AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಮಾಂಸ ಸೇವಿಸಿ ದೇಗುಲ ಪ್ರವೇಶಿಸಿದ ಆರೋಪ; ನಳಿನ್ ಕುಮಾರ್ ಕಟೀಲ್ ಕೊಟ್ಟ ಸ್ಪಷ್ಟನೆ ಹೀಗಿದೆ ನೋಡಿ

ಸಿಟಿ ರವಿ ಅವರು ಇತ್ತೀಚೆಗೆ ಶಾಸಕ ಸುನೀಲ್ ನಾಯ್ಕ ಅವರ ಮನೆಗೆ ಭೇಟಿ ನೀಡಿ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇರುವ ಹನುಮ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಅವರು ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು.

Ganapathi Sharma
|

Updated on: Feb 25, 2023 | 3:07 PM

Share

ಲಿಂಗಸುಗೂರು: ‘ಮಾಂಸ ತಿಂದಿದ್ದು ನಿಜ ಅಂತ ಶಾಸಕ ಸಿಟಿ ರವಿ (CT Ravi) ಅವರೇ ಹೇಳಿದ್ದಾರೆ. ಆದರೆ, ಮಾಂಸ ತಿಂದು ದೇಗುಲದ ಒಳ ಪ್ರವೇಶಿಸಿಲ್ಲ. ನಾಗಬನದ ಹೊರಗಡೆ ನಿಂತು ಕೈಮುಗಿದಿರುವುದಾಗಿ ಹೇಳಿದ್ದಾರೆ. ಆದರೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹಾಗಲ್ಲ. ಮಾಂಸ ತಿಂದು ನೇರವಾಗಿ ದೇಗುಲಕ್ಕೆ ಹೋಗಿದ್ದರು. ಅದರಲ್ಲೂ, ಮಾಂಸ ಸೇವಿಸಿ ಧರ್ಮಸ್ಥಳ ಕ್ಷೇತ್ರದ ಒಳಗಡೆ ತೆರಳಿದ್ದರು. ಇದುವೇ ಸಿದ್ದರಾಮಯ್ಯಗೂ ರವಿಗೂ ಇರುವ ವ್ಯತ್ಯಾಸ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಸಿಟಿ ರವಿ ಅವರು ಇತ್ತೀಚೆಗೆ ಶಾಸಕ ಸುನೀಲ್ ನಾಯ್ಕ ಅವರ ಮನೆಗೆ ಭೇಟಿ ನೀಡಿ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇರುವ ಹನುಮ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಅವರು ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬಳಿಕ ಸ್ಪಷ್ಟನೆ ನೀಡಿದ್ದ ಅವರು, ನಾನು ಮಾಂಸ ಸೇವಿಸಿದ್ದು ನಿಜ. ಆದರೆ, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ಮಾಂಸ ತಿನ್ನುವ ಜಾತಿಯಲ್ಲಿ ಹುಟ್ಟಿದ್ದೇನೆ. ಮಾಂಸ ಸೇವಿಸುತ್ತೇನೆ. ಆದರೆ ಮಾಂಸ ತಿಂದು ನಾನು ದೇವಸ್ಥಾನಕ್ಕೆ ಹೋಗಿಲ್ಲ. ಹೊಸದಾಗಿ ದೇವಸ್ಥಾನ ಕಟ್ಟಡ‌ ಕಟ್ಟಲಾಗಿತ್ತು, ಬೀಗ ಕೂಡ ಹಾಕಿದ್ದರು ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Siddaramaiah Press Meet: ಸದನದಲ್ಲಿ ಬೊಮ್ಮಾಯಿ ಸುಳ್ಳು ಹೇಳಿದ್ದಾರೆ; ಸಿಎಂ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಈ ವಿಚಾರವಾಗಿ ಸಿದ್ದರಾಮಯ್ಯ ಕೂಡ ರವಿ ಅವರ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು. ನನ್ನ ವಿರುದ್ಧ ಅಂದು ಮೀನು ತಿಂದು ದೇಗುಲಕ್ಕೆ ಹೋದೆ ಎಂದು ಅಪಪ್ರಚಾರ ಮಾಡಿದ್ದವರೆಲ್ಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ಅವರು ಹೇಳಿದ್ದರು.

ರೆಡ್ಡಿ ಪಕ್ಷ ನೋಡಿಕೊಳ್ತೇನೆ ಎಂದಿಲ್ಲ ಅಮಿತ್ ಶಾ

ಜನಾರ್ದನ ರೆಡ್ಡಿ ಅವರ ನೂತನ ಪಕ್ಷದ ಬಗ್ಗೆ ಆ ಪಕ್ಷದ ವಿಚಾರ ತಮಗೆ ಬಿಡಿ ಅಂತಾ ಅಮಿತ್ ಶಾ ಹೇಳಿದ್ದಾರೆ ಎನ್ನಲಾದ ವದಂತಿಯನ್ನು ಅವರು ನಿರಾಕರಿಸಿದ್ದಾರೆ. ಇದೆಲ್ಲಾ ತಪ್ಪು ಮಾಹಿತಿ. ರೆಡ್ಡಿ ಪಕ್ಷವನ್ನು ನೋಡಿಕೊಳ್ಳುತ್ತೇನೆಂದು ಅಮಿತ್ ಶಾ ಹೇಳಿಲ್ಲ. ಜನಾರ್ದನರೆಡ್ಡಿ ಕೆಆರ್​ಪಿಪಿಯ ಬಗ್ಗೆ ವರದಿ ಉಲ್ಲೇಖವಾಯಿತು. ಯೋಚನೆ ಮಾಡೋಣ ಅಂತ ಅಷ್ಟೇ ಅಮಿತ್ ಶಾ ಹೇಳಿದ್ದಾರೆ. ನೀವೇನು ತಲೆಕೆಡಿಸಿಕೊಳ್ಳಬೇಡಿ, ಕೆಲಸ ಮಾಡಿ ಅಂತಷ್ಟೇ ಹೇಳಿದ್ದಾರೆ. ಬದಲಿಗೆ, ರೆಡ್ಡಿ ಪಾರ್ಟಿ ವಿಚಾರ ತಮಗೆ ಬಿಡಿ ಅಂತ ಹೇಳಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು