AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಚುನಾವಣೆಯವರೆಗೆ ಬೊಮ್ಮಾಯಿಯವರೇ ಸಿಎಂ; ನಳಿನ್ ಕುಮಾರ್ ಕಟೀಲ್

ಸರ್ಕಾರದಲ್ಲಿ ಅರಾಜಕತೆ ಹುಟ್ಟಿಹಾಕಲು ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ನವರೇ ಇಂತಹ ಸುದ್ದಿಯನ್ನು ಹುಟ್ಟಿಸಿರಬಹುದು. ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವಿರುತ್ತೆ. ಸಿಎಂ ಬೊಮ್ಮಾಯಿಗೆ ಅನಾರೋಗ್ಯ ಇಲ್ಲ, ಕಾಲು ನೋವಿದೆ.

2023ರ ಚುನಾವಣೆಯವರೆಗೆ ಬೊಮ್ಮಾಯಿಯವರೇ ಸಿಎಂ; ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
TV9 Web
| Edited By: |

Updated on: Dec 25, 2021 | 11:19 AM

Share

ಬೆಂಗಳೂರು: ಬಸವರಾಜ ಬೊಮ್ಮಾಯಿ (Basavaraj Bommai) ಸಿಎಂ ಪಟ್ಟಕ್ಕೆ ಬಂದು ಒಂದು ವರ್ಷದೊಳಗೆ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ? ಎಂಬ ಅನುಮಾನ ಮೂಡಿದೆ. ಈ ಅನುಮಾನಕ್ಕೆ ಯಾವುದೇ ಹುದ್ದೆ, ಸ್ಥಾನ ಶಾಶ್ವತ ಅಲ್ಲ ಎಂಬ ಅವರ ಹೇಳಿಕೆ ಕಾರಣ. ಆದರೆ ರಾಜ್ಯ ಬಿಜೆಪಿ ನಾಯಕರು ಈ ಬಗ್ಗೆ ಸ್ಪಷ್ಟತೆ ನೀಡಿದ್ದಾರೆ. ಇನ್ನು ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel), 2023ರ ಚುನಾವಣೆಯವರೆಗೆ ಬೊಮ್ಮಾಯಿಯವರೇ ಸಿಎಂ. ಸಿಎಂ ಬದಲಾವಣೆ ಎಂಬುದು ಕೇವಲ ಕಪೋಲಕಲ್ಪಿತ ಅಂತ ಹೇಳಿದ್ದಾರೆ.

ಸರ್ಕಾರದಲ್ಲಿ ಅರಾಜಕತೆ ಹುಟ್ಟಿಹಾಕಲು ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್ನವರೇ ಇಂತಹ ಸುದ್ದಿಯನ್ನು ಹುಟ್ಟಿಸಿರಬಹುದು. ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವಿರುತ್ತೆ. ಸಿಎಂ ಬೊಮ್ಮಾಯಿಗೆ ಅನಾರೋಗ್ಯ ಇಲ್ಲ, ಕಾಲು ನೋವಿದೆ. ಅದಕ್ಕೆ ಸಿಎಂ ಬೊಮ್ಮಾಯಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗಾಗಿ ಅವರು ವಿದೇಶಕ್ಕೂ ಹೋಗುವುದಿಲ್ಲ ಅಂತ ಕಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಒಂದು ವೇಳೆ ಪುನಾರಚನೆಯಾದರೆ ನಮ್ಮ ಜತೆ ಚರ್ಚಿಸುತ್ತಾರೆ. ಚರ್ಚೆಯಾದ ಮರುದಿನವೇ ನಾನು ಮಾಹಿತಿ ನೀಡುತ್ತೇನೆ ಅಂತ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಅಭಿಪ್ರಾಯಪಟ್ಟರು.

ಇದೇ ವೇಳೆ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮತಾಂತರದಿಂದ ಸಮಾಜದಲ್ಲಿ ಕಲಹ ಉಂಟಾಗುತ್ತಿತ್ತು. ಅದಕ್ಕೆ ತಡೆಯೊಡ್ಡಲು ಕಾಯ್ದೆ ಜಾರಿ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಒಳ್ಳೆಯ ನಿರ್ಧಾರವನ್ನು ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ವಿರೋಧ ಮಾಡುವುದು ಸಹಜ. ಯಾವ ಯಾವಾಗ ಕಾಂಗ್ರೆಸ್ ಆಡಳಿತದಲ್ಲಿ ಇಲ್ಲವೋ ಆಗೆಲ್ಲ ಸರ್ಕಾರವನ್ನು ವಿರೋಧಿಸಿಕೊಂಡೇ ಬಂದಿದೆ. ಸಿದ್ದರಾಮಣ್ಣನೇ ಮತಾಂತರ ನಿಷೇಧ ಕಾಯ್ದೆಗೆ ಸಹಿ ಹಾಕಿದ್ದಾರೆ. ಅಧಿಕಾರ ಇದ್ದಾಗ ಒಂದು ಇಲ್ಲದಾಗ ಒಂದು. ಕಾಂಗ್ರೆಸ್ ಶಾಸಕರೇ ನಾವು ತಂದ ಕಾಯ್ದೆ ಪರವಾಗಿ ಇದ್ದಾರೆ ಅಂತ ಹೇಳಿದರು.

ಇದನ್ನೂ ಓದಿ

ರಾಯಚೂರಿನಲ್ಲಿ ವಾಹನಕ್ಕೆ ಸೈಡ್ ನೀಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ! ನಾಲ್ವರ ವಿರುದ್ಧ ಎಫ್ಐಆರ್ ದಾಖಲು

ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆ ಅಲ್ಲ; ಆಕೆಯ ಗಂಡನ ಕಾರುಬಾರು – ಮಿಡಿಗೇಶಿ ಗ್ರಾಮಸ್ಥರಿಂದ ಪ್ರತಿಭಟನೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್