುತ್ತಿರಲಿಲ್ಲ. ಇದರಲ್ಲಿ ಬ್ಯುಸಿ ಆಗಿದ್ದರಿಂದ ನಿಮಗೆ ಅರ್ಥ ಆಗಿಲ್ಲ. ಈಗ ಸುಮ್ಮನೆ ಪ್ರೀತಿ ವಿಶ್ವಾಸವಿದೆ ಎಂದು ಬಿಂಬಿಸಿಕೊಳ್ಳಬೇಡಿ ಎಂದು ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇಂದು ಅದೇ ಧಾಟಿಯಲ್ಲಿ ನಳಿನ್ ಕುಮಾರ್ ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

ಇದನ್ನೂ ಓದಿ: ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ

Published On - 2:33 pm, Sat, 18 September 21

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ