AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ​ವರ ಅವಧಿಯಲ್ಲಿ ಭಯೋತ್ಪಾದನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

ಗಾಂಧಿ ಹೆಸರಲ್ಲಿ ಕಾಂಗ್ರೆಸ್​ 60 ವರ್ಷ ದೇಶವನ್ನ ಆಳಿದೆ. ಆದರೆ ಗಾಂಧೀಜಿ ಕಂಡ ಕನಸು ನೆರವೇರಿಸಲಿಲ್ಲ. ಗಾಂಧೀಜಿ ‌ಕಂಡ ಗ್ರಾಮ ಸ್ವರಾಜ್ ಕಲ್ಪನೆ ನೆರವೇರಿಸಿಲ್ಲ ಎಂದು ಬೀದರ್ ​​ನಗರದಲ್ಲಿ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್​ನ​ವರ ಅವಧಿಯಲ್ಲಿ ಭಯೋತ್ಪಾದನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 20, 2021 | 10:24 PM

Share

ಬೀದರ್: ಕಾಂಗ್ರೆಸ್​ನ​ವರ ಅವಧಿಯಲ್ಲಿ ಭಯೋತ್ಪಾದನೆ ಆರಂಭವಾಗಿದೆ. ಯುಪಿಎ ಆಡಳಿತದಲ್ಲಿ ಸಿಕ್ಕಸಿಕ್ಕಲ್ಲಿ ಬಾಂಬ್ ಸ್ಫೋಟವಾಯಿತು. ಬಿಜೆಪಿ ಆಡಳಿತದಲ್ಲಿ ಭಯೋತ್ಪಾದನೆ ನಿಗ್ರಹವಾಗಿದೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆಗೆ ಆಗ್ರಹ ಎಂದು ಬೀದರ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಇಂದು (ನವೆಂಬರ್ 20) ಹೇಳಿಕೆ ನೀಡಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಕಾಲದಲ್ಲಿ ಭ್ರಷ್ಟಾಚಾರ ‌ನಡೆದಿಲ್ಲ. ಉಳಿದ ಎಲ್ಲರ ಅವಧಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಯುಪಿಎ ಆಡಳಿತ ಇದ್ದಾಗಲೆಲ್ಲಾ ಭ್ರಷ್ಟಾಚಾರ ನಡೆದಿದೆ. ಯುಪಿಎ ಅವಧಿಯ ಪ್ರಧಾನಿಗಳೆಲ್ಲ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್​ ಮನೆಯಲ್ಲಿದ್ದವರು ಈಗ ಬಿಜೆಪಿ ಮನೆಗೆ ಬರ್ತಿದ್ದಾರೆ. ಯಾಕೆಂದರೆ ಬಿಜೆಪಿಯ ಮೇಲೆ ಅವರಿಗೆ ನಂಬಿಕೆಯಿದೆ. ನಂಬಿಕೆ, ನೆಲೆಯಿದೆ ಎಂದು ಬಿಜೆಪಿ ಮನೆಗೆ ಬರುತ್ತಿದ್ದಾರೆ. ಕಾಂಗ್ರೆಸ್​ನವರು ಗಾಂಧಿ ಹೆಸರಲ್ಲಿ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಗಾಂಧಿ ಹೆಸರಲ್ಲಿ ಕಾಂಗ್ರೆಸ್​ 60 ವರ್ಷ ದೇಶವನ್ನ ಆಳಿದೆ. ಆದರೆ ಗಾಂಧೀಜಿ ಕಂಡ ಕನಸು ನೆರವೇರಿಸಲಿಲ್ಲ. ಗಾಂಧೀಜಿ ‌ಕಂಡ ಗ್ರಾಮ ಸ್ವರಾಜ್ ಕಲ್ಪನೆ ನೆರವೇರಿಸಿಲ್ಲ ಎಂದು ಬೀದರ್ ​​ನಗರದಲ್ಲಿ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದ್ದಾರೆ.

ವಿಪಕ್ಷವಾಗಿ ಕಾಂಗ್ರೆಸ್ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಬಿಟ್​ ಕಾಯಿನ್​ ಹಗರಣದ ಕುರಿತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರಗಳ ಮೇಲೆ ಅಟ್ಯಾಕ್​ ಮಾಡಲು ವಿಷಯಗಳಿಲ್ಲ. ಕಾಂಗ್ರೆಸ್​​ಗೆ ವಿಷಯಗಳು ಇಲ್ಲ. ವಿಪಕ್ಷವಾಗಿ ಕಾಂಗ್ರೆಸ್ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ. ಈವರೆಗೂ ಸಣ್ಣ ದಾಖಲೆ ಕೊಡಲು ಸಹ ಅವರಿಗೆ ಆಗಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಕೆ.ವಿ.ಕ್ಯಾಂಪಸ್​ನಲ್ಲಿ ಜನಸ್ವರಾಜ್ ಸಮಾವೇಶ ನಡೆದಿದೆ. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಚಿವರಾದ ಡಾ.ಕೆ. ಸುಧಾಕರ್, ಡಾ.ಅಶ್ವತ್ಥ್ ನಾರಾಯಣ, ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಹಲವರು ಉಪಸ್ಥಿತಿ ವಹಿಸಿದ್ದಾರೆ.

ಇದನ್ನೂ ಓದಿ: ಶಂಖನಾದವನ್ನು 15 ದಿನ ಮುಂದೂಡಿ, ಜನರ ನೆರವಿಗೆ ಬನ್ನಿ: ಬಿಜೆಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಟೀಕೆ

ಇದನ್ನೂ ಓದಿ: ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ