AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂದ್ರೆ, ಸಿದ್ದರಾಮಯ್ಯದು ‘ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್’- ಕಟೀಲು ವಾಗ್ದಾಳಿ

ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ. ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು.

ಪ್ರಧಾನಿ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಅಂದ್ರೆ, ಸಿದ್ದರಾಮಯ್ಯದು 'ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್'- ಕಟೀಲು ವಾಗ್ದಾಳಿ
ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲು
TV9 Web
| Edited By: |

Updated on:Oct 19, 2021 | 1:26 PM

Share

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ, ಸಿದ್ದರಾಮಯ್ಯದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಅಂತ ಹುಬ್ಬಳ್ಳಿಯಲ್ಲಿ ನಳಿನ್ ಕಟೀಲು ಹೇಳಿದ್ದಾರೆ. ಅವರಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ. ಡಿಕೆಶಿ-ಸಿದ್ದು ಜೋಡೆತ್ತಲ್ಲ, ಅವರು ಕಾಡೆತ್ತು. ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ. ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು. ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಅಂತ ಕಟೀಲು ತಿಳಿಸಿದ್ದಾರೆ.

ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ 2 ಹೋಳಾಗಿರುತ್ತದೆ ಎಂದು ಮಾತನಾಡಿದ ಕಟೀಲು, ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ. ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಅಂತ ಹೇಳಿದರು.

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಇತ್ತ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೊಗಿದ್ರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಗವಹಿಸಿ ಜೈಲಿಗೆ ಹೋದ್ರಾ? ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ? ಅವರಿಗೆ ಪಕ್ಷವೇ ಮುನ್ನಡೆಸಲು ಆಗುತ್ತಿಲ್ಲ, ದೇಶ ಮುನ್ನಡೆಸ್ತಾರಾ? ಅಂತ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

99 ಕೋಟಿ ಡೋಸ್ ಕೊವಿಡ್​ 19 ಲಸಿಕೆ ನೀಡಿಕೆ, 100 ಕೋಟಿ ಸಾಧನೆಗೆ ತುಂಬ ಸನಿಹ; ಫುಲ್​ ಖುಷಿಯಿಂದ ಟ್ವೀಟ್​ ಮಾಡಿದ ಆರೋಗ್ಯ ಸಚಿವ

Apple Event: ಭಾರತದಲ್ಲಿ ಆಪಲ್‌ ಮ್ಯಾಕ್‌ಬುಕ್‌ ಪ್ರೊ, ಏರ್​​ಪಾಡ್ಸ್ ಮಾಡೆಲ್‌ ಬಿಡುಗಡೆ: ಏನು ವಿಶೇಷತೆ?

Published On - 1:19 pm, Tue, 19 October 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ